AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಪೊಲೀಸ್ ಎದುರೇ ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ; ವಿಡಿಯೋ ವೈರಲ್

Viral Video | ಹೆಚ್ಚು ಬಾಡಿಗೆ ಕೇಳಿದನೆಂದು ಕೋಪಗೊಂಡ ಮಹಿಳೆ ಆಟೋ ಚಾಲಕನ ಶರ್ಟ್​ ಹಿಡಿದು ಎಳೆದಾಡಿದ್ದಾಳೆ. ಆತ ತಪ್ಪಿಸಿಕೊಳ್ಳಲು ನೋಡಿದಾಗ ಪೊಲೀಸ್ ಎದುರಲ್ಲೇ ಚಪ್ಪಲಿಯಿಂದ ಆ ಆಟೋ ಚಾಲಕನಿಗೆ ಹೊಡೆದಿದ್ದಾಳೆ.

Shocking Video: ಪೊಲೀಸ್ ಎದುರೇ ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ; ವಿಡಿಯೋ ವೈರಲ್
ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 23, 2021 | 6:24 PM

ಲಕ್ನೋ: ಕೆಲವು ದಿನಗಳ ಹಿಂದಷ್ಟೇ ಲಕ್ನೋದಲ್ಲಿ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಗೆ ಯುವತಿಯೊಬ್ಬಳು ಥಳಿಸಿರುವ ವಿಡಿಯೋ ಭಾರೀ ವೈರಲ್ ಆಗಿತ್ತು. ಟ್ರಾಫಿಕ್ ಸಿಗ್ನಲ್​ನಲ್ಲಿ ಕ್ಯಾಬ್ ಚಾಲಕನನ್ನು ಕೆಳಗೆ ಇಳಿಸಿ, ಆತನಿಗೆ ಒದ್ದು, ಕೊರಳಪಟ್ಟಿ ಹಿಡಿದು ಕಪಾಲಕ್ಕೆ ಬಾರಿಸಿರುವ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಆಕೆಯನ್ನು ಪೊಲೀಸರು ಬಂಧಿಸಿದ್ದರು. ಅದರ ಬೆನ್ನಲ್ಲೇ ಲಕ್ನೋದ ಆಟೋ ಚಾಲಕನಿಗೆ ರಸ್ತೆ ಮಧ್ಯದಲ್ಲೇ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.

ಆ. 21ರಂದು ಈ ಘಟನೆ ನಡೆದಿದ್ದು, ಆಟೋದಲ್ಲಿ ಪ್ರಯಾಣಿಸಿದ ಬಳಿಕ ಹಣದ ವಿಚಾರಕ್ಕೆ ಮಹಿಳೆ ಮತ್ತು ಆಟೋ ಚಾಲಕನ ನಡುವೆ ಜಗಳವಾಗಿದೆ. ಮೀಟರ್​ಗಿಂತ ಹೆಚ್ಚು ಹಣ ಕೇಳುತ್ತಿದ್ದಾನೆ ಎಂದು ಆ ಮಹಿಳೆ ಜೋರಾಗಿ ಕಿರುಚಾಡಿ, ಜಗಳವಾಡಿದ್ದಾಳೆ. ಬಳಿಕ, ತನ್ನ ಚಪ್ಪಲಿ ಬಿಚ್ಚಿ ಅದರಲ್ಲೇ ಆತನಿಗೆ ಹೊಡೆದಿದ್ದಾಳೆ. ಇದನ್ನು ಸುತ್ತಮುತ್ತಲಿದ್ದವರು ವಿಡಿಯೋ ಮಾಡಿಕೊಂಡಿದ್ದಾರೆ. ಲಕ್ನೋದ ತೆದಿ ಪುಲಿಯ ಮೇನ್ ಚೌಕ್​ದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯ ಗಲಾಟೆ ಹೆಚ್ಚಾಗುತ್ತಿದ್ದಂತೆ ಆ ಆಟೋ ಚಾಲಕ ಅಲ್ಲೇ ಇದ್ದ ಪೊಲೀಸರ ಮೊರೆ ಹೋಗಿದ್ದಾನೆ. ಈ ಗಲಾಟೆಯನ್ನು ಸರಿಪಡಿಸುವಂತೆ ಆ ಪೊಲೀಸ್ ಬಳಿ ಆತ ಮನವಿ ಮಾಡಿದ್ದಾನೆ. ಆ ಮಹಿಳೆಯದೇ ತಪ್ಪು ಎಂದು ವಾದಿಸಿದ್ದಾನೆ. ಇದರಿಂದ ಕೋಪಗೊಂಡ ಆ ಮಹಿಳೆ ಆತನ ಶರ್ಟ್​ ಹಿಡಿದು ಎಳೆದಾಡಿದ್ದಾಳೆ. ಆತ ತಪ್ಪಿಸಿಕೊಳ್ಳಲು ನೋಡಿದಾಗ ಪೊಲೀಸ್ ಎದುರಲ್ಲೇ ಚಪ್ಪಲಿ ಬಿಚ್ಚಿ ಆ ಆಟೋ ಚಾಲಕನಿಗೆ ಹೊಡೆದಿದ್ದಾಳೆ. ಈ ಜಗಳ ತಾರಕ್ಕೇರಿದ ನಂತರ ಪೊಲೀಸ್ ಬಂದು ಇಬ್ಬರಿಗೂ ಜೋರು ಮಾಡಿದ್ದಾರೆ.

ಗಂಡ-ಹೆಂಡತಿ ಇಬ್ಬರೂ ಆಟೋದಲ್ಲಿ ಪ್ರಯಾಣ ಮಾಡಿದ್ದರು. ಆದರೆ, ಇಳಿದ ಬಳಿಕ ಚಾಲಕ ಹೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದು ಗಲಾಟೆ ಮಾಡಿದ್ದರು. ಇದರಿಂದ ಜಗಳ ಉಂಟಾಗಿತ್ತು. ಈ ಗಲಾಟೆ ನೋಡಲು ಸುತ್ತಲೂ ಸಾಕಷ್ಟು ಜನರು ಸೇರಿದ್ದರು. ಆಗ ಪೊಲೀಸ್ ಎದುರಲ್ಲೇ ಆ ಮಹಿಳೆ ಚಪ್ಪಲಿಯಿಂದ ಆಟೋ ಚಾಲಕನಿಗೆ ಹೊಡೆದಿದ್ದಾಳೆ.

ಇದನ್ನೂ ಓದಿ: Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

ಕ್ಯಾಬ್ ಚಾಲಕನ ಕೆನ್ನೆಗೆ ಹೊಡೆದ ಲಕ್ನೋ ಯುವತಿ ವಿರುದ್ಧ ಕೇಸ್ ದಾಖಲು; ಟ್ವಿಟ್ಟರ್​ನಲ್ಲಿ ಹೊಸ ಅಭಿಯಾನ ಶುರು

(Lucknow Woman Slaps Auto Driver Beats Him With Slippers in front of Police Video Goes Viral)

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ