AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬಡ ರಿಕ್ಷಾ ಚಾಲಕನಿಗೆ 3.47 ಕೋಟಿ ರೂ. ಆದಾಯ ತೆರಿಗೆ ವಿಧಿಸಿದ ಐಟಿ ಅಧಿಕಾರಿಗಳು!

ಮಥುರಾದ ಬಕಲ್ಪುರ್ ಪ್ರದೇಶದ ಅಮರ್ ಕಾಲೋನಿಯ ನಿವಾಸಿ ಪ್ರತಾಪ ಸಿಂಗ್ ಹಲವು ವರ್ಷಗಳಿಂದ ಟಾಂಗಾ (ಎಳೆದುಕೊಂಡು ಹೋಗುವ ರಿಕ್ಷಾ) ನಡೆಸುತ್ತಿದ್ದಾರೆ. ಅವರಿಗೆ 3,47,54,896 ರೂ. ಆದಾಯ ತೆರಿಗೆ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದೆ.

Shocking News: ಬಡ ರಿಕ್ಷಾ ಚಾಲಕನಿಗೆ 3.47 ಕೋಟಿ ರೂ. ಆದಾಯ ತೆರಿಗೆ ವಿಧಿಸಿದ ಐಟಿ ಅಧಿಕಾರಿಗಳು!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 25, 2021 | 4:53 PM

Share

ಮಥುರಾ: ಉತ್ತರ ಪ್ರದೇಶ ಜಿಲ್ಲೆಯ ಮಥುರಾದಲ್ಲಿ ಬಡ ರಿಕ್ಷಾ (ಟಾಂಗಾ) ಚಾಲಕನೊಬ್ಬನಿಗೆ 3 ಕೋಟಿ ರೂ.ಗೂ ಹೆಚ್ಚು ಆದಾಯ ತೆರಿಗೆ ಪಾವತಿ ಮಾಡುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದಾರೆ. ಈ ನೋಟಿಸ್ ನೋಡಿ ಕಂಗಾಲಾದ ಟಾಂಗಾ ಚಾಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ಮಥುರಾದ ಬಕಲ್ಪುರ್ ಪ್ರದೇಶದ ಅಮರ್ ಕಾಲೋನಿಯ ನಿವಾಸಿ ಪ್ರತಾಪ ಸಿಂಗ್ ಹಲವು ವರ್ಷಗಳಿಂದ ಟಾಂಗಾ (ಎಳೆದುಕೊಂಡು ಹೋಗುವ ರಿಕ್ಷಾ) ನಡೆಸುತ್ತಿದ್ದಾರೆ. ಅವರಿಗೆ ಐಟಿ ಇಲಾಖೆಯಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ವಂಚನೆಯ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರತಾಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ನನಗೆ ಅಕ್ಟೋಬರ್ 19ರಂದು ಐಟಿ ಅಧಿಕಾರಿಗಳಿಂದ ಫೋನ್ ಬಂದಿತ್ತು. ನನಗೆ 3,47,54,896 ರೂ. ತೆರಿಗೆ ನೀಡುವಂತೆ ನೋಟಿಸ್ ನೀಡಲಾಗಿದೆ. ತಳ್ಳುವ ರಿಕ್ಷಾದಿಂದ ಬರುವ ಆದಾಯದಿಂದಲೇ ಬದುಕುತ್ತಿರುವ ನಮ್ಮ ಬಳಿ ಅಷ್ಟೊಂದು ಹಣ ಎಲ್ಲಿರುತ್ತದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಬ್ಯಾಂಕ್​ಗೆ ನೀಡಲು ಮಾರ್ಚ್ 15ರಂದು ತೇಜ್ ಪ್ರಕಾಶ್ ಉಪಾಧ್ಯಾಯ ಒಡೆತನದ ಬಕಲ್‌ಪುರದ ಜನ್ ಸುವಿಧಾ ಕೇಂದ್ರದಲ್ಲಿ ಪ್ಯಾನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದೆ. ಸಂಜಯ್ ಸಿಂಗ್ ಎಂಬುವವರಿಂದ ಪಾನ್ ಕಾರ್ಡ್​ ಜೆರಾಕ್ಸ್​ ಪ್ರತಿಯನ್ನು ತೆಗೆದುಕೊಂಡಿದ್ದೆ. ಆ ವೇಳೆ ಯಾರೋ ನನಗೆ ಮೋಸ ಮಾಡಿದ್ದಾರೆ ಎನಿಸುತ್ತಿದೆ. ನಾನು ಅನಕ್ಷರಸ್ಥನಾಗಿರುವುದರಿಂದ ನನಗೆ ಒರಿಜಿನಲ್ ಪಾನ್ ಕಾರ್ಡ್ ಮತ್ತು ಕಲರ್ ಜೆರಾಕ್ಸ್​ನ ಪಾನ್ ಕಾರ್ಡ್​ ನಡುವಿನ ವ್ಯತ್ಯಾಸ ಗೊತ್ತಾಗಿಲ್ಲ. ನನ್ನ ಒರಿಜಿನಲ್ ಪಾನ್ ಕಾರ್ಡನ್ನು ಆತನೇ ಇಟ್ಟುಕೊಂಡು ಯಾಮಾರಿಸಿದ್ದಾನೆ ಎಂದು ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ಅಕ್ಟೋಬರ್ 19 ರಂದು ತನಗೆ ಐಟಿ ಅಧಿಕಾರಿಗಳಿಂದ ಕರೆ ಬಂದಿತ್ತು. ನಾನು 3,47,54,896 ರೂ. ತೆರಿಗೆ ಪಾವತಿಸಬೇಕೆಂದು ನೋಟಿಸ್ ನೀಡಲಾಗಿದೆ. 2018-19ನೇ ಸಾಲಿಗೆ ವ್ಯಾಪಾರಿಯ ವಹಿವಾಟು 43,44,36,201 ರೂ. ಆಗಿದ್ದು, ಯಾರೋ ಆತನನ್ನು ಯಾಮಾರಿಸಿ ಆತನ ಹೆಸರಿನ ಮೇಲೆ ಜಿಎಸ್‌ಟಿ ಸಂಖ್ಯೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ