AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ವಿದ್ಯಾರ್ಥಿಗಳ ಮೊಬೈಲ್​ಗಳನ್ನು ಕಸಿದುಕೊಂಡು ಸುಟ್ಟು ಹಾಕಿದ ಶಿಕ್ಷಕರು; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಇಂಡೋನೇಷ್ಯಾದಲ್ಲಿ ಶಾಲಾ ಶಿಕ್ಷಕರ ಗುಂಪೊಂದು ಕ್ಲಾಸ್​ ರೂಂನಲ್ಲಿ ಮಕ್ಕಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡು, ಬೆಂಕಿ ಹೊತ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ.

Shocking Video: ವಿದ್ಯಾರ್ಥಿಗಳ ಮೊಬೈಲ್​ಗಳನ್ನು ಕಸಿದುಕೊಂಡು ಸುಟ್ಟು ಹಾಕಿದ ಶಿಕ್ಷಕರು; ಶಾಕಿಂಗ್ ವಿಡಿಯೋ ಇಲ್ಲಿದೆ
ವಿದ್ಯಾರ್ಥಿಗಳ ಮೊಬೈಲ್​ಗೆ ಬೆಂಕಿ ಹಚ್ಚಿದ ಶಿಕ್ಷಕರು
TV9 Web
| Updated By: ಸುಷ್ಮಾ ಚಕ್ರೆ|

Updated on: Feb 25, 2022 | 12:47 PM

Share

ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷೆ ನೀಡುವುದು ಸಾಮಾನ್ಯ. ಆದರೆ, ಶಾಲಾ- ಕಾಲೇಜಿನ ನಿಯಮಗಳನ್ನು ಉಲ್ಲಂಘಿಸುವ ಅಥವಾ ಕೆಟ್ಟದಾಗಿ ವರ್ತಿಸುವ ವಿದ್ಯಾರ್ಥಿಗಳು ಶಿಸ್ತಿನಿಂದ ಇರಲು ಶಿಕ್ಷೆಯ ಮೂಲಕ ಬುದ್ಧಿ ಕಲಿಸಲಾಗುತ್ತದೆ. ಭವಿಷ್ಯದಲ್ಲಿ ಮಕ್ಕಳು ತಪ್ಪು ಕೆಲಸಗಳನ್ನು ಮಾಡಬಾರದು ಎಂಬುದು ಇದರ ಉದ್ದೇಶವಾಗಿರುತ್ತದೆ. ಈ ದಿನಗಳಲ್ಲಿ ಅತ್ಯಂತ ಸಾಮಾನ್ಯವಾದ ಸ್ಮಾರ್ಟ್‌ಫೋನ್‌ಗಳನ್ನು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಳಸಬಾರದು ಎಂದು ನಿಯಮವಿದೆ. ಅದರಿಂದ ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕ್ಲಾಸ್​ರೂಂನೊಳಗೆ ಮೊಬೈಲನ್ನು ತಂದಿದ್ದನ್ನು ನೋಡಿ ಕೋಪಗೊಂಡು ಆ ಸ್ಮಾರ್ಟ್​​ಫೋನ್​​ಗಳನ್ನು (Smart phones) ಸುಟ್ಟು ಹಾಕಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಇಂಡೋನೇಷ್ಯಾದಲ್ಲಿ ಶಾಲಾ ಶಿಕ್ಷಕರ ಗುಂಪೊಂದು ಕ್ಲಾಸ್​ ರೂಂನಲ್ಲಿ ಮಕ್ಕಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡು, ಬೆಂಕಿ ಹೊತ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ. ವಿದ್ಯಾರ್ಥಿಗಳಿಂದ ಆ ಮೊಬೈಲ್​ಗಳನ್ನು ತೆಗೆದುಕೊಂಡು ಬೆಂಕಿಗೆ ಹಾಕಲಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ವಾಪಾಸ್ ನೀಡಬೇಕೆಂದು ಮನವಿ ಮತ್ತು ಅತ್ತರೂ ಶಿಕ್ಷಕರು ಕೇಳದೆ ಆ ಮೊಬೈಲ್​ಗಳನ್ನು ಸುಟ್ಟು ಹಾಕಿ, ಶಿಕ್ಷೆಯನ್ನು ನೀಡಿದ್ದಾರೆ.

ಈ ವಿಡಿಯೋ ತುಣುಕನ್ನು ಟಿಕ್‌ಟಾಕ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆಂಕಿ ಹೊತ್ತಿಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರೂ ಅದು ವ್ಯರ್ಥವಾಗಿದೆ. ಇಂಡೋನೇಷ್ಯಾದಲ್ಲಿ ಈ ಘಟನೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇಂಡೋನೇಷ್ಯಾದ ಬೋರ್ಡಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಹೇಳಿವೆ.

ಈ ವಿಡಿಯೋ ನೋಡಿ ಹಲವು ನೆಟ್ಟಿಗರು ಗರಂ ಆಗಿದ್ದಾರೆ. ಆಸ್ತಿಗೆ ಹಾನಿ ಮಾಡಿದ ಶಿಕ್ಷಕರನ್ನು ಶಿಕ್ಷಿಸಬೇಕು ಮತ್ತು ಮೊಕದ್ದಮೆ ಹೂಡಬೇಕು ಎಂದು ಕೆಲವರು ಹೇಳಿದ್ದಾರೆ. ಬಹುಶಃ ಬೋರ್ಡಿಂಗ್ ಶಾಲೆಯಲ್ಲಿ ಮೊಬೈಲ್ ಬಳಸುವುದನ್ನು ಅನೇಕ ಬಾರಿ ಖಂಡಿಸಲಾಗಿತ್ತು. ಆದರೂ ವಿದ್ಯಾರ್ಥಿಗಳು ಸೆಲ್‌ಫೋನ್‌ಗಳನ್ನು ತಂದಿದ್ದರಿಂದ ಈ ರೀತಿ ಮಾಡಲಾಗಿದೆ.

ಆ ಮೊಬೈಲ್ ಫೋನ್​ಗಳನ್ನು ಹಾಗೇ ವಾಪಾಸ್ ಕೊಟ್ಟು ಬುದ್ಧಿ ಹೇಳಬಹುದಿತ್ತು, ಆ ಮಕ್ಕಳ ಮನೆಗೆ ಮೊಬೈಲ್ ಫೋನ್​ಗಳನ್ನು ಕಳುಹಿಸಬಹುದಿತ್ತು. ಈ ರೀತಿ ಫೋನ್​​ಗಳನ್ನು ಸುಟ್ಟು ಹಾಕಬಾರದಿತ್ತು ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?