Shocking: ಕನಸಿನಲ್ಲಿ ದೇವಿ ನರಬಲಿ ಕೇಳಿದಳು ಎಂದು ವ್ಯಕ್ತಿಯ ಹತ್ಯೆಗೈದ ಮಹಿಳೆ

ಆರೋಪಿ ಪ್ರಿಯಾ ಮನೆಯಲ್ಲಿ ಮಹೇಶ್ ಗುಪ್ತಾ ಮೃತದೇಹ ಪೊಲೀಸರಿಗೆ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನರಬಲಿಯ ಭಾಗವಾಗಿ ಈ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆಕೆ ಹೇಳಿದ್ದಾಳೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

Shocking: ಕನಸಿನಲ್ಲಿ ದೇವಿ ನರಬಲಿ ಕೇಳಿದಳು ಎಂದು ವ್ಯಕ್ತಿಯ ಹತ್ಯೆಗೈದ ಮಹಿಳೆ
ನರಬಲಿ ಹೆಸರಿನಲ್ಲಿ ವ್ಯಕ್ತಿಯ ಹತ್ಯೆಗೈದ ಮಹಿಳೆ
Follow us
|

Updated on: Apr 14, 2024 | 11:37 AM

ಹರಿಯಾಣ: ಮಹಿಳೆಯೊಬ್ಬಳು ತನ್ನ ಕನಸಿನಲ್ಲಿ ದೇವಿ ಕಾಣಿಸಿಕೊಂಡು ನರಬಲಿ ಕೇಳಿದ್ದಾಳೆ ಎಂದು ತನ್ನ ಸಂಬಂಧಿಕ ವ್ಯಕ್ತಿಯನ್ನೇ ಕೊಂದಿರುವ ಘಟನೆ ಹರ್ಯಾಣದ ಅಂಬಾಲಾದಲ್ಲಿ ನಡೆದಿದೆ. ಹತ್ಯೆಗೈದ ಆರೋಪಿ ಪ್ರಿಯಾ ಮತ್ತು ಹತ್ಯೆಯಾದ ವ್ಯಕ್ತಿ ಮಹೇಶ್ ಗುಪ್ತಾ (44) ಎಂದು ಗುರುತಿಸಲಾಗಿದೆ. ಇವರಿಬ್ಬರು ಹತ್ತಿರದ ಸಂಬಂಧಿಕರು ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಆರೋಪಿ ಪ್ರಿಯಾ ಮನೆಯಲ್ಲಿ ಮಹೇಶ್ ಗುಪ್ತಾ ಮೃತದೇಹ ಪೊಲೀಸರಿಗೆ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನರಬಲಿಯ ಭಾಗವಾಗಿ ಈ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆಕೆ ಹೇಳಿದ್ದಾಳೆ . ಇದಲ್ಲದೇ ಕೊನೆಗೆ ಆಕೆಗೆ ಸಹಾಯ ಮಾಡಿದ ಆಕೆಯ ಸಂಬಂಧಿಕರಾದ ಹೇಮಂತ್ ಮತ್ತು ಪ್ರೀತಿ ಅವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಮೃತ ವ್ಯಕ್ತಿ ಮಹೇಶ್ ಗುಪ್ತಾ ದಿನಸಿ ಅಂಗಡಿಯನ್ನು ಇಟ್ಟುಕೊಂಡಿದ್ದರು. ಈ ದಿನಸಿ ಅಂಗಡಿಯಲ್ಲೇ ಪ್ರಿಯಾ ಕೆಲಕಾಲ ಕೆಲಸ ಮಾಡಿದ್ದಳು. ಇತ್ತೀಚೆಗಷ್ಟೇ ಪ್ರಿಯಾ ಮಹೇಶ್ ಬಳಿ ಮನೆಗೆ ಸಾಮಾನು ತಂದು ಕೊಡುವಂತೆ ಹೇಳಿದ್ದಾಳೆ. ಬುಧವಾರ ಪ್ರಿಯಾ ಮನೆಗೆ ಸಾಮಾನು ಕೊಡಲು ಹೋಗಿದ್ದ ಮಹೇಶ್​​ನನ್ನು ಪ್ರಿಯಾ ಆಕೆಯ ಮೂವರು ಸಹಚರರು ಸೇರಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಆರೋಪಿ ಪ್ರಿಯಾ ಮನೆಯ ಮುಂದೆ ಮೃತ ಮಹೇಶ್ ಬೈಕ್ ಪತ್ತೆಯಾಗಿದ್ದು, ಮೃತನ ಸಂಬಂಧಿಕರಿಗೆ ಅನುಮಾನ ಹುಟ್ಟಿಕೊಂಡು ಅಲ್ಲಿಗೆ ತೆರಳಿದ್ದಾರೆ. ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಾರದ ಕಾರಣ ಬಾಗಿಲು ಒಡೆದು ಒಳ ಪ್ರವೇಶಿಸಿದ್ದಾರೆ. ಆ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹೇಶ್ ನನ್ನು ನೆಲದ ಮೇಲೆ ಎಳೆದೊಯ್ಯುತ್ತಿರುವುದನ್ನು ಕುಟುಂಬಸ್ಥರು ಕಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು