AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಕಾಳಿಂಗ ಸರ್ಪ ವ್ಯಕ್ತಿಯೊಬ್ಬನ ಮನೆಗೆ ನುಗ್ಗಿ ಆತನ ಬಾತ್​ರೂಂನೊಳಗೆ ಸೇರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ
ಬಾತ್​ರೂಂನೊಳಗೆ ನುಗ್ಗಿದ ಹಾವು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 01, 2022 | 7:34 PM

ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾಗಿರುವ ಕಾಳಿಂಗ ಸರ್ಪ (King Cobra) ಬೇರೆಲ್ಲ ಹಾವುಗಳಿಗಿಂತಲೂ ಉದ್ದವಾದ ಹಾವು. ಈ ಕಾಳಿಂಗ ಸರ್ಪ ಕಚ್ಚಿದರೆ ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ. ಕಾಳಿಂಗ ಸರ್ಪ ಸುಮಾರು 10ರಿಂದ 12 ಅಡಿ ಉದ್ದವಿರುತ್ತದೆ ಮತ್ತು ಸರಾಸರಿ 20 ಪೌಂಡ್​ನಷ್ಟು ತೂಕವಿರುತ್ತದೆ. ಕಾಳಿಂಗ ಸರ್ಪಗಳು ಸಾಮಾನ್ಯವಾಗಿ ಸಣ್ಣ ಪ್ರಾಣಿಗಳು ಅಥವಾ ಇತರ ಹಾವುಗಳನ್ನು ತಿನ್ನುತ್ತವೆ. ಅವುಗಳಿಗೆ ತೊಂದರೆ ಕೊಡದಿದ್ದರೆ ಕಾಳಿಂಗ ಸರ್ಪಗಳು ಮನುಷ್ಯರನ್ನು ಕಚ್ಚುವುದು ಬಹಳ ಅಪರೂಪ.

ಇದೇ ಕಾಳಿಂಗ ಸರ್ಪ ವ್ಯಕ್ತಿಯೊಬ್ಬನ ಮನೆಗೆ ನುಗ್ಗಿ ಆತನ ಬಾತ್​ರೂಂನೊಳಗೆ ಸೇರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ವ್ಯಕ್ತಿ ತನ್ನ ಬಾತ್​ರೂಮ್‌ನ ಬಾಗಿಲು ತೆರೆಯುತ್ತಿದ್ದಂತೆ ಕಮೋಡ್​ನ ಸುತ್ತ ತನ್ನ ಬಾಲವನ್ನು ಸುತ್ತಿ ಗೋಡೆಯ ಮೇಲೆ ಹರಿದಾಡಲು ಪ್ರಯತ್ನಿಸುತ್ತಿದ್ದ ದೊಡ್ಡ ಕಾಳಿಂಗ ಸರ್ಪವನ್ನು ವಿಡಿಯೋದಲ್ಲಿ ನೋಡಬಹುದು.

ಈ ಭಯಾನಕ ದೃಶ್ಯವು ಕಾಳಿಂಗ ಸರ್ಪ ಬಾತ್​ರೂಂನ ಸುತ್ತಲೂ ಚಲಿಸುತ್ತಿರುವುದನ್ನು ಮತ್ತು ಹೊರಬರಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಆಗ ಅಲ್ಲೇ ಇದ್ದ ಟಾಯ್ಲೆಟ್ ಪೇಪರ್ ಅನ್ನು ತನ್ನ ಮೈಗೆ ಸುತ್ತಿಕೊಳ್ಳುವ ಹಾವು ಗೋಡೆಯ ಮೇಲೆ ಹರಿದಾಡತೊಡಗುತ್ತದೆ. ಆ ಹಾವು ಹೊರಬರದಂತೆ ಆ ವ್ಯಕ್ತಿ ಬಾತ್​ರೂಮ್ ಬಾಗಿಲು ಮುಚ್ಚುವುದರೊಂದಿಗೆ ವೀಡಿಯೊ ಕೊನೆಗೊಳ್ಳುತ್ತದೆ. ಈ ಶಾಕಿಂಗ್ ವಿಡಿಯೋವನ್ನು 55,700ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಭಾರೀ ಶೇರ್ ಕೂಡ ಆಗಿದೆ.

ಇದನ್ನೂ ಓದಿ: Viral Video: ಹೊಲದಲ್ಲಿ ಕರಡಿ ವೇಷ ಹಾಕಿ ಓಡಾಡಿದರೆ ತಿಂಗಳಿಗೆ 15,000 ರೂ. ಸಂಬಳ!

Viral News: ಶಾಪಿಂಗ್ ಮಾಡುವಾಗ ಗಂಡ ಕಿರಿಕಿರಿ ಮಾಡ್ತಾನಾ?; ಈ ಮಾಲ್​ನಲ್ಲಿದೆ ಹಸ್ಬೆಂಡ್ ಸ್ಟೋರೇಜ್ ಪಾಡ್ಸ್

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್