AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೈಕ್​ಗಳಿಗೆ ಡಿಕ್ಕಿ ಹೊಡೆದು, ರಸ್ತೆಯ ಪಕ್ಕದವರ ಮೇಲೆ ಹರಿದ ಐಷಾರಾಮಿ ಕಾರು; ಶಾಕಿಂಗ್ ವಿಡಿಯೋ ವೈರಲ್

Car Accident Video: ಇಂದು ವೇಗವಾಗಿ ಬಂದ ಆಡಿ ಕಾರೊಂದು ರಸ್ತೆ ಬದಿಯಲ್ಲಿದ್ದ ಕೊಳೆಗೇರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ 9 ಜನರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ, ಒಬ್ಬರು ಸಾವನ್ನಪ್ಪಿದ್ದಾರೆ.

Shocking Video: ಬೈಕ್​ಗಳಿಗೆ ಡಿಕ್ಕಿ ಹೊಡೆದು, ರಸ್ತೆಯ ಪಕ್ಕದವರ ಮೇಲೆ ಹರಿದ ಐಷಾರಾಮಿ ಕಾರು; ಶಾಕಿಂಗ್ ವಿಡಿಯೋ ವೈರಲ್
ಬೈಕ್​ಗಳಿಗೆ ಕಾರು ಡಿಕ್ಕಿ ಹೊಡೆದ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 09, 2021 | 8:08 PM

ಜೋಧ್​ಪುರ: ರಸ್ತೆಗಿಳಿಯುತ್ತಿದ್ದಂತೆ ಪ್ರತಿಯೊಬ್ಬರಿಗೂ ಸಾವು ಅವರ ಬೆನ್ನ ಹಿಂದೆಯೇ ಇರುತ್ತದೆ. ಒಂದು ಕ್ಷಣ ನಾವು ಮೈಮರೆತರೂ ಒಂದೋ ನಮ್ಮ ಜೀವ ಹೋಗುತ್ತದೆ ಅಥವಾ ಬೇರೆಯವರ ಪ್ರಾಣ ಹೋಗುತ್ತದೆ. ರಾಜಸ್ಥಾನದ ಜೋಧ್‌ಪುರದಲ್ಲಿ (Jodhpur) ಐಷಾರಾಮಿ ಆಡಿ (Laxury Audi Car) ಕಾರೊಂದು ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Shocking Video) ವೈರಲ್ ಆಗಿದೆ.

ಈ ಭಯಾನಕ ಘಟನೆಯ ವಿಡಿಯೋದಲ್ಲಿ ಅಪಘಾತದ ಸಂಪೂರ್ಣ ದೃಶ್ಯ ದಾಖಲಾಗಿದೆ. ಟ್ರಾಫಿಕ್ ಇರುವ ರಸ್ತೆಯಲ್ಲಿ ಬರುತ್ತಿದ್ದ ಐಷಾರಾಮಿ ಕಾರು ಎದುರು ಹೋಗುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಆತನ ಬೈಕ್ ಮೇಲಕ್ಕೆ ಹಾರಿ ಕೆಳಗೆ ಬಿದ್ದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಡಿಕ್ಕಿ ಹೊಡೆಯುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ಬಳಿಕ ಇನ್ನೂ ಕೆಲವು ಬೈಕ್​ಗಳಿಗೆ ಡಿಕ್ಕಿ ಹೊಡೆದು, ಅಂಗಡಿಗೆ ಗುದ್ದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮೂಲಗಳ ಪ್ರಕಾರ ಆ ಕಾರಿನ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜಸ್ಥಾನದ ಜೋಧ್‌ಪುರದಲ್ಲಿ ವೇಗವಾಗಿ ಬಂದ ಕಾರೊಂದು ಏಮ್ಸ್ ರಸ್ತೆಯ ಕೊಳೆಗೇರಿಯಲ್ಲಿದ್ದ ವಾಹನಗಳಿಗೆ ಹಾಗೂ ಅಂಗಡಿಗಳಿಗೆ ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕೊಳೆಗೇರಿಯಲ್ಲಿ ವಾಸಿಸುವ ಇತರೆ 9 ಮಂದಿಗೆ ಗಂಭೀರ ಗಾಯಗಳಾಗಿವೆ. ಅವರು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವೇಗವಾಗಿ ಬಂದ ಆಡಿ ಕಾರೊಂದು ರಸ್ತೆ ಬದಿಯಲ್ಲಿದ್ದ ಕೊಳೆಗೇರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಏಮ್ಸ್ ಆಸ್ಪತ್ರೆಗೆ ತಲುಪಿ ನೊಂದ ಸಂತ್ರಸ್ತರು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ಆ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ, ವಾಹನವು ಜನನಿಬಿಡ ರಸ್ತೆಯಲ್ಲಿ ಬರುತ್ತಿರುವುದು ಕಂಡುಬಂದಿದೆ. ನಿಯಂತ್ರಣ ತಪ್ಪಿದ ವಾಹನವು ರಸ್ತೆಯಿಂದ ಹಾದು ಹೋಗುತ್ತಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಬದಿಯಲ್ಲಿರುವ ಕೊಳೆಗೇರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಶಿವಮೊಗ್ಗ: ಬೈಕ್- ಕೆಎಸ್​ಆರ್​ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ