AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬಡ ರಿಕ್ಷಾ ಚಾಲಕನಿಗೆ 3.47 ಕೋಟಿ ರೂ. ಆದಾಯ ತೆರಿಗೆ ವಿಧಿಸಿದ ಐಟಿ ಅಧಿಕಾರಿಗಳು!

ಮಥುರಾದ ಬಕಲ್ಪುರ್ ಪ್ರದೇಶದ ಅಮರ್ ಕಾಲೋನಿಯ ನಿವಾಸಿ ಪ್ರತಾಪ ಸಿಂಗ್ ಹಲವು ವರ್ಷಗಳಿಂದ ಟಾಂಗಾ (ಎಳೆದುಕೊಂಡು ಹೋಗುವ ರಿಕ್ಷಾ) ನಡೆಸುತ್ತಿದ್ದಾರೆ. ಅವರಿಗೆ 3,47,54,896 ರೂ. ಆದಾಯ ತೆರಿಗೆ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದೆ.

Shocking News: ಬಡ ರಿಕ್ಷಾ ಚಾಲಕನಿಗೆ 3.47 ಕೋಟಿ ರೂ. ಆದಾಯ ತೆರಿಗೆ ವಿಧಿಸಿದ ಐಟಿ ಅಧಿಕಾರಿಗಳು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 25, 2021 | 4:53 PM

Share

ಮಥುರಾ: ಉತ್ತರ ಪ್ರದೇಶ ಜಿಲ್ಲೆಯ ಮಥುರಾದಲ್ಲಿ ಬಡ ರಿಕ್ಷಾ (ಟಾಂಗಾ) ಚಾಲಕನೊಬ್ಬನಿಗೆ 3 ಕೋಟಿ ರೂ.ಗೂ ಹೆಚ್ಚು ಆದಾಯ ತೆರಿಗೆ ಪಾವತಿ ಮಾಡುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದಾರೆ. ಈ ನೋಟಿಸ್ ನೋಡಿ ಕಂಗಾಲಾದ ಟಾಂಗಾ ಚಾಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ಮಥುರಾದ ಬಕಲ್ಪುರ್ ಪ್ರದೇಶದ ಅಮರ್ ಕಾಲೋನಿಯ ನಿವಾಸಿ ಪ್ರತಾಪ ಸಿಂಗ್ ಹಲವು ವರ್ಷಗಳಿಂದ ಟಾಂಗಾ (ಎಳೆದುಕೊಂಡು ಹೋಗುವ ರಿಕ್ಷಾ) ನಡೆಸುತ್ತಿದ್ದಾರೆ. ಅವರಿಗೆ ಐಟಿ ಇಲಾಖೆಯಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ವಂಚನೆಯ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರತಾಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ನನಗೆ ಅಕ್ಟೋಬರ್ 19ರಂದು ಐಟಿ ಅಧಿಕಾರಿಗಳಿಂದ ಫೋನ್ ಬಂದಿತ್ತು. ನನಗೆ 3,47,54,896 ರೂ. ತೆರಿಗೆ ನೀಡುವಂತೆ ನೋಟಿಸ್ ನೀಡಲಾಗಿದೆ. ತಳ್ಳುವ ರಿಕ್ಷಾದಿಂದ ಬರುವ ಆದಾಯದಿಂದಲೇ ಬದುಕುತ್ತಿರುವ ನಮ್ಮ ಬಳಿ ಅಷ್ಟೊಂದು ಹಣ ಎಲ್ಲಿರುತ್ತದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಬ್ಯಾಂಕ್​ಗೆ ನೀಡಲು ಮಾರ್ಚ್ 15ರಂದು ತೇಜ್ ಪ್ರಕಾಶ್ ಉಪಾಧ್ಯಾಯ ಒಡೆತನದ ಬಕಲ್‌ಪುರದ ಜನ್ ಸುವಿಧಾ ಕೇಂದ್ರದಲ್ಲಿ ಪ್ಯಾನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದೆ. ಸಂಜಯ್ ಸಿಂಗ್ ಎಂಬುವವರಿಂದ ಪಾನ್ ಕಾರ್ಡ್​ ಜೆರಾಕ್ಸ್​ ಪ್ರತಿಯನ್ನು ತೆಗೆದುಕೊಂಡಿದ್ದೆ. ಆ ವೇಳೆ ಯಾರೋ ನನಗೆ ಮೋಸ ಮಾಡಿದ್ದಾರೆ ಎನಿಸುತ್ತಿದೆ. ನಾನು ಅನಕ್ಷರಸ್ಥನಾಗಿರುವುದರಿಂದ ನನಗೆ ಒರಿಜಿನಲ್ ಪಾನ್ ಕಾರ್ಡ್ ಮತ್ತು ಕಲರ್ ಜೆರಾಕ್ಸ್​ನ ಪಾನ್ ಕಾರ್ಡ್​ ನಡುವಿನ ವ್ಯತ್ಯಾಸ ಗೊತ್ತಾಗಿಲ್ಲ. ನನ್ನ ಒರಿಜಿನಲ್ ಪಾನ್ ಕಾರ್ಡನ್ನು ಆತನೇ ಇಟ್ಟುಕೊಂಡು ಯಾಮಾರಿಸಿದ್ದಾನೆ ಎಂದು ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ಅಕ್ಟೋಬರ್ 19 ರಂದು ತನಗೆ ಐಟಿ ಅಧಿಕಾರಿಗಳಿಂದ ಕರೆ ಬಂದಿತ್ತು. ನಾನು 3,47,54,896 ರೂ. ತೆರಿಗೆ ಪಾವತಿಸಬೇಕೆಂದು ನೋಟಿಸ್ ನೀಡಲಾಗಿದೆ. 2018-19ನೇ ಸಾಲಿಗೆ ವ್ಯಾಪಾರಿಯ ವಹಿವಾಟು 43,44,36,201 ರೂ. ಆಗಿದ್ದು, ಯಾರೋ ಆತನನ್ನು ಯಾಮಾರಿಸಿ ಆತನ ಹೆಸರಿನ ಮೇಲೆ ಜಿಎಸ್‌ಟಿ ಸಂಖ್ಯೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್