AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋದ ರೈಲು; ಅಚ್ಚರಿಯ ರೀತಿಯಲ್ಲಿ ಪಾರಾದ ವಿಡಿಯೋ ಇಲ್ಲಿದೆ

ರೈಲು ಬರುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ವ್ಯಕ್ತಿ ಚಲಿಸುತ್ತಿರುವ ರೈಲನ್ನು ಹತ್ತಲು ಯತ್ನಿಸಿದ್ದಾರೆ. ಈ ವೇಳೆ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದಾರೆ.

Shocking Video: ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋದ ರೈಲು; ಅಚ್ಚರಿಯ ರೀತಿಯಲ್ಲಿ ಪಾರಾದ ವಿಡಿಯೋ ಇಲ್ಲಿದೆ
ರೈಲ್ವೆ ಹಳಿಯ ಮೇಲೆ ಮಲಗಿದ್ದ ವ್ಯಕ್ತಿ
TV9 Web
| Edited By: |

Updated on: Sep 07, 2022 | 2:09 PM

Share

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಇಟಾವಾ ಜಿಲ್ಲೆಯ ಭರ್ತಾನ ರೈಲು ನಿಲ್ದಾಣದಲ್ಲಿ ರೈಲಿನಡಿಗೆ ಸಿಲುಕಿದ ಪ್ರಯಾಣಿಕರೊಬ್ಬರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ. ಆತನ ಮೇಲೆ ರೈಲು (Train) ಸಂಪೂರ್ಣವಾಗಿ ಹಾದುಹೋಗಿದ್ದರೂ ಆತ ಬದುಕುಳಿದಿದ್ದಾರೆ. ರೈಲು ಬರುತ್ತಿರುವಾಗಲೇ ಆ ವ್ಯಕ್ತಿ ಪ್ಲಾಟ್‌ಫಾರ್ಮ್ ಮತ್ತು ಹಳಿಗಳ ನಡುವಿನ ಜಾಗದಲ್ಲಿ ಬಿದ್ದರು. ಆಗ ರೈಲು ಬಂದು ಆತನ ಮೇಲೆ ಹಾದು ಹೋಯಿತು.

ಈ ದೃಶ್ಯ ರೈಲ್ವೆ ನಿಲ್ದಾಣದ ಪ್ಲಾಟ್​ಫಾರ್ಮ್​ನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಆದರೆ, ಅಚ್ಚರಿಯ ರೀತಿಯಲ್ಲಿ ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಗ್ರಾದಿಂದ ಹೊರಟಿದ್ದ ಸೂಪರ್‌ಫಾಸ್ಟ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮಂಗಳವಾರ ಬೆಳಗ್ಗೆ 9.45ರ ಸುಮಾರಿಗೆ ಭರ್ತಾನ ರೈಲು ನಿಲ್ದಾಣವನ್ನು ತಲುಪಿದಾಗ ಪ್ಲಾಟ್‌ಫಾರ್ಮ್ ನಂ.2ರಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್

ರೈಲು ಬರುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ವ್ಯಕ್ತಿ ಚಲಿಸುತ್ತಿರುವ ರೈಲನ್ನು ಹತ್ತಲು ಯತ್ನಿಸಿದ್ದಾರೆ. ಈ ವೇಳೆ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದಾರೆ. ಹಳಿ ಮತ್ತು ಪ್ಲಾಟ್​ಫಾರ್ಮ್ ನಡುವಿನ ಜಾಗದಲ್ಲಿ ಸಿಲುಕಿದ ಆ ವ್ಯಕ್ತಿಯ ಮೇಲೆ ರೈಲು ಹಾದುಹೋಗಿದೆ.

ಪ್ಲಾಟ್​ಫಾರ್ಮ್​ನಲ್ಲಿ ನೆರೆದಿದ್ದ ಅಪಾರ ಜನಸ್ತೋಮ ಕ್ಯಾಮರಾದಲ್ಲಿ ಈ ಇಡೀ ಘಟನೆಯನ್ನು ಸೆರೆಹಿಡಿದಿದ್ದಾರೆ. ರೈಲು ಅವರ ಮೇಲೆ ಹಾದುಹೋದ ನಂತರ, ಆ ವ್ಯಕ್ತಿ ಎದ್ದು, ಹಳಿಗಳ ಮೇಲೆ ಬಿದ್ದಿದ್ದ ತನ್ನ ವಸ್ತುಗಳನ್ನು ತೆಗೆದುಕೊಂಡು ಎದ್ದಿದ್ದಾರೆ. ಆಗ ಆತ ಕೈಗಳನ್ನು ಜೋಡಿಸಿ ಅಲ್ಲಿದ್ದವರಿಗೆ ನಮಸ್ಕಾರ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್