AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ

Viral Video: ಆರೋಗ್ಯ ಅಧಿಕಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೊವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಮರವನ್ನು ಹತ್ತುತ್ತಿರುವುದನ್ನು ನೋಡಬಹುದು.

Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ
ಮರವೇರಿದ ವ್ಯಕ್ತಿಯ ವಿಡಿಯೋ ವೈರಲ್
TV9 Web
| Edited By: |

Updated on: Jan 20, 2022 | 1:53 PM

Share

ನವದೆಹಲಿ: ಭಾರತದಲ್ಲಿ ಕೊವಿಡ್ ರೂಪಾಂತರಿಗಳು (Covid Variant) ಹರಡುತ್ತಿರುವುದರಿಂದ ಕೊರೊನಾ ಲಸಿಕೆಯ ಅಭಿಯಾನ ಆರಂಭಿಸಲಾಗಿದೆ. ಆದರೆ, ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಜಾಗೃತಿ ಅಭಿಯಾನದಲ್ಲಿ ತೊಡಗಿರುವ ಅಧಿಕಾರಿಗಳ ತಂಡವು ಅಲ್ಲಿನ ಗ್ರಾಮಸ್ಥರಿಗೆ ಲಸಿಕೆ ಹಾಕಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಯಾವುದೇ ಕಾರಣಕ್ಕೂ ಕೊವಿಡ್ ಲಸಿಕೆ (Covid Vaccine) ಹಾಕಿಸಿಕೊಳ್ಳವುದಿಲ್ಲ ಎಂದು ಗಲಾಟೆ ಮಾಡಿದ ಗ್ರಾಮಸ್ಥರ ಮನವೊಲಿಸಿ, ಲಸಿಕೆ ಹಾಕುವುದೇ ಅಧಿಕಾರಿಗಳಿಗೆ ದೊಡ್ಡ ಸವಾಲಾಯಿತು. ಈ ವೇಳೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂದು ಮರ ಹತ್ತಿ ಕುಳಿತ ಘಟನೆಯೂ ನಡೆಯಿತು.

ಆರೋಗ್ಯ ಅಧಿಕಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೊವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಮರವನ್ನು ಹತ್ತುತ್ತಿರುವುದನ್ನು ನೋಡಬಹುದು. ಅಧಿಕಾರಿಗಳು ಆ ವ್ಯಕ್ತಿಯ ಬಳಿಗೆ ಬಂದಾಗ ಆ ವ್ಯಕ್ತಿ ಸಣ್ಣ ಮರದ ಮೇಲೆ ಹತ್ತಿದ. ಅವನನ್ನು ಸಮಾಧಾನ ಮಾಡಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದರು. ದಯವಿಟ್ಟು ಮರದಿಂದ ಕೆಳಗೆ ಇಳಿಯಿರಿ ಎಂದು ಅಧಿಕಾರಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಾಕಷ್ಟು ಪ್ರಯತ್ನಗಳ ನಂತರ, ಅವರು ಮರದಿಂದ ಕೆಳಗಿಳಿದು ಅಧಿಕಾರಿಗಳಿಂದ ಕೊರೊನಾ ಲಸಿಕೆಯನ್ನು ಪಡೆದರು. ವ್ಯಕ್ತಿಯೊಬ್ಬರು ಲಸಿಕೆ ತೆಗೆದುಕೊಳ್ಳಲು ಇಷ್ಟವಿಲ್ಲದ ಕಾರಣ ಮರವನ್ನು ಏರಿದರು. ಆದರೆ ನಮ್ಮ ತಂಡವು ಮನವರಿಕೆ ಮಾಡಿದ ನಂತರ ಲಸಕೆ ತೆಗೆದುಕೊಳ್ಳಲು ಒಪ್ಪಿಕೊಂಡರು ಎಂದು ಅಧಿಕಾರಿ ಅತುಲ್ ದುಬೆ ಹೇಳಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಬಲ್ಲಿಯಾವು ಒಟ್ಟಾರೆ ವ್ಯಾಕ್ಸಿನೇಷನ್‌ಗಳಲ್ಲಿ ಅತ್ಯಂತ ಕಡಿಮೆ ಶೇಕಡಾವಾರು ಪ್ರಮಾಣವನ್ನು ಹೊಂದಿದೆ. ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವ ಸಮಯದಲ್ಲಿ ಆರೋಗ್ಯ ಅಧಿಕಾರಿಗಳು ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ಮರದ ಮೇಲೆ ಹತ್ತಿದ ವ್ಯಕ್ತಿ ಆರಂಭದಲ್ಲಿ ಹಿಂಜರಿದರು. ನಾವು ಅವರಿಗೆ ಮನವರಿಕೆ ಮಾಡಿ ಕೊರೊನಾ ಲಸಿಕೆ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆ ಹಾಕಬೇಕು: ತಜ್ಞ ಡಾ.ಫಹೀಮ್ ಯೂನಸ್

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು