AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪ್ರೇಯಸಿಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹೋಗಿ ಸಿಕ್ಕಿಬಿದ್ದ ಪ್ರೇಮಿ

ಹೊಸ ಉದ್ಯೋಗಕ್ಕೆ ಹೊರಡುವ ಮೊದಲು ಸೈಫ್ ಅಲಿ ತನ್ನ ಪ್ರೇಯಸಿಯನ್ನು ನೋಡಲು ಬಯಸಿದ್ದ. ಆದರೆ, ಆ ಊರಿನವರು ತನ್ನನ್ನು ಗುರುತು ಹಿಡಿಯಬಹುದು ಎಂಬ ಭಯದಿಂದ ಆತ ಬುರ್ಖಾ ಧರಿಸಿ ತನ್ನ ಗೆಳತಿಯನ್ನು ಭೇಟಿ ಮಾಡಲು ಹೋಗಿದ್ದ.

Shocking News: ಪ್ರೇಯಸಿಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹೋಗಿ ಸಿಕ್ಕಿಬಿದ್ದ ಪ್ರೇಮಿ
ಸಾಂದರ್ಭಿಕ ಚಿತ್ರImage Credit source: times now
TV9 Web
| Edited By: |

Updated on: Aug 18, 2022 | 8:12 PM

Share

ನವದೆಹಲಿ: ಇತ್ತೀಚೆಗಷ್ಟೇ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಲೈನ್​ಮ್ಯಾನ್ ಒಬ್ಬ ಇಡೀ ಊರಿನಲ್ಲಿ ಕರೆಂಟ್ ಲೈನ್ ಸಂಪರ್ಕ ಕಟ್ ಕಡಿತಗೊಳಿಸುತ್ತಿದ್ದ ಎಂಬ ವಿಷಯ ಬಯಲಾಗಿತ್ತು. ಅದರ ಬೆನ್ನಲ್ಲೇ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಭೇಟಿಯಾಗಲು ತನ್ನ ಗುರುತನ್ನು ಮರೆಮಾಚಲು ಬುರ್ಖಾ (Burqa) ಧರಿಸಿ ಹೋಗಿದ್ದ. ಆದರೆ, ಬುರ್ಖಾ ಧರಿಸಿ ಹೋಗಿದ್ದ ಆ 25 ವರ್ಷದ ಯುವಕನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಶಹಜಹಾನ್‌ಪುರದ ಸೈಫ್ ಅಲಿ ಎಂಬಾತ ಬುರ್ಖಾ ಧರಿಸಿ, ತನ್ನ ಪ್ರೇಯಸಿಯನ್ನು ನೋಡಲು ಹೋಗಿದ್ದ. ಆದರೆ, ಶಾಂತಿ ಭಂಗದ ಆರೋಪದಡಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ಉದ್ಯೋಗಕ್ಕೆ ಹೊರಡುವ ಮೊದಲು ಸೈಫ್ ಅಲಿ ತನ್ನ ಗೆಳತಿಯನ್ನು ಕೊನೆಯ ಬಾರಿಗೆ ಮೊಹಮದ್‌ಪುರ ಗ್ರಾಮದಲ್ಲಿ ನೋಡಲು ಬಯಸಿದ್ದ. ಆದರೆ ಆ ಪ್ರದೇಶದಲ್ಲಿ ಆತನಿಗೆ ಪರಿಚಿತ ವ್ಯಕ್ತಿಗಳು ಬಹಳ ಜನ ಇದ್ದುದರಿಂದ ಆತನಿಗೆ ಆಕೆಯನ್ನು ಖಾಸಗಿಯಾಗಿ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಆ ಊರಿನವರು ತನ್ನನ್ನು ಗುರುತು ಹಿಡಿಯಬಹುದು ಎಂಬ ಭಯದಿಂದ ಆತ ತನ್ನ ಗುರುತನ್ನು ಮರೆಮಾಚಲು ಬುರ್ಖಾವನ್ನು ಧರಿಸಿ ತನ್ನ ಗೆಳತಿಯನ್ನು ಭೇಟಿ ಮಾಡಲು ಹೋಗಿದ್ದ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಸಂಜೀವ್ ಬಾಜ್ಪೈ ಹೇಳಿದ್ದಾರೆ.

ಇದನ್ನೂ ಓದಿ: Viral Video: ಸ್ವಾತಂತ್ರ್ಯೋತ್ಸವದ ವೇಳೆ ನಾಗಿಣಿ ಡ್ಯಾನ್ಸ್​ ಮಾಡಿದ ಪೊಲೀಸರ ವಿಡಿಯೋ ವೈರಲ್; ಆಮೇಲೇನಾಯ್ತು?

ಆದರೆ, ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆತನನ್ನು ನೋಡಿದ ಜನರು ಬುರ್ಖಾ ತೆಗೆದು ಮುಖ ತೋರಿಸಲು ಕೇಳಿದರು. ಅದಕ್ಕೆ ಆತ ಒಪ್ಪದಿದ್ದಾಗ ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದರು. ಗ್ರಾಮಸ್ಥರ ದೂರಿಗೆ ಸ್ಪಂದಿಸಿದ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಆ ದಂಪತಿಗಳು 4 ವರ್ಷಗಳಿಂದ ಸಂಬಂಧದಲ್ಲಿದ್ದರು. ಆಕೆ ತನ್ನನ್ನು ಭೇಟಿಯಾಗಲು ಬುರ್ಖಾ ಧರಿಸಿ ಬರಲು ತನ್ನ ಪ್ರಿಯಕರನಿಗೆ ಸಲಹೆ ನೀಡಿದ್ದಳು. ಆಕೆಯ ಸಲಹೆಯಂತೆ ಬುರ್ಖಾ ಧರಿಸಿ ಹೋದವನು ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ