AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗಂಡ ಸತ್ತ ಮೇಲೆ ತವರುಮನೆಯಲ್ಲಿದ್ದ ವಿಧವೆಗೆ ತಮ್ಮನ ಮೇಲೇ ಲವ್ ಆಯ್ತು; ಹೀಗೊಂದು ವಿಚಿತ್ರ ಪ್ರೇಮಕತೆ!

ಈ ಕತೆ ಕೇಳಿದರೆ ನಿಮಗೂ ಆಶ್ಚರ್ಯವಾಗಬಹುದು. ಅಕ್ಕ-ತಮ್ಮ ಮದುವೆಯಾದ ಉದಾಹರಣೆ ಎಲ್ಲಾದರೂ ಉಂಟಾ ಎಂದು ನೀವು ಹುಬ್ಬೇರಿಸಬಹುದು. ಆದರೆ, ಇಂಥದ್ದೊಂದು ಘಟನೆ ಬಿಹಾರದಲ್ಲಿ ನಡೆದಿದೆ.

Shocking News: ಗಂಡ ಸತ್ತ ಮೇಲೆ ತವರುಮನೆಯಲ್ಲಿದ್ದ ವಿಧವೆಗೆ ತಮ್ಮನ ಮೇಲೇ ಲವ್ ಆಯ್ತು; ಹೀಗೊಂದು ವಿಚಿತ್ರ ಪ್ರೇಮಕತೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 25, 2022 | 7:41 PM

Share

ಬಿಹಾರ: ಪ್ರೀತಿ ಕುರುಡು ಎಂಬ ಮಾತು ಬಹುತೇಕ ಸಂದರ್ಭಗಳಲ್ಲಿ ಅನ್ವಯವಾಗುತ್ತದೆ. ಆದರೆ, ಕುರುಡು ಪ್ರೀತಿ ಕೆಲವೊಮ್ಮೆ ನಮ್ಮ ಜೀವನವನ್ನೇ ಬದಲಾಯಿಸಿಬಿಡುತ್ತದೆ. ಆ ಬದಲಾವಣೆ ಒಳ್ಳೆಯದಾಗಿದ್ದರೆ ಏನೂ ತೊಂದರೆಯಾಗದು. ಒಂದುವೇಳೆ ಆ ಬದಲಾವಣೆ ಕೆಟ್ಟದಾಗಿದ್ದರೆ ಅದರಿಂದ ಬೇರೆಯವರಿಗೂ ತೊಂದರೆಯಾಗುವುದು ಸಹಜ. ಬಿಹಾರದ (Bihar) ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಒಂದು ವಿಚಿತ್ರ ಪ್ರೇಮಕಥೆ (Love Story) ನಡೆದಿದೆ. ವಿಧವೆ ಮಹಿಳೆಯೊಬ್ಬಳು ತನ್ನ ತಮ್ಮನನ್ನೇ ಪ್ರೀತಿ ಮಾಡಿ, ಮದುವೆಯಾಗಲು ನಿರ್ಧರಿಸಿದ್ದಾಳೆ. ಅಕ್ಕ-ತಮ್ಮ ಒಬ್ಬರನ್ನೊಬ್ಬರು ಬಹಳ ಪ್ರೀತಿಸುತ್ತಿದ್ದು, ಬದುಕಿದರೂ ಒಟ್ಟಿಗೆ, ಸತ್ತರೂ ಒಟ್ಟಿಗೇ ಎಂದು ನಿರ್ಧಾರ ಮಾಡಿಕೊಂಡಿದ್ದಾರೆ. ಆದರೆ, ಆ ಕುಟುಂಬದವರಿಗೆ ಈ ವಿಷಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಏನೇ ಆದರೂ ಈ ರೀತಿ ಸ್ವಂತ ಅಕ್ಕ-ತಮ್ಮ ಮದುವೆಯಾಗಲು ನಾವು ಬಿಡುವುದಿಲ್ಲ ಎಂದು ಪೋಷಕರು ಹಠ ಹಿಡಿದಿದ್ದಾರೆ.

ಈ ಕತೆ ಕೇಳಿದರೆ ನಿಮಗೂ ಆಶ್ಚರ್ಯವಾಗಬಹುದು. ಅಕ್ಕ-ತಮ್ಮ ಮದುವೆಯಾದ ಉದಾಹರಣೆ ಎಲ್ಲಾದರೂ ಉಂಟಾ ಎಂದು ನೀವು ಹುಬ್ಬೇರಿಸಬಹುದು. ಆದರೆ, ಇಂಥದ್ದೊಂದು ಘಟನೆ ಬಿಹಾರದಲ್ಲಿ ನಡೆದಿದೆ. ಆ ಕುಟುಂಬದರಿಗೆ ಅಕ್ಕ-ತಮ್ಮನ ಪ್ರೀತಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ. ಆದರೆ, ಅಕ್ಕ-ತಮ್ಮ ತಾವು ಹಿಡಿದ ಹಠ ಬಿಡಲಿಲ್ಲ. ಕೊನೆಗೆ ಏನು ಮಾಡುವುದು ಎಂದು ಗೊತ್ತಾಗದೆ ಪಂಚಾಯಿತಿ ಕರೆದು, ಈ ಸಮಸ್ಯೆಯನ್ನು ಇತ್ಯರ್ಥ ಮಾಡಲು ನಿರ್ಧರಿಸಲಾಯಿತು.

ಪಂಚಾಯಿತಿಯವರು ಅಕ್ಕ-ತಮ್ಮನಿಗೆ ಬುದ್ಧಿ ಹೇಳಿ ಮದುವೆಯಾಗದಂತೆ ಮನವೊಲಿಸಬಹುದು ಎಂಬುದು ಆ ಕುಟುಂಬಸ್ಥರು ಉದ್ದೇಶವಾಗಿತ್ತು. ಆದರೆ ಪ್ರೀತಿಯಲ್ಲಿರುವವರನ್ನು ಬೇರ್ಪಡಿಸುವುದು ಅಷ್ಟು ಸುಲಭವೇ? ಪಂಚಾಯಿತಿಯವರು ಈ ರೀತಿಯ ಸಂಬಂಧ ತಪ್ಪು ಎಂದು ತೀರ್ಪು ಕೊಟ್ಟಿದೆ. ಅಲ್ಲದೆ, ಈ ರೀತಿಯ ತಪ್ಪು ನಿರ್ಧಾರ ಕೈಗೊಳ್ಳಲು ಮುಂದಾದ ಆ ಅಕಕ್-ತಮ್ಮನ ತಲೆ ಬೋಳಿಸಲು ಪಂಚಾಯಿತಿ ಆದೇಶ ನೀಡಿದೆ. ಇದರಿಂದ ಆತಂಕಗೊಂಡ ಆ ಅಕ್ಕ-ತಮ್ಮ ತಮ್ಮ ಪ್ರೀತಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ರಕ್ಷಣೆಗಾಗಿ ಮೊರೆ ಹೋಗಿದ್ದಾರೆ.

ಅವರಿಬ್ಬರೂ ಮದುವೆಯಾಗಲು ತಮಗೆ ಬೇಕಾದವರನ್ನು ಕಾನೂನು ಪ್ರಕಾರ ವಯಸ್ಕರಾಗಿದ್ದಾರೆ. ರಕ್ತಸಂಬಂಧಿಗಳನ್ನು ಮದುವೆಯಾಗಬಾರದು ಎಂದು ಕಾನೂನು ಹೇಳಿಲ್ಲ. ಹೀಗಾಗಿ, ಈ ವಿಷಯದಲ್ಲಿ ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಯಾರಾದರೂ ಕಾನೂನನ್ನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ಆ ಕುಟುಂಬಸ್ಥರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಬಿಹಾರದ ಬೇಟಿಯಾ ಬನುಚಾಪುರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯ ಪತಿ 1 ವರ್ಷದ ಹಿಂದೆ ಮೃತಪಟ್ಟಿದ್ದ. ನಂತರ ಆಕೆ ತನ್ನ ಪೋಷಕರೊಂದಿಗೆ ವಾಸವಾಗಿದ್ದಳು. ಅಲ್ಲಿ ಆ ಮಹಿಳೆ ತನಗಿಂತ 4 ವರ್ಷದ ಸಣ್ಣವನಾದ ತನ್ನ ಕೊನೆಯ ತಮ್ಮನನ್ನು ಪ್ರೀತಿಸತೊಡಗಿದಳು. ಇದು ಅಕ್ಕ-ತಮ್ಮನ ನಡುವೆ ಇರುವ ಪ್ರೀತಿಯಾಗಿರಲಿಲ್ಲ. ಅವರಿಬ್ಬರೂ ಗಂಡ-ಹೆಂಡತಿಯಾಗಿ ಬದುಕಬೇಕೆಂದು ನಿರ್ಧರಿಸಿದ್ದರು. ಆ ಮಹಿಳೆ ಹಾಗೂ ಆಕೆಯ ತಮ್ಮ ಸುನಿಲ್ ಪೊಲೀಸರ ಮೊರೆ ಹೋಗಿದ್ದು, ಕಾನೂನುಪ್ರಕಾರ ಅವರಿಗೆ ಸಹಾಯ ಮಾಡುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Viral News: ಶಾಪಿಂಗ್ ಮಾಡುವಾಗ ಗಂಡ ಕಿರಿಕಿರಿ ಮಾಡ್ತಾನಾ?; ಈ ಮಾಲ್​ನಲ್ಲಿದೆ ಹಸ್ಬೆಂಡ್ ಸ್ಟೋರೇಜ್ ಪಾಡ್ಸ್

Shocking News: ಬೆಕ್ಕು ಕಚ್ಚಿ ಇಬ್ಬರು ಮಹಿಳೆಯರು ಸಾವು; ಆಂಧ್ರ ಪ್ರದೇಶದಲ್ಲೊಂದು ದಾರುಣ ಘಟನೆ

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ