AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಕಾಳಿಂಗ ಸರ್ಪ ವ್ಯಕ್ತಿಯೊಬ್ಬನ ಮನೆಗೆ ನುಗ್ಗಿ ಆತನ ಬಾತ್​ರೂಂನೊಳಗೆ ಸೇರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ
ಬಾತ್​ರೂಂನೊಳಗೆ ನುಗ್ಗಿದ ಹಾವು
TV9 Web
| Edited By: |

Updated on: Apr 01, 2022 | 7:34 PM

Share

ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾಗಿರುವ ಕಾಳಿಂಗ ಸರ್ಪ (King Cobra) ಬೇರೆಲ್ಲ ಹಾವುಗಳಿಗಿಂತಲೂ ಉದ್ದವಾದ ಹಾವು. ಈ ಕಾಳಿಂಗ ಸರ್ಪ ಕಚ್ಚಿದರೆ ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ. ಕಾಳಿಂಗ ಸರ್ಪ ಸುಮಾರು 10ರಿಂದ 12 ಅಡಿ ಉದ್ದವಿರುತ್ತದೆ ಮತ್ತು ಸರಾಸರಿ 20 ಪೌಂಡ್​ನಷ್ಟು ತೂಕವಿರುತ್ತದೆ. ಕಾಳಿಂಗ ಸರ್ಪಗಳು ಸಾಮಾನ್ಯವಾಗಿ ಸಣ್ಣ ಪ್ರಾಣಿಗಳು ಅಥವಾ ಇತರ ಹಾವುಗಳನ್ನು ತಿನ್ನುತ್ತವೆ. ಅವುಗಳಿಗೆ ತೊಂದರೆ ಕೊಡದಿದ್ದರೆ ಕಾಳಿಂಗ ಸರ್ಪಗಳು ಮನುಷ್ಯರನ್ನು ಕಚ್ಚುವುದು ಬಹಳ ಅಪರೂಪ.

ಇದೇ ಕಾಳಿಂಗ ಸರ್ಪ ವ್ಯಕ್ತಿಯೊಬ್ಬನ ಮನೆಗೆ ನುಗ್ಗಿ ಆತನ ಬಾತ್​ರೂಂನೊಳಗೆ ಸೇರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ವ್ಯಕ್ತಿ ತನ್ನ ಬಾತ್​ರೂಮ್‌ನ ಬಾಗಿಲು ತೆರೆಯುತ್ತಿದ್ದಂತೆ ಕಮೋಡ್​ನ ಸುತ್ತ ತನ್ನ ಬಾಲವನ್ನು ಸುತ್ತಿ ಗೋಡೆಯ ಮೇಲೆ ಹರಿದಾಡಲು ಪ್ರಯತ್ನಿಸುತ್ತಿದ್ದ ದೊಡ್ಡ ಕಾಳಿಂಗ ಸರ್ಪವನ್ನು ವಿಡಿಯೋದಲ್ಲಿ ನೋಡಬಹುದು.

ಈ ಭಯಾನಕ ದೃಶ್ಯವು ಕಾಳಿಂಗ ಸರ್ಪ ಬಾತ್​ರೂಂನ ಸುತ್ತಲೂ ಚಲಿಸುತ್ತಿರುವುದನ್ನು ಮತ್ತು ಹೊರಬರಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಆಗ ಅಲ್ಲೇ ಇದ್ದ ಟಾಯ್ಲೆಟ್ ಪೇಪರ್ ಅನ್ನು ತನ್ನ ಮೈಗೆ ಸುತ್ತಿಕೊಳ್ಳುವ ಹಾವು ಗೋಡೆಯ ಮೇಲೆ ಹರಿದಾಡತೊಡಗುತ್ತದೆ. ಆ ಹಾವು ಹೊರಬರದಂತೆ ಆ ವ್ಯಕ್ತಿ ಬಾತ್​ರೂಮ್ ಬಾಗಿಲು ಮುಚ್ಚುವುದರೊಂದಿಗೆ ವೀಡಿಯೊ ಕೊನೆಗೊಳ್ಳುತ್ತದೆ. ಈ ಶಾಕಿಂಗ್ ವಿಡಿಯೋವನ್ನು 55,700ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಭಾರೀ ಶೇರ್ ಕೂಡ ಆಗಿದೆ.

ಇದನ್ನೂ ಓದಿ: Viral Video: ಹೊಲದಲ್ಲಿ ಕರಡಿ ವೇಷ ಹಾಕಿ ಓಡಾಡಿದರೆ ತಿಂಗಳಿಗೆ 15,000 ರೂ. ಸಂಬಳ!

Viral News: ಶಾಪಿಂಗ್ ಮಾಡುವಾಗ ಗಂಡ ಕಿರಿಕಿರಿ ಮಾಡ್ತಾನಾ?; ಈ ಮಾಲ್​ನಲ್ಲಿದೆ ಹಸ್ಬೆಂಡ್ ಸ್ಟೋರೇಜ್ ಪಾಡ್ಸ್

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ