AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ

Viral Video: ಆರೋಗ್ಯ ಅಧಿಕಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೊವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಮರವನ್ನು ಹತ್ತುತ್ತಿರುವುದನ್ನು ನೋಡಬಹುದು.

Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ
ಮರವೇರಿದ ವ್ಯಕ್ತಿಯ ವಿಡಿಯೋ ವೈರಲ್
TV9 Web
| Updated By: ಸುಷ್ಮಾ ಚಕ್ರೆ|

Updated on: Jan 20, 2022 | 1:53 PM

Share

ನವದೆಹಲಿ: ಭಾರತದಲ್ಲಿ ಕೊವಿಡ್ ರೂಪಾಂತರಿಗಳು (Covid Variant) ಹರಡುತ್ತಿರುವುದರಿಂದ ಕೊರೊನಾ ಲಸಿಕೆಯ ಅಭಿಯಾನ ಆರಂಭಿಸಲಾಗಿದೆ. ಆದರೆ, ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಜಾಗೃತಿ ಅಭಿಯಾನದಲ್ಲಿ ತೊಡಗಿರುವ ಅಧಿಕಾರಿಗಳ ತಂಡವು ಅಲ್ಲಿನ ಗ್ರಾಮಸ್ಥರಿಗೆ ಲಸಿಕೆ ಹಾಕಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಯಾವುದೇ ಕಾರಣಕ್ಕೂ ಕೊವಿಡ್ ಲಸಿಕೆ (Covid Vaccine) ಹಾಕಿಸಿಕೊಳ್ಳವುದಿಲ್ಲ ಎಂದು ಗಲಾಟೆ ಮಾಡಿದ ಗ್ರಾಮಸ್ಥರ ಮನವೊಲಿಸಿ, ಲಸಿಕೆ ಹಾಕುವುದೇ ಅಧಿಕಾರಿಗಳಿಗೆ ದೊಡ್ಡ ಸವಾಲಾಯಿತು. ಈ ವೇಳೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂದು ಮರ ಹತ್ತಿ ಕುಳಿತ ಘಟನೆಯೂ ನಡೆಯಿತು.

ಆರೋಗ್ಯ ಅಧಿಕಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೊವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಮರವನ್ನು ಹತ್ತುತ್ತಿರುವುದನ್ನು ನೋಡಬಹುದು. ಅಧಿಕಾರಿಗಳು ಆ ವ್ಯಕ್ತಿಯ ಬಳಿಗೆ ಬಂದಾಗ ಆ ವ್ಯಕ್ತಿ ಸಣ್ಣ ಮರದ ಮೇಲೆ ಹತ್ತಿದ. ಅವನನ್ನು ಸಮಾಧಾನ ಮಾಡಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದರು. ದಯವಿಟ್ಟು ಮರದಿಂದ ಕೆಳಗೆ ಇಳಿಯಿರಿ ಎಂದು ಅಧಿಕಾರಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಾಕಷ್ಟು ಪ್ರಯತ್ನಗಳ ನಂತರ, ಅವರು ಮರದಿಂದ ಕೆಳಗಿಳಿದು ಅಧಿಕಾರಿಗಳಿಂದ ಕೊರೊನಾ ಲಸಿಕೆಯನ್ನು ಪಡೆದರು. ವ್ಯಕ್ತಿಯೊಬ್ಬರು ಲಸಿಕೆ ತೆಗೆದುಕೊಳ್ಳಲು ಇಷ್ಟವಿಲ್ಲದ ಕಾರಣ ಮರವನ್ನು ಏರಿದರು. ಆದರೆ ನಮ್ಮ ತಂಡವು ಮನವರಿಕೆ ಮಾಡಿದ ನಂತರ ಲಸಕೆ ತೆಗೆದುಕೊಳ್ಳಲು ಒಪ್ಪಿಕೊಂಡರು ಎಂದು ಅಧಿಕಾರಿ ಅತುಲ್ ದುಬೆ ಹೇಳಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಬಲ್ಲಿಯಾವು ಒಟ್ಟಾರೆ ವ್ಯಾಕ್ಸಿನೇಷನ್‌ಗಳಲ್ಲಿ ಅತ್ಯಂತ ಕಡಿಮೆ ಶೇಕಡಾವಾರು ಪ್ರಮಾಣವನ್ನು ಹೊಂದಿದೆ. ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವ ಸಮಯದಲ್ಲಿ ಆರೋಗ್ಯ ಅಧಿಕಾರಿಗಳು ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ಮರದ ಮೇಲೆ ಹತ್ತಿದ ವ್ಯಕ್ತಿ ಆರಂಭದಲ್ಲಿ ಹಿಂಜರಿದರು. ನಾವು ಅವರಿಗೆ ಮನವರಿಕೆ ಮಾಡಿ ಕೊರೊನಾ ಲಸಿಕೆ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆ ಹಾಕಬೇಕು: ತಜ್ಞ ಡಾ.ಫಹೀಮ್ ಯೂನಸ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ