Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking: ಕನಸಿನಲ್ಲಿ ದೇವಿ ನರಬಲಿ ಕೇಳಿದಳು ಎಂದು ವ್ಯಕ್ತಿಯ ಹತ್ಯೆಗೈದ ಮಹಿಳೆ

ಆರೋಪಿ ಪ್ರಿಯಾ ಮನೆಯಲ್ಲಿ ಮಹೇಶ್ ಗುಪ್ತಾ ಮೃತದೇಹ ಪೊಲೀಸರಿಗೆ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನರಬಲಿಯ ಭಾಗವಾಗಿ ಈ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆಕೆ ಹೇಳಿದ್ದಾಳೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

Shocking: ಕನಸಿನಲ್ಲಿ ದೇವಿ ನರಬಲಿ ಕೇಳಿದಳು ಎಂದು ವ್ಯಕ್ತಿಯ ಹತ್ಯೆಗೈದ ಮಹಿಳೆ
ನರಬಲಿ ಹೆಸರಿನಲ್ಲಿ ವ್ಯಕ್ತಿಯ ಹತ್ಯೆಗೈದ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: Apr 14, 2024 | 11:37 AM

ಹರಿಯಾಣ: ಮಹಿಳೆಯೊಬ್ಬಳು ತನ್ನ ಕನಸಿನಲ್ಲಿ ದೇವಿ ಕಾಣಿಸಿಕೊಂಡು ನರಬಲಿ ಕೇಳಿದ್ದಾಳೆ ಎಂದು ತನ್ನ ಸಂಬಂಧಿಕ ವ್ಯಕ್ತಿಯನ್ನೇ ಕೊಂದಿರುವ ಘಟನೆ ಹರ್ಯಾಣದ ಅಂಬಾಲಾದಲ್ಲಿ ನಡೆದಿದೆ. ಹತ್ಯೆಗೈದ ಆರೋಪಿ ಪ್ರಿಯಾ ಮತ್ತು ಹತ್ಯೆಯಾದ ವ್ಯಕ್ತಿ ಮಹೇಶ್ ಗುಪ್ತಾ (44) ಎಂದು ಗುರುತಿಸಲಾಗಿದೆ. ಇವರಿಬ್ಬರು ಹತ್ತಿರದ ಸಂಬಂಧಿಕರು ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಆರೋಪಿ ಪ್ರಿಯಾ ಮನೆಯಲ್ಲಿ ಮಹೇಶ್ ಗುಪ್ತಾ ಮೃತದೇಹ ಪೊಲೀಸರಿಗೆ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನರಬಲಿಯ ಭಾಗವಾಗಿ ಈ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆಕೆ ಹೇಳಿದ್ದಾಳೆ . ಇದಲ್ಲದೇ ಕೊನೆಗೆ ಆಕೆಗೆ ಸಹಾಯ ಮಾಡಿದ ಆಕೆಯ ಸಂಬಂಧಿಕರಾದ ಹೇಮಂತ್ ಮತ್ತು ಪ್ರೀತಿ ಅವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಮೃತ ವ್ಯಕ್ತಿ ಮಹೇಶ್ ಗುಪ್ತಾ ದಿನಸಿ ಅಂಗಡಿಯನ್ನು ಇಟ್ಟುಕೊಂಡಿದ್ದರು. ಈ ದಿನಸಿ ಅಂಗಡಿಯಲ್ಲೇ ಪ್ರಿಯಾ ಕೆಲಕಾಲ ಕೆಲಸ ಮಾಡಿದ್ದಳು. ಇತ್ತೀಚೆಗಷ್ಟೇ ಪ್ರಿಯಾ ಮಹೇಶ್ ಬಳಿ ಮನೆಗೆ ಸಾಮಾನು ತಂದು ಕೊಡುವಂತೆ ಹೇಳಿದ್ದಾಳೆ. ಬುಧವಾರ ಪ್ರಿಯಾ ಮನೆಗೆ ಸಾಮಾನು ಕೊಡಲು ಹೋಗಿದ್ದ ಮಹೇಶ್​​ನನ್ನು ಪ್ರಿಯಾ ಆಕೆಯ ಮೂವರು ಸಹಚರರು ಸೇರಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಆರೋಪಿ ಪ್ರಿಯಾ ಮನೆಯ ಮುಂದೆ ಮೃತ ಮಹೇಶ್ ಬೈಕ್ ಪತ್ತೆಯಾಗಿದ್ದು, ಮೃತನ ಸಂಬಂಧಿಕರಿಗೆ ಅನುಮಾನ ಹುಟ್ಟಿಕೊಂಡು ಅಲ್ಲಿಗೆ ತೆರಳಿದ್ದಾರೆ. ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಾರದ ಕಾರಣ ಬಾಗಿಲು ಒಡೆದು ಒಳ ಪ್ರವೇಶಿಸಿದ್ದಾರೆ. ಆ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹೇಶ್ ನನ್ನು ನೆಲದ ಮೇಲೆ ಎಳೆದೊಯ್ಯುತ್ತಿರುವುದನ್ನು ಕುಟುಂಬಸ್ಥರು ಕಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು