AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

Crime News: ಮೇಘನಾಥನ್ ಅವರ ಹೆಂಡತಿ ತನ್ನ ಸಂಬಂಧಿಕರೊಂದಿಗೆ ಗುರುವಾರ ಸೀರಿಯಲ್ ನೋಡುತ್ತಿದ್ದರು. ಈ ವೇಳೆ ಅವರು ಮನೆ ಬಾಗಿಲನ್ನು ಹಾಕುವುದನ್ನು ಮರೆತಿದ್ದರು. ಜೋರಾಗಿ ವಾಲ್ಯೂಮ್ ಇಟ್ಟುಕೊಂಡು ಆ ಮಹಿಳೆಯರಿಬ್ಬರೂ ಧಾರಾವಾಹಿ ನೋಡುತ್ತಿದ್ದರು.

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 27, 2021 | 7:28 PM

Share

ಚೆನ್ನೈ: ಮಹಿಳೆಯರು ಧಾರಾವಾಹಿ ನೋಡುತ್ತಾ ಕೂತರೆ ಜಗತ್ತೇ ತಲೆಕೆಳಗಾದರೂ ಗೊತ್ತಾಗುವುದಿಲ್ಲ ಎಂಬುದು ಹಲವು ಪುರುಷರ ಆರೋಪ. ತಮಿಳುನಾಡಿನಲ್ಲಿ ನಡೆದಿರುವ ಘಟನೆಯೊಂದನ್ನು ಕೇಳಿದರೆ ನಿಮಗೂ ಇದು ಸತ್ಯ ಎನಿಸುವುದು ಗ್ಯಾರಂಟಿ. ಧಾರಾವಾಹಿ ನೋಡುತ್ತಾ ಕುಳಿತಿದ್ದ ಮಹಿಳೆಯರಿಬ್ಬರು ಜಗತ್ತಿನ ಅರಿವೇ ಇಲ್ಲದಂತೆ ಕುಳಿತಿದ್ದರು. ಅದನ್ನೇ ಬಂಡವಾಳ ಮಾಡಿಕೊಂಡ ನಾಲ್ವರು ಕಳ್ಳರು ಮನೆಯೊಳಗೆ ನುಗ್ಗಿ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯೊಳಗೆ ಕಳ್ಳರು ಬಂದು ದರೋಡೆ ಮಾಡಿದರೂ ಆ ಇಬ್ಬರು ಮಹಿಳೆಯರಿಗೆ ಗೊತ್ತಾಗಲೇ ಇಲ್ಲ.

ತಮಿಳುನಾಡಿನ ಕಾಂಚಿಪುರಂನಲ್ಲಿ ಗುರುವಾರ ರಾತ್ರಿ ಈ ವಿಚಿತ್ರವಾದ ಘಟನೆ ನಡೆದಿದೆ. ಆಡಿಟರ್ ಆಗಿರುವ ಮನೆ ಮಾಲೀಕ ಮೇಘನಾಥನ್ ಮನೆಯಲ್ಲಿರಲಿಲ್ಲ. ಆಗ ಮೇಘನಾಥನ್ ಅವರ ಹೆಂಡತಿ ತನ್ನ ಸಂಬಂಧಿಕರೊಂದಿಗೆ ಗುರುವಾರ ಸೀರಿಯಲ್ ನೋಡುತ್ತಿದ್ದರು. ಈ ವೇಳೆ ಅವರು ಮನೆ ಬಾಗಿಲನ್ನು ಹಾಕುವುದನ್ನು ಮರೆತಿದ್ದರು. ಜೋರಾಗಿ ವಾಲ್ಯೂಮ್ ಇಟ್ಟುಕೊಂಡು ಆ ಮಹಿಳೆಯರಿಬ್ಬರೂ ಧಾರಾವಾಹಿ ನೋಡುತ್ತಿದ್ದರು.

ಆಗ ಮನೆಯೊಳಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರಿಬ್ಬರು ತೆರೆದ ಬಾಗಿಲಿನಿಂದ ಸೈಲೆಂಟಾಗಿ ಒಳಗೆ ಹೋಗಿ ನೋಡಿದ್ದಾರೆ. ಆಗ ಹಾಲ್​ನಲ್ಲಿ ಟಿವಿ ನೋಡುತ್ತಾ ಇಬ್ಬರು ಮಹಿಳೆಯರು ಮೈಮರೆತಿರುವುದನ್ನು ನೋಡಿದರು. ಹಾಗೇ, ರೂಮಿನೊಳಗೆ ಹೋಗಿ ಅಲ್ಲಿದ್ದ ಹಣವನ್ನೆಲ್ಲ ದೋಚಿಕೊಂಡರು. ಆದರೆ, ವಾರ್ಡ್​ರೋಬ್​ನ ಕೀ ಎಲ್ಲಿದೆ ಎಂದು ಗೊತ್ತಾಗಲಿಲ್ಲ. ಹೀಗಾಗಿ, ಹಾಲ್​ಗೆ ಬಂದು ಟಿವಿ ನೋಡುತ್ತಿದ್ದ ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ, ಕೀ ಕೇಳಿದರು.

ಆಗಲೇ ತಮ್ಮ ಮನೆಯೊಳಗೆ ದರೋಡೆಕೋರರು ಬಂದಿದ್ದಾರೆ ಎಂಬ ವಿಷಯ ಆ ಇಬ್ಬರು ಮಹಿಳೆಯರಿಗೆ ಗೊತ್ತಾಗಿದ್ದು!. ಅವರಿಬ್ಬರನ್ನೂ ಕಟ್ಟಿ ಹಾಕಿ ವಾರ್ಡ್​ರೋಬ್​ನಲ್ಲಿದ್ದ ಒಡವೆ, ಹಣವನ್ನೆಲ್ಲ ದೋಚಿಕೊಂಡು ಹೋಗಿದ್ದಾರೆ. ಚಾಕು ತೋರಿಸಿ, ಹೆದರಿಸಿ ಮನೆಯೊಳಗಿನ 19 ಲಕ್ಷ ರೂ. ಮೌಲ್ಯದ ಒಡವೆ, ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ನಾಲ್ವರು ಬೈಕ್ ಗಳಲ್ಲಿ ಬಂದು, ಅವರಲ್ಲಿ ಇಬ್ಬರು ಗೇಟ್ ಬಳಿ ಕಾವಲು ಕಾಯುತ್ತಿದ್ದರು ಮತ್ತು ಇಬ್ಬರು ಮನೆಯೊಳಗೆ ನುಗ್ಗಿ ದರೋಡೆ ಮಾಡಿರುವುದು ಕಂಡು ಬಂದಿದೆ.

ಇದನ್ನೂ ಓದಿ: Shocking News: ಗರ್ಲ್​ಫ್ರೆಂಡ್ ಜೊತೆ ಗುಟ್ಟಾಗಿ ಮದುವೆಯಾಗಿದ್ದಕ್ಕೆ ಯುವಕನ ಗುಪ್ತಾಂಗವೇ ಕಟ್!

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?