AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ರಾತ್ರಿ ವೇಳೆ ಮುಂಬೈನ ಮನೆ ಅಂಗಳಕ್ಕೆ ಬಂದ ಚಿರತೆ; ಶಾಕಿಂಗ್ ವಿಡಿಯೋ ಇಲ್ಲಿದೆ

ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಬಂದಿದ್ದು ಮತ್ತು ಹೋಗಿರುವ ವಿಡಿಯೋ ಸೆರೆಯಾಗಿದ್ದು, ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Shocking Video: ರಾತ್ರಿ ವೇಳೆ ಮುಂಬೈನ ಮನೆ ಅಂಗಳಕ್ಕೆ ಬಂದ ಚಿರತೆ; ಶಾಕಿಂಗ್ ವಿಡಿಯೋ ಇಲ್ಲಿದೆ
ಚಿರತೆಯ ವಿಡಿಯೋ
TV9 Web
| Edited By: |

Updated on: Jul 04, 2022 | 2:02 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನ (Mumbai) ಆರೆ ಕಾಲೋನಿಯಲ್ಲಿರುವ ಮನೆಯ ಅಂಗಳದಲ್ಲಿ ಚಿರತೆಯೊಂದು (Leopard)  ಅಡ್ಡಾಡುತ್ತಿರುವ ವಿಡಿಯೋ (Video Viral) ಇದೀಗ ವೈರಲ್ ಆಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ವಿಡಿಯೋ ಜೂನ್ 1ರ ತಾರೀಖಿನದ್ದಾಗಿದ್ದು, ಅಂದು ಬೆಳಗಿನ ಜಾವ 2.43ಕ್ಕೆ ಈ ಘಟನೆ ನಡೆದಿದೆ. ಒಂದು ನಿಮಿಷ 17 ಸೆಕೆಂಡ್ ಅವಧಿಯ ಈ ವಿಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಶಾಂತ ನಂದಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸುಶಾಂತ ನಂದಾ ಅವರ ಟ್ವೀಟ್ ವೈರಲ್ ಆಗಿದೆ.

ಈ ವೈರಲ್ ವಿಡಿಯೋ 1.6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಈ ವಿಡಿಯೋಗೆ ಪ್ರತಿಕ್ರಿಯಿಸಿದ ಟ್ವಿಟ್ಟರ್ ಬಳಕೆದಾರರು, ಕಳೆದ 50 ವರ್ಷಗಳಿಂದ ಆರೆ ಕಾಲೋನಿ ಮತ್ತು ಹತ್ತಿರದ ಪ್ರದೇಶಗಳ ಅರಣ್ಯ ಪ್ರದೇಶ ಕಡಿಮೆಯಾಗಿ, ಅಂಗಡಿ ಹಾಗೂ ಮನೆಗಳು ತಲೆಯೆತ್ತಿವೆ. ಕೈಗಾರಿಕಾ ಘಟಕಗಳು, ಅಪಾರ್ಟ್​ಮೆಂಟ್, ಹೋಟೆಲ್‌ಗಳು ಇತ್ಯಾದಿಗಳು ವನ್ಯಜೀವಿಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದಿದ್ದಾರೆ.

ಆರೆ ಕಾಲೋನಿ ಬಳಿ ಮತ್ತು ಸುತ್ತಮುತ್ತ ಚಿರತೆಗಳು ಆಗಾಗ ಕಾಣಿಸಿಕೊಂಡಿವೆ. ಕಳೆದ ತಿಂಗಳು, ಆರೆ ಕಾಲೋನಿ ಬಳಿಯಿರುವ ಮುಂಬೈನ ಗೋರೆಗಾಂವ್‌ನಲ್ಲಿ ಚಿರತೆಯೊಂದು ಶಾಲೆಗೆ ನುಗ್ಗಿತ್ತು. ಅರಣ್ಯ ಇಲಾಖೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಚಿರತೆಯನ್ನು ರಕ್ಷಿಸಲಾಯಿತು.

ಇದನ್ನೂ ಓದಿ: Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಹೊಸ ಸರ್ಕಾರವು ಪರಿಸರ ಸೂಕ್ಷ್ಮ ಪ್ರದೇಶವಾದ ಆರೆ ಕಾಲೋನಿ ಅರಣ್ಯದಲ್ಲಿ ವಿವಾದಿತ ಮುಂಬೈ ಮೆಟ್ರೋ ಕಾರ್-ಶೆಡ್ ಅನ್ನು ಪುನರುಜ್ಜೀವನಗೊಳಿಸಲು ನಿರ್ಧರಿಸಿದ ಕೆಲವೇ ದಿನಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಬಂದಿದ್ದು ಮತ್ತು ಹೋಗಿರುವ ವಿಡಿಯೋ ಸೆರೆಯಾಗಿದ್ದು, ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಪರಿಸರವಾದಿಗಳು ಮತ್ತು ಮುಂಬೈನ ಜನರು ಆರೆ ಕಾಲೋನಿಯಲ್ಲಿ ಕಾರ್ ಶೆಡ್ ಅನ್ನು ಬಲವಾಗಿ ಪ್ರತಿಭಟಿಸಿದರು. 2019ರ ಅಕ್ಟೋಬರ್‌ನಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದರು. ಆದರೆ, ಒಂದೇ ರಾತ್ರಿಯಲ್ಲಿ 2,000ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಯಿತು. ಇದಕ್ಕೆ ಪೊಲೀಸ್ ಬೆಂಬಲವನ್ನೂ ಪಡೆಯಲಾಗಿತ್ತು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ