AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪ್ರವಾಸಿ ಟ್ರಕ್ ಅನ್ನು ಸೊಂಡಿಲಿನಿಂದ ಎತ್ತಿಬಿಸಾಕಿದ ಆನೆ

ಸಫಾರಿ ಟ್ರಕ್ ಅನ್ನು ಆನೆಯೊಂದು ಅಡ್ಡಗಟ್ಟಿ ದಾಳಿ ಮಾಡಿದೆ. ಎದೆನಡುಕ ಹುಟ್ಟಿಸುವ ಈ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಪ್ರವಾಸಿ ಟ್ರಕ್ ಅನ್ನು ಸೊಂಡಿಲಿನಿಂದ ಎತ್ತಿಬಿಸಾಕಿದ ಆನೆ
shocking video
ಅಕ್ಷತಾ ವರ್ಕಾಡಿ
|

Updated on: Mar 23, 2024 | 12:50 PM

Share

ಜಂಗಲ್ ಸಫಾರಿಯ ವೇಳೆ ದಕ್ಷಿಣ ಆಫ್ರಿಕಾದ ಸಫಾರಿ ಟ್ರಕ್ ಅನ್ನು ಆನೆಯೊಂದು ಅಡ್ಡಗಟ್ಟಿ ದಾಳಿ ಮಾಡಿದೆ. ಎದೆನಡುಕ ಹುಟ್ಟಿಸುವ ಈ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೋಹಾನ್ಸ್‌ಬರ್ಗ್‌ನ ವಾಯುವ್ಯದಲ್ಲಿರುವ ಪಿಲಾನೆಸ್‌ಬರ್ಗ್ ರಾಷ್ಟ್ರೀಯ ಉದ್ಯಾನವನದಲ್ಲಿ ಮಾರ್ಚ್ 18 ರಂದು ಈ ಘಟನೆ ನಡೆದಿದೆ. ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದ ದಕ್ಷಿಣ ಆಫ್ರಿಕಾದ ಸ್ಥಳೀಯರೊಬ್ಬರು ಆನೆಯ ಸಮೀಪಕ್ಕೆ ಬಂದು ಟ್ರಕ್​​ ನಿಲ್ಲಿಸಿ, ಫೋಟೋ ತೆಗೆಯಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಆನೆ ಏಕಾಏಕಿ ಸೊಂಡಿಲಿನಿಂದ ಸಫಾರಿ ಟ್ರಕ್ ಮೇಲೆ ದಾಳಿ ಮಾಡಿದೆ.

ಈ ಘಟನೆಯ ಬಗ್ಗೆ ಅಲ್ಲಿನ ಪ್ರವಾಸಿಗರು ಹೇಳುವಂತೆ ಆನೆ ತುಂಬಾ ಕ್ರೂರವಾಗಿ ವರ್ತಿಸಿತು , ನಮಗೆ ಏನು ಮಾಡಬೇಕೆಂದು ತೋಚಲಿಲ್ಲ. ಆನೆ ದಾಳಿಯಿಂದ ಯಾರಿಗೂ ಗಾಯಗಳಾಗದಿದ್ದರೂ ಆತಂಕಕ್ಕೆ ಒಳಗಾದವರಿಗೆ ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಹೇಳಿರುವುದು ವರದಿಯಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಸದ್ಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @AfricaInFocus_ ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 19ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ಇಲ್ಲಿಯವೆರೆಗೆ ಮೂರು ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!