AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋದ ರೈಲು; ಅಚ್ಚರಿಯ ರೀತಿಯಲ್ಲಿ ಪಾರಾದ ವಿಡಿಯೋ ಇಲ್ಲಿದೆ

ರೈಲು ಬರುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ವ್ಯಕ್ತಿ ಚಲಿಸುತ್ತಿರುವ ರೈಲನ್ನು ಹತ್ತಲು ಯತ್ನಿಸಿದ್ದಾರೆ. ಈ ವೇಳೆ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದಾರೆ.

Shocking Video: ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋದ ರೈಲು; ಅಚ್ಚರಿಯ ರೀತಿಯಲ್ಲಿ ಪಾರಾದ ವಿಡಿಯೋ ಇಲ್ಲಿದೆ
ರೈಲ್ವೆ ಹಳಿಯ ಮೇಲೆ ಮಲಗಿದ್ದ ವ್ಯಕ್ತಿ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 07, 2022 | 2:09 PM

Share

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಇಟಾವಾ ಜಿಲ್ಲೆಯ ಭರ್ತಾನ ರೈಲು ನಿಲ್ದಾಣದಲ್ಲಿ ರೈಲಿನಡಿಗೆ ಸಿಲುಕಿದ ಪ್ರಯಾಣಿಕರೊಬ್ಬರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ. ಆತನ ಮೇಲೆ ರೈಲು (Train) ಸಂಪೂರ್ಣವಾಗಿ ಹಾದುಹೋಗಿದ್ದರೂ ಆತ ಬದುಕುಳಿದಿದ್ದಾರೆ. ರೈಲು ಬರುತ್ತಿರುವಾಗಲೇ ಆ ವ್ಯಕ್ತಿ ಪ್ಲಾಟ್‌ಫಾರ್ಮ್ ಮತ್ತು ಹಳಿಗಳ ನಡುವಿನ ಜಾಗದಲ್ಲಿ ಬಿದ್ದರು. ಆಗ ರೈಲು ಬಂದು ಆತನ ಮೇಲೆ ಹಾದು ಹೋಯಿತು.

ಈ ದೃಶ್ಯ ರೈಲ್ವೆ ನಿಲ್ದಾಣದ ಪ್ಲಾಟ್​ಫಾರ್ಮ್​ನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಆದರೆ, ಅಚ್ಚರಿಯ ರೀತಿಯಲ್ಲಿ ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಗ್ರಾದಿಂದ ಹೊರಟಿದ್ದ ಸೂಪರ್‌ಫಾಸ್ಟ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮಂಗಳವಾರ ಬೆಳಗ್ಗೆ 9.45ರ ಸುಮಾರಿಗೆ ಭರ್ತಾನ ರೈಲು ನಿಲ್ದಾಣವನ್ನು ತಲುಪಿದಾಗ ಪ್ಲಾಟ್‌ಫಾರ್ಮ್ ನಂ.2ರಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್

ರೈಲು ಬರುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ವ್ಯಕ್ತಿ ಚಲಿಸುತ್ತಿರುವ ರೈಲನ್ನು ಹತ್ತಲು ಯತ್ನಿಸಿದ್ದಾರೆ. ಈ ವೇಳೆ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದಾರೆ. ಹಳಿ ಮತ್ತು ಪ್ಲಾಟ್​ಫಾರ್ಮ್ ನಡುವಿನ ಜಾಗದಲ್ಲಿ ಸಿಲುಕಿದ ಆ ವ್ಯಕ್ತಿಯ ಮೇಲೆ ರೈಲು ಹಾದುಹೋಗಿದೆ.

ಪ್ಲಾಟ್​ಫಾರ್ಮ್​ನಲ್ಲಿ ನೆರೆದಿದ್ದ ಅಪಾರ ಜನಸ್ತೋಮ ಕ್ಯಾಮರಾದಲ್ಲಿ ಈ ಇಡೀ ಘಟನೆಯನ್ನು ಸೆರೆಹಿಡಿದಿದ್ದಾರೆ. ರೈಲು ಅವರ ಮೇಲೆ ಹಾದುಹೋದ ನಂತರ, ಆ ವ್ಯಕ್ತಿ ಎದ್ದು, ಹಳಿಗಳ ಮೇಲೆ ಬಿದ್ದಿದ್ದ ತನ್ನ ವಸ್ತುಗಳನ್ನು ತೆಗೆದುಕೊಂಡು ಎದ್ದಿದ್ದಾರೆ. ಆಗ ಆತ ಕೈಗಳನ್ನು ಜೋಡಿಸಿ ಅಲ್ಲಿದ್ದವರಿಗೆ ನಮಸ್ಕಾರ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್