Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ದೆಹಲಿ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಗೆ ಥಳಿಸಿದ ಮಹಿಳೆ; ವಿಡಿಯೋ ವೈರಲ್

Viral Video: ಹೈವೇಯಲ್ಲಿನ ಟ್ರಾಫಿಕ್​ನಿಂದಾಗಿ ಕ್ಯಾಬ್ ಚಾಲಕನ ಕಾರು ಮುಂದೆ ಚಲಿಸದೆ ನಿಂತಿತ್ತು. ತಾನು ಹೋಗುವಾಗ ಸೈಡ್ ಕೊಡಲಿಲ್ಲ ಎಂಬ ಕೋಪದಿಂದ ಆ ಮಹಿಳೆ ಕೆಳಗಿಳಿದು ಆ ಕ್ಯಾಬ್ ಚಾಲಕನಿಗೆ ಹೊಡೆದಿದ್ದಾಳೆ.

Shocking Video: ದೆಹಲಿ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಗೆ ಥಳಿಸಿದ ಮಹಿಳೆ; ವಿಡಿಯೋ ವೈರಲ್
ರಸ್ತೆಯಲ್ಲಿ ಕ್ಯಾಬ್ ಚಾಲಕನಿಗೆ ಥಳಿಸಿದ ಮಹಿಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 17, 2021 | 6:07 PM

ನವದೆಹಲಿ: ನವದೆಹಲಿಯ ಹೆದ್ದಾರಿ ಮಧ್ಯೆ ಮಹಿಳೆಯೊಬ್ಬರು ಕ್ಯಾಬ್ ಚಾಲಕನಿಗೆ ಥಳಿಸಿದ ವಿಡಿಯೋ ವೈರಲ್ ಆಗಿದೆ. 2 ನಿಮಿಷಗಳ ಈ ವಿಡಿಯೋದಲ್ಲಿ ನೀಲಿ ಟೀ ಶರ್ಟ್ ಮತ್ತು ಮುಖಕ್ಕೆ ಮಾಸ್ಕ್ ಹಾಕಿದ್ದ ಮಹಿಳೆಯೊಬ್ಬರು ಕ್ಯಾಬ್ ಚಾಲಕನ ಕಾಲರ್ ಹಿಡಿದುಕೊಂಡು ಹೆದ್ದಾರಿಯ ಮಧ್ಯದಲ್ಲಿ ಆತನಿಗೆ ಥಳಿಸುತ್ತಿದ್ದಾರೆ. ಆ ಸ್ಥಳದಲ್ಲಿ ಸುತ್ತಲೂ ಜನರು ನಿಂತಿದ್ದಾರೆ. ಕ್ಯಾಬ್ ಚಾಲಕನಿಗೆ ಹೊಡೆದ ಮಹಿಳೆಯ ಜೊತೆಗೆ ಇನ್ನೋರ್ವ ಮಹಿಳೆಯೂ ನಿಂತಿರುವುದನ್ನು ಕಾಣಬಹುದು.

ಈ ವಿಡಿಯೋ ಪಶ್ಚಿಮ ಪಟೇಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಆರೋಪಿ ಮಹಿಳೆ ಮತ್ತೊಬ್ಬ ಮಹಿಳೆಯೊಂದಿಗೆ ಸ್ಕೂಟಿಯಲ್ಲಿ ಹೋಗುತ್ತಿದ್ದಳು. ಹೈವೇಯಲ್ಲಿನ ಟ್ರಾಫಿಕ್​ನಿಂದಾಗಿ ಕ್ಯಾಬ್ ಚಾಲಕನ ಕಾರು ಮುಂದೆ ಚಲಿಸದೆ ನಿಂತಿತ್ತು. ತಾನು ಹೋಗುವಾಗ ಸೈಡ್ ಕೊಡಲಿಲ್ಲ ಎಂಬ ಕೋಪದಿಂದ ಆ ಮಹಿಳೆ ಕೆಳಗಿಳಿದು ಆ ಕ್ಯಾಬ್ ಚಾಲಕನಿಗೆ ಹೊಡೆದಿದ್ದಾಳೆ.

ಕ್ಯಾಬ್ ಚಾಲಕ ಮಹಿಳೆಗೆ ಸೈಡ್ ನೀಡದಿದ್ದಾಗ ಕೋಪಗೊಂಡ ಮಹಿಳೆ ತನ್ನ ಸ್ಕೂಟಿಯನ್ನು ಹೆದ್ದಾರಿಯಲ್ಲಿಯೇ ನಿಲ್ಲಿಸಿ ಕ್ಯಾಬ್ ಚಾಲಕನನ್ನು ನಿಂದಿಸಲು ಪ್ರಾರಂಭಿಸಿದಳು. ಅವಳು ಅವನನ್ನು ಕ್ಯಾಬ್‌ನಿಂದ ಹೊರಗೆಳೆದು ಹೊಡೆಯಲಾರಂಭಿಸಿದಳು. ಈ ಸಮಯದಲ್ಲಿ ಜನರು ಪ್ರತಿಭಟಿಸಿದಾಗ ಅಲ್ಲಿದ್ದವರಿಗೂ ಬೈಯಲು ಶುರು ಮಾಡಿದಳು. ಪ್ರಿಯದರ್ಶಿನಿ ನಾರಾಯಣ್ ಯಾದವ್ ಎಂಬ ಲಕ್ನೋ ಹುಡುಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಕ್ಯಾಬಿಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕ್ಲಿಪ್‌ನಿಂದ ಸಾರ್ವಜನಿಕರಿಂದ ಅಸಮಾಧಾನವನ್ನು ಗಳಿಸಿದ ತಿಂಗಳುಗಳ ನಂತರ, ದೆಹಲಿಯಲ್ಲಿ ಮಹಿಳೆಯೊಬ್ಬರು ಕ್ಯಾಬ್ ಡ್ರೈವರ್‌ಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಘಟನೆಯ ವಿಡಿಯೋ ರಾಷ್ಟ್ರ ರಾಜಧಾನಿ ದೆಹಲಿಯ ಪಟೇಲ್ ನಗರ ಪ್ರದೇಶದಲ್ಲಿ ನಡೆದಿದೆ. ಮಹಿಳೆಯಿಂದ ಹಲ್ಲೆಗೊಳಗಾದ ಕ್ಯಾಬ್ ಡ್ರೈವರ್‌ನಿಂದ ಪೊಲೀಸರು ಇನ್ನೂ ದೂರು ಸ್ವೀಕರಿಸಿಲ್ಲ. ಆಕೆಯ ಸ್ಕೂಟಿಯ ನೋಂದಣಿ ಸಂಖ್ಯೆಯ ಸಹಾಯದಿಂದ ಮಹಿಳೆಯನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಕ್ಯಾಬ್ ಚಾಲಕನ ದೂರು ಪಡೆದು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

Viral News: ಜೈಲಿಗೆ ಹಾಕಿ ಪ್ಲೀಸ್!; ಮನೆಯಲ್ಲಿ ಹೆಂಡತಿಯ ಕಾಟ ತಾಳಲಾರದೆ ಪೊಲೀಸರ ಬಳಿ ಬೇಡಿಕೊಂಡ ಗಂಡ

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ