AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಸ್ತೆಯಲ್ಲೇ ಬೆತ್ತಲೆಯಾಗಿ ಜಗಳವಾಡಿದ ದಂಪತಿ; ವಿಡಿಯೋ​ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ನಾಗ್ಪುರದಲ್ಲಿ ಬೆತ್ತಲೆ ಜೋಡಿಯ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಗಂಡು- ಹೆಣ್ಣು ಇಬ್ಬರೂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

Shocking News: ರಸ್ತೆಯಲ್ಲೇ ಬೆತ್ತಲೆಯಾಗಿ ಜಗಳವಾಡಿದ ದಂಪತಿ; ವಿಡಿಯೋ​ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ರಸ್ತೆಯಲ್ಲಿ ಬೆತ್ತಲೆಯಾಗಿ ನಡೆದ ಜೋಡಿ
ಸುಷ್ಮಾ ಚಕ್ರೆ
|

Updated on: Jul 29, 2024 | 4:10 PM

Share

ನಾಗ್ಪುರ: ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶವಾದ ಲಕ್ಷ್ಮೀನಗರ ಚೌಕದ ಬಳಿ ಈ ಘಟನೆ ನಡೆದಿದ್ದು, ಬೈಕ್​ನಲ್ಲಿ ಬಂದ ಸ್ಥಳೀಯ ಯುವಕರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಶನಿವಾರ ರಾತ್ರಿ 2 ಗಂಟೆಯ ಸುಮಾರಿಗೆ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಯುವಕನೊಬ್ಬ ಸಂಪೂರ್ಣ ಬೆತ್ತಲೆಯಾಗಿ ಜಗಳವಾಡುತ್ತಿರುವುದನ್ನು ತೋರಿಸುತ್ತದೆ. ನಂತರ ಆ ವ್ಯಕ್ತಿ ಪಾದಚಾರಿ ಮಾರ್ಗದ ಬಳಿ ಇರುವ ಪಾಳುಬಿದ್ದ ಮನೆಯ ಕಡೆಗೆ ಹೋಗುತ್ತಾನೆ. ಅದೇ ವೇಳೆ ಇನ್ನೋರ್ವ ಯುವತಿ ಕೂಡ ನಗ್ನಳಾಗಿ ನಡೆಯುತ್ತಿರುವುದು ರೆಕಾರ್ಡ್ ಆಗಿದೆ. ಆ ಸಮಯದಲ್ಲಿ, ಬೀದಿಗಳಲ್ಲಿ ಹೆಚ್ಚಿನ ಜನಸಂಚಾರವಿರಲಿಲ್ಲ. ಇಬ್ಬರು ಬೈಕರ್​ಗಳು ಈ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ.

ಈ ವಿಡಿಯೋ ತ್ವರಿತವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಘಟನೆಯು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ಪ್ರದೇಶದಲ್ಲಿ ಗಣ್ಯ ವ್ಯಕ್ತಿಗಳೇ ಹೆಚ್ಚಾಗಿ ವಾಸವಾಗಿದ್ದಾರೆ. ಈ ಜೋಡಿಯ ವರ್ತನೆಗೆ ಹಲವು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?

ನಾಗ್ಪುರದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದೇ ರೀತಿಯ ಘಟನೆಗಳು ಧರಂಪೆತ್‌ನಲ್ಲಿ ಸಂಭವಿಸಿವೆ. ನಂತರ ಸದರ್ ಮತ್ತು ಬಜಾಜ್ ನಗರದಲ್ಲಿ ಕೂಡ ಇದೇ ರೀತಿಯ ಘಟನೆ ನಡೆದಿದೆ. ಈ ಘಟನೆಯು ಗಂಭೀರ ಕಾಳಜಿ ಮತ್ತು ಚರ್ಚೆಯನ್ನು ಹುಟ್ಟುಹಾಕಿದೆ.

ಈ ದಂಪತಿಗಳ ನಡುವೆ ವಾಗ್ವಾದದ ನಂತರ, ಮೊದಲು ಆ ವ್ಯಕ್ತಿ ಕಾರಿನಿಂದ ಹೊರಬಂದು ರಸ್ತೆಯಲ್ಲಿ ಬೆತ್ತಲೆಯಾಗಿ ನಡೆಯಲು ಪ್ರಾರಂಭಿಸಿದನು. ನಂತರ ಯುವತಿ ಕೂಡ ಅವನ ಹಿಂದೆ ನಗ್ನ ಸ್ಥಿತಿಯಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಅವಳು ಅವನಲ್ಲಿ ಕ್ಷಮೆಯಾಚಿಸಿ ಅವನನ್ನು ಕಾರಿನಲ್ಲಿ ಕುಳಿತುಕೊಳ್ಳಲು ಹೇಳುತ್ತಿದ್ದಳು. ಆದರೆ, ಆ ಯುವಕ ಕಾರಿನಲ್ಲಿ ಕುಳಿತುಕೊಳ್ಳಲು ಸಿದ್ಧನಿರಲಿಲ್ಲ. ಹೀಗಾಗಿ ಯುವತಿ ಪದೇ ಪದೇ ಆತನ ಹಿಂದೆ ಹೋಗಿ ನಗ್ನಳಾಗಿಯೇ ರಸ್ತೆಯಲ್ಲಿ ನಡೆಯುತ್ತಾ ಕಾರಿನೊಳಗೆ ಬಂದು ಕೂರಲು ಮನವಿ ಮಾಡಿದ್ದಾಳೆ. ಅವರಿಬ್ಬರೂ ಬೀದಿಯಲ್ಲಿಯೇ ನಗ್ನರಾಗಿ ಜಗಳವಾಡಿದ್ದಾರೆ.

ಇದನ್ನೂ ಓದಿ: Shocking News: ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಗೆ ಹೃದಯಾಘಾತ; ಶಾಕಿಂಗ್ ವಿಡಿಯೋ ವೈರಲ್

ಈ ಹಿನ್ನೆಲೆಯಲ್ಲಿ ಜೋಡಿಯ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅವರು ಮಾನಸಿಕವಾಗಿ ಅಸ್ವಸ್ಥರಾಗಿರುವಂತೆ ತೋರುತ್ತಿದ್ದರಿಂದ ಅವರ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಲಿಲ್ಲ. “ನಾವು ಆ ದಂಪತಿ ಮತ್ತು ಅವರ ಕುಟುಂಬ ಸದಸ್ಯರನ್ನು ಕರೆಸಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅಸಂಬದ್ಧ ನಡವಳಿಕೆ ತೋರದಂತೆ ಸೂಚಿಸಲಾಗಿದೆ.” ಎಂದಿರುವ ಪೊಲೀಸರು ದಂಪತಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿರುವುದರಿಂದ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​