AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ

Viral Video: ಆರೋಗ್ಯ ಅಧಿಕಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೊವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಮರವನ್ನು ಹತ್ತುತ್ತಿರುವುದನ್ನು ನೋಡಬಹುದು.

Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ
ಮರವೇರಿದ ವ್ಯಕ್ತಿಯ ವಿಡಿಯೋ ವೈರಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 20, 2022 | 1:53 PM

ನವದೆಹಲಿ: ಭಾರತದಲ್ಲಿ ಕೊವಿಡ್ ರೂಪಾಂತರಿಗಳು (Covid Variant) ಹರಡುತ್ತಿರುವುದರಿಂದ ಕೊರೊನಾ ಲಸಿಕೆಯ ಅಭಿಯಾನ ಆರಂಭಿಸಲಾಗಿದೆ. ಆದರೆ, ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಜಾಗೃತಿ ಅಭಿಯಾನದಲ್ಲಿ ತೊಡಗಿರುವ ಅಧಿಕಾರಿಗಳ ತಂಡವು ಅಲ್ಲಿನ ಗ್ರಾಮಸ್ಥರಿಗೆ ಲಸಿಕೆ ಹಾಕಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಯಾವುದೇ ಕಾರಣಕ್ಕೂ ಕೊವಿಡ್ ಲಸಿಕೆ (Covid Vaccine) ಹಾಕಿಸಿಕೊಳ್ಳವುದಿಲ್ಲ ಎಂದು ಗಲಾಟೆ ಮಾಡಿದ ಗ್ರಾಮಸ್ಥರ ಮನವೊಲಿಸಿ, ಲಸಿಕೆ ಹಾಕುವುದೇ ಅಧಿಕಾರಿಗಳಿಗೆ ದೊಡ್ಡ ಸವಾಲಾಯಿತು. ಈ ವೇಳೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂದು ಮರ ಹತ್ತಿ ಕುಳಿತ ಘಟನೆಯೂ ನಡೆಯಿತು.

ಆರೋಗ್ಯ ಅಧಿಕಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೊವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ಮರವನ್ನು ಹತ್ತುತ್ತಿರುವುದನ್ನು ನೋಡಬಹುದು. ಅಧಿಕಾರಿಗಳು ಆ ವ್ಯಕ್ತಿಯ ಬಳಿಗೆ ಬಂದಾಗ ಆ ವ್ಯಕ್ತಿ ಸಣ್ಣ ಮರದ ಮೇಲೆ ಹತ್ತಿದ. ಅವನನ್ನು ಸಮಾಧಾನ ಮಾಡಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದರು. ದಯವಿಟ್ಟು ಮರದಿಂದ ಕೆಳಗೆ ಇಳಿಯಿರಿ ಎಂದು ಅಧಿಕಾರಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಾಕಷ್ಟು ಪ್ರಯತ್ನಗಳ ನಂತರ, ಅವರು ಮರದಿಂದ ಕೆಳಗಿಳಿದು ಅಧಿಕಾರಿಗಳಿಂದ ಕೊರೊನಾ ಲಸಿಕೆಯನ್ನು ಪಡೆದರು. ವ್ಯಕ್ತಿಯೊಬ್ಬರು ಲಸಿಕೆ ತೆಗೆದುಕೊಳ್ಳಲು ಇಷ್ಟವಿಲ್ಲದ ಕಾರಣ ಮರವನ್ನು ಏರಿದರು. ಆದರೆ ನಮ್ಮ ತಂಡವು ಮನವರಿಕೆ ಮಾಡಿದ ನಂತರ ಲಸಕೆ ತೆಗೆದುಕೊಳ್ಳಲು ಒಪ್ಪಿಕೊಂಡರು ಎಂದು ಅಧಿಕಾರಿ ಅತುಲ್ ದುಬೆ ಹೇಳಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಬಲ್ಲಿಯಾವು ಒಟ್ಟಾರೆ ವ್ಯಾಕ್ಸಿನೇಷನ್‌ಗಳಲ್ಲಿ ಅತ್ಯಂತ ಕಡಿಮೆ ಶೇಕಡಾವಾರು ಪ್ರಮಾಣವನ್ನು ಹೊಂದಿದೆ. ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವ ಸಮಯದಲ್ಲಿ ಆರೋಗ್ಯ ಅಧಿಕಾರಿಗಳು ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ಮರದ ಮೇಲೆ ಹತ್ತಿದ ವ್ಯಕ್ತಿ ಆರಂಭದಲ್ಲಿ ಹಿಂಜರಿದರು. ನಾವು ಅವರಿಗೆ ಮನವರಿಕೆ ಮಾಡಿ ಕೊರೊನಾ ಲಸಿಕೆ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆ ಹಾಕಬೇಕು: ತಜ್ಞ ಡಾ.ಫಹೀಮ್ ಯೂನಸ್

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು