AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೆಂಜ್ ಕಾರ್ಖಾನೆಗೆ ಚಿರತೆ ಮರಿಯ ಸರ್​ಪ್ರೈಸ್​ ವಿಸಿಟ್!; 6 ಗಂಟೆ ಸತಾಯಿಸಿದ ಚಿರತೆಯ ವಿಡಿಯೋ ವೈರಲ್

Viral Video: ಬೆಳಗಿನ ಜಾವ ಐಷಾರಾಮಿ ಕಾರು ಬೆಂಜ್ ತಯಾರಿಕಾ ಕಾರ್ಖಾನೆ ಆವರಣದಲ್ಲಿ ಸಣ್ಣ ಚಿರತೆ ಮರಿಯೊಂದು ಓಡಾಡುತ್ತಿರುವುದನ್ನು ಗಮನಿಸಿದ ಕಾರ್ಮಿಕರು ಗಾಬರಿಗೊಂಡು ಎಲ್ಲರನ್ನೂ ಅಲರ್ಟ್​ ಮಾಡಿದರು.

Shocking Video: ಬೆಂಜ್ ಕಾರ್ಖಾನೆಗೆ ಚಿರತೆ ಮರಿಯ ಸರ್​ಪ್ರೈಸ್​ ವಿಸಿಟ್!; 6 ಗಂಟೆ ಸತಾಯಿಸಿದ ಚಿರತೆಯ ವಿಡಿಯೋ ವೈರಲ್
ಬೆಂಜ್ ಕಾರ್ಖಾನೆಯೊಳಗೆ ಸಿಲುಕಿದ ಚಿರತೆ
TV9 Web
| Edited By: |

Updated on: Mar 21, 2022 | 8:45 PM

Share

ಪುಣೆ: ಇದು ನೀವು ಊಹಿಸಲೂ ಸಾಧ್ಯವಾಗದ ಘಟನೆ. ಪುಣೆಯ ವಿಸ್ತಾರವಾದ ಮರ್ಸಿಡಿಸ್ ಬೆಂಜ್ ಕಾರ್ಖಾನೆಯೊಳಗೆ (Mercedes Benz factory) ಚಿರತೆಯೊಂದು ನುಗ್ಗಿ, ಆ ಫ್ಯಾಕ್ಟರಿ ತುಂಬ ಅಡ್ಡಾಡಿರುವ ವಿಡಿಯೋ ವೈರಲ್ (Video Viral) ಆಗಿದೆ. ಚಿರತೆ ಬಂದ ಪರಿಣಾಮದಿಂದ ಬೆಂಜ್ ಕಾರ್ಖಾನೆಯಲ್ಲಿ ಸುಮಾರು 6 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ವೈಲ್ಡ್​ಲೈಫ್ SOS ತಂಡದ ಸತತ ಪ್ರಯತ್ನದಿಂದ ಸುಮಾರು 2ರಿಂದ 3 ವರ್ಷದ ಗಂಡು ಚಿರತೆಯನ್ನು ಸೆರೆಹಿಡಿದು, ತೆಗೆದುಕೊಂಡು ಹೋಗಲಾಗಿದೆ. ಮರ್ಸಿಡಿಸ್ ಬೆಂಜ್ ಕಾರ್ಖಾನೆಯ ತುಂಬ ಓಡಾಡಿದ ಚಿರತೆಯನ್ನು ನೋಡಿ ಸಿಬ್ಬಂದಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೂಡ ಆಘಾತಗೊಂಡಿದ್ದಾರೆ.

ಬೆಳಗಿನ ಜಾವ ಐಷಾರಾಮಿ ಕಾರು ಬೆಂಜ್ ತಯಾರಿಕಾ ಕಾರ್ಖಾನೆ ಆವರಣದಲ್ಲಿ ಸಣ್ಣ ಚಿರತೆ ಮರಿಯೊಂದು ಓಡಾಡುತ್ತಿರುವುದನ್ನು ಗಮನಿಸಿದ ಚಕನ್ ಸ್ಥಾವರದ ಕಾರ್ಮಿಕರು ಗಾಬರಿಗೊಂಡು ಎಲ್ಲರನ್ನೂ ಅಲರ್ಟ್​ ಮಾಡಿದರು. ಚಿರತೆ ಒಳಗೆ ಬಂದಿರುವುದನ್ನು ನೋಡಿ ಗಾಬರಿಯಾದ ಅಲ್ಲಿದ್ದ ಸಿಬ್ಬಂದಿ ಓಡಿಹೋಗಿದ್ದಾರೆ. ನಂತರ ಮಹಾರಾಷ್ಟ್ರ ಅರಣ್ಯ ಇಲಾಖೆಯ ತಂಡವು ಸ್ಥಳಕ್ಕೆ ಆಗಮಿಸಿ 100 ಎಕರೆ ವಿಸ್ತೀರ್ಣದಲ್ಲಿರುವ ಬೆಂಜ್ ಉತ್ಪಾದನಾ ಘಟಕದ ಪರಿಸ್ಥಿತಿಯ ಉಸ್ತುವಾರಿ ವಹಿಸಿತು.

ಚಿರತೆಯನ್ನು ಬಲೆಗೆ ಬೀಳಿಸಲು ಮತ್ತು ರಕ್ಷಿಸಲು ಸಹಾಯ ಮಾಡಲು ಎಸ್​ಒಎಸ್​ ತಂಡವನ್ನು ಪಶುವೈದ್ಯರೊಂದಿಗೆ ಕರೆಸಲಾಯಿತು. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಪೊಲೀಸರ ಸಲಹೆಯ ಮೇರೆಗೆ ಸುತ್ತಮುತ್ತಲಿನ ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಸುಮಾರು ಆರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಡಾ. ಶುಭಂ ಪಾಟೀಲ್ ಮತ್ತು ಡಾ. ನಿಖಿಲ್ ಬಂಗಾರ್ ಅವರನ್ನೊಳಗೊಂಡ ತಂಡಗಳು ಬೆಂಜ್ ಕಾರ್ಖಾನೆಯ ಶೆಡ್ ಒಂದರ ಮಹಡಿಯಲ್ಲಿ ಅಡಗಿದ್ದ ಚಿರತೆಯನ್ನು ಪತ್ತೆ ಹಚ್ಚಿ ನಂತರ ಆ ಪ್ರದೇಶವನ್ನು ಭದ್ರಪಡಿಸಿದರು.

ನಂತರ ಎರಡು ರಕ್ಷಣಾ ತಂಡಗಳು ಕಾರ್ಖಾನೆಯೊಳಗೆ ಅಚಾನಕ್ಕಾಗಿ ಹೋಗಿ, ಹೆದರಿ ಕುಳಿತಿದ್ದ ಚಿರತೆಯನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾದವು. 6 ಗಂಟೆಗಳ ಕಾರ್ಯಾಚರಣೆಯ ಬಳಿಕ ಚಿರತೆಯನ್ನು ಸೆರೆಹಿಡಿಯಲಾಯಿತು. ನಂತರ ಚಿರತೆಯನ್ನು ಪಂಜರಕ್ಕೆ ಸ್ಥಳಾಂತರಿಸಲಾಯಿತು. ಆಮೇಲೆ ಅದನ್ನು ಕಾಡಿಗೆ ಬಿಡುವ ಮೊದಲು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು ಎಂದು ಎಂಎಫ್‌ಡಿ ರೇಂಜ್ ಫಾರೆಸ್ಟ್ ಆಫೀಸರ್ ಯೋಗೇಶ್ ಮಹಾಜನ್ ಹೇಳಿದ್ದಾರೆ.

ಇದನ್ನೂ ಓದಿ: Shocking News: ನಾಯಿಯನ್ನು ಕಟ್ಟಿಹಾಕಿ ಬಣ್ಣ ಎರಚಿ ಹೋಳಿ ಆಡಿದ ಯುವಕರು; ವಿಡಿಯೋ ವೈರಲ್

Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್