AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ರಾತ್ರಿ ವೇಳೆ ಮುಂಬೈನ ಮನೆ ಅಂಗಳಕ್ಕೆ ಬಂದ ಚಿರತೆ; ಶಾಕಿಂಗ್ ವಿಡಿಯೋ ಇಲ್ಲಿದೆ

ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಬಂದಿದ್ದು ಮತ್ತು ಹೋಗಿರುವ ವಿಡಿಯೋ ಸೆರೆಯಾಗಿದ್ದು, ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Shocking Video: ರಾತ್ರಿ ವೇಳೆ ಮುಂಬೈನ ಮನೆ ಅಂಗಳಕ್ಕೆ ಬಂದ ಚಿರತೆ; ಶಾಕಿಂಗ್ ವಿಡಿಯೋ ಇಲ್ಲಿದೆ
ಚಿರತೆಯ ವಿಡಿಯೋ
TV9 Web
| Edited By: |

Updated on: Jul 04, 2022 | 2:02 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನ (Mumbai) ಆರೆ ಕಾಲೋನಿಯಲ್ಲಿರುವ ಮನೆಯ ಅಂಗಳದಲ್ಲಿ ಚಿರತೆಯೊಂದು (Leopard)  ಅಡ್ಡಾಡುತ್ತಿರುವ ವಿಡಿಯೋ (Video Viral) ಇದೀಗ ವೈರಲ್ ಆಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ವಿಡಿಯೋ ಜೂನ್ 1ರ ತಾರೀಖಿನದ್ದಾಗಿದ್ದು, ಅಂದು ಬೆಳಗಿನ ಜಾವ 2.43ಕ್ಕೆ ಈ ಘಟನೆ ನಡೆದಿದೆ. ಒಂದು ನಿಮಿಷ 17 ಸೆಕೆಂಡ್ ಅವಧಿಯ ಈ ವಿಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಶಾಂತ ನಂದಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸುಶಾಂತ ನಂದಾ ಅವರ ಟ್ವೀಟ್ ವೈರಲ್ ಆಗಿದೆ.

ಈ ವೈರಲ್ ವಿಡಿಯೋ 1.6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಈ ವಿಡಿಯೋಗೆ ಪ್ರತಿಕ್ರಿಯಿಸಿದ ಟ್ವಿಟ್ಟರ್ ಬಳಕೆದಾರರು, ಕಳೆದ 50 ವರ್ಷಗಳಿಂದ ಆರೆ ಕಾಲೋನಿ ಮತ್ತು ಹತ್ತಿರದ ಪ್ರದೇಶಗಳ ಅರಣ್ಯ ಪ್ರದೇಶ ಕಡಿಮೆಯಾಗಿ, ಅಂಗಡಿ ಹಾಗೂ ಮನೆಗಳು ತಲೆಯೆತ್ತಿವೆ. ಕೈಗಾರಿಕಾ ಘಟಕಗಳು, ಅಪಾರ್ಟ್​ಮೆಂಟ್, ಹೋಟೆಲ್‌ಗಳು ಇತ್ಯಾದಿಗಳು ವನ್ಯಜೀವಿಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದಿದ್ದಾರೆ.

ಆರೆ ಕಾಲೋನಿ ಬಳಿ ಮತ್ತು ಸುತ್ತಮುತ್ತ ಚಿರತೆಗಳು ಆಗಾಗ ಕಾಣಿಸಿಕೊಂಡಿವೆ. ಕಳೆದ ತಿಂಗಳು, ಆರೆ ಕಾಲೋನಿ ಬಳಿಯಿರುವ ಮುಂಬೈನ ಗೋರೆಗಾಂವ್‌ನಲ್ಲಿ ಚಿರತೆಯೊಂದು ಶಾಲೆಗೆ ನುಗ್ಗಿತ್ತು. ಅರಣ್ಯ ಇಲಾಖೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಚಿರತೆಯನ್ನು ರಕ್ಷಿಸಲಾಯಿತು.

ಇದನ್ನೂ ಓದಿ: Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಹೊಸ ಸರ್ಕಾರವು ಪರಿಸರ ಸೂಕ್ಷ್ಮ ಪ್ರದೇಶವಾದ ಆರೆ ಕಾಲೋನಿ ಅರಣ್ಯದಲ್ಲಿ ವಿವಾದಿತ ಮುಂಬೈ ಮೆಟ್ರೋ ಕಾರ್-ಶೆಡ್ ಅನ್ನು ಪುನರುಜ್ಜೀವನಗೊಳಿಸಲು ನಿರ್ಧರಿಸಿದ ಕೆಲವೇ ದಿನಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಬಂದಿದ್ದು ಮತ್ತು ಹೋಗಿರುವ ವಿಡಿಯೋ ಸೆರೆಯಾಗಿದ್ದು, ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಪರಿಸರವಾದಿಗಳು ಮತ್ತು ಮುಂಬೈನ ಜನರು ಆರೆ ಕಾಲೋನಿಯಲ್ಲಿ ಕಾರ್ ಶೆಡ್ ಅನ್ನು ಬಲವಾಗಿ ಪ್ರತಿಭಟಿಸಿದರು. 2019ರ ಅಕ್ಟೋಬರ್‌ನಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದರು. ಆದರೆ, ಒಂದೇ ರಾತ್ರಿಯಲ್ಲಿ 2,000ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಯಿತು. ಇದಕ್ಕೆ ಪೊಲೀಸ್ ಬೆಂಬಲವನ್ನೂ ಪಡೆಯಲಾಗಿತ್ತು.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ