AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

Crime News: ಮೇಘನಾಥನ್ ಅವರ ಹೆಂಡತಿ ತನ್ನ ಸಂಬಂಧಿಕರೊಂದಿಗೆ ಗುರುವಾರ ಸೀರಿಯಲ್ ನೋಡುತ್ತಿದ್ದರು. ಈ ವೇಳೆ ಅವರು ಮನೆ ಬಾಗಿಲನ್ನು ಹಾಕುವುದನ್ನು ಮರೆತಿದ್ದರು. ಜೋರಾಗಿ ವಾಲ್ಯೂಮ್ ಇಟ್ಟುಕೊಂಡು ಆ ಮಹಿಳೆಯರಿಬ್ಬರೂ ಧಾರಾವಾಹಿ ನೋಡುತ್ತಿದ್ದರು.

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 27, 2021 | 7:28 PM

Share

ಚೆನ್ನೈ: ಮಹಿಳೆಯರು ಧಾರಾವಾಹಿ ನೋಡುತ್ತಾ ಕೂತರೆ ಜಗತ್ತೇ ತಲೆಕೆಳಗಾದರೂ ಗೊತ್ತಾಗುವುದಿಲ್ಲ ಎಂಬುದು ಹಲವು ಪುರುಷರ ಆರೋಪ. ತಮಿಳುನಾಡಿನಲ್ಲಿ ನಡೆದಿರುವ ಘಟನೆಯೊಂದನ್ನು ಕೇಳಿದರೆ ನಿಮಗೂ ಇದು ಸತ್ಯ ಎನಿಸುವುದು ಗ್ಯಾರಂಟಿ. ಧಾರಾವಾಹಿ ನೋಡುತ್ತಾ ಕುಳಿತಿದ್ದ ಮಹಿಳೆಯರಿಬ್ಬರು ಜಗತ್ತಿನ ಅರಿವೇ ಇಲ್ಲದಂತೆ ಕುಳಿತಿದ್ದರು. ಅದನ್ನೇ ಬಂಡವಾಳ ಮಾಡಿಕೊಂಡ ನಾಲ್ವರು ಕಳ್ಳರು ಮನೆಯೊಳಗೆ ನುಗ್ಗಿ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯೊಳಗೆ ಕಳ್ಳರು ಬಂದು ದರೋಡೆ ಮಾಡಿದರೂ ಆ ಇಬ್ಬರು ಮಹಿಳೆಯರಿಗೆ ಗೊತ್ತಾಗಲೇ ಇಲ್ಲ.

ತಮಿಳುನಾಡಿನ ಕಾಂಚಿಪುರಂನಲ್ಲಿ ಗುರುವಾರ ರಾತ್ರಿ ಈ ವಿಚಿತ್ರವಾದ ಘಟನೆ ನಡೆದಿದೆ. ಆಡಿಟರ್ ಆಗಿರುವ ಮನೆ ಮಾಲೀಕ ಮೇಘನಾಥನ್ ಮನೆಯಲ್ಲಿರಲಿಲ್ಲ. ಆಗ ಮೇಘನಾಥನ್ ಅವರ ಹೆಂಡತಿ ತನ್ನ ಸಂಬಂಧಿಕರೊಂದಿಗೆ ಗುರುವಾರ ಸೀರಿಯಲ್ ನೋಡುತ್ತಿದ್ದರು. ಈ ವೇಳೆ ಅವರು ಮನೆ ಬಾಗಿಲನ್ನು ಹಾಕುವುದನ್ನು ಮರೆತಿದ್ದರು. ಜೋರಾಗಿ ವಾಲ್ಯೂಮ್ ಇಟ್ಟುಕೊಂಡು ಆ ಮಹಿಳೆಯರಿಬ್ಬರೂ ಧಾರಾವಾಹಿ ನೋಡುತ್ತಿದ್ದರು.

ಆಗ ಮನೆಯೊಳಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರಿಬ್ಬರು ತೆರೆದ ಬಾಗಿಲಿನಿಂದ ಸೈಲೆಂಟಾಗಿ ಒಳಗೆ ಹೋಗಿ ನೋಡಿದ್ದಾರೆ. ಆಗ ಹಾಲ್​ನಲ್ಲಿ ಟಿವಿ ನೋಡುತ್ತಾ ಇಬ್ಬರು ಮಹಿಳೆಯರು ಮೈಮರೆತಿರುವುದನ್ನು ನೋಡಿದರು. ಹಾಗೇ, ರೂಮಿನೊಳಗೆ ಹೋಗಿ ಅಲ್ಲಿದ್ದ ಹಣವನ್ನೆಲ್ಲ ದೋಚಿಕೊಂಡರು. ಆದರೆ, ವಾರ್ಡ್​ರೋಬ್​ನ ಕೀ ಎಲ್ಲಿದೆ ಎಂದು ಗೊತ್ತಾಗಲಿಲ್ಲ. ಹೀಗಾಗಿ, ಹಾಲ್​ಗೆ ಬಂದು ಟಿವಿ ನೋಡುತ್ತಿದ್ದ ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ, ಕೀ ಕೇಳಿದರು.

ಆಗಲೇ ತಮ್ಮ ಮನೆಯೊಳಗೆ ದರೋಡೆಕೋರರು ಬಂದಿದ್ದಾರೆ ಎಂಬ ವಿಷಯ ಆ ಇಬ್ಬರು ಮಹಿಳೆಯರಿಗೆ ಗೊತ್ತಾಗಿದ್ದು!. ಅವರಿಬ್ಬರನ್ನೂ ಕಟ್ಟಿ ಹಾಕಿ ವಾರ್ಡ್​ರೋಬ್​ನಲ್ಲಿದ್ದ ಒಡವೆ, ಹಣವನ್ನೆಲ್ಲ ದೋಚಿಕೊಂಡು ಹೋಗಿದ್ದಾರೆ. ಚಾಕು ತೋರಿಸಿ, ಹೆದರಿಸಿ ಮನೆಯೊಳಗಿನ 19 ಲಕ್ಷ ರೂ. ಮೌಲ್ಯದ ಒಡವೆ, ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ನಾಲ್ವರು ಬೈಕ್ ಗಳಲ್ಲಿ ಬಂದು, ಅವರಲ್ಲಿ ಇಬ್ಬರು ಗೇಟ್ ಬಳಿ ಕಾವಲು ಕಾಯುತ್ತಿದ್ದರು ಮತ್ತು ಇಬ್ಬರು ಮನೆಯೊಳಗೆ ನುಗ್ಗಿ ದರೋಡೆ ಮಾಡಿರುವುದು ಕಂಡು ಬಂದಿದೆ.

ಇದನ್ನೂ ಓದಿ: Shocking News: ಗರ್ಲ್​ಫ್ರೆಂಡ್ ಜೊತೆ ಗುಟ್ಟಾಗಿ ಮದುವೆಯಾಗಿದ್ದಕ್ಕೆ ಯುವಕನ ಗುಪ್ತಾಂಗವೇ ಕಟ್!

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?