AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News : ಅಯ್ಯೋ…… ವೇದಿಕೆಯ ಮೇಲೆ ಅಯ್ಯೋ ಶ್ರದ್ಧಾ ಕಾಲೆಳೆದ ಪ್ರಧಾನಿ ಮೋದಿ

aiyyo shraddha; ಸೋಶಿಯಲ್ ಮೀಡಿಯಾದಲ್ಲಿ ಮನೋರಂಜನೆಗೇನು ಕೊರತೆಯಿಲ್ಲ. ವಿಭಿನ್ನ ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ಹೊಂದಿರುವವರಲ್ಲಿ ಅಯ್ಯೋ ಶ್ರದ್ಧಾ ಕೂಡ ಒಬ್ಬರು. ಹಾಸ್ಯಮಯ ವಿಡಿಯೋಗಳ ಮೂಲಕ ಕನ್ನಡಿಗರು ಮಾತ್ರವಲ್ಲದೆ ವಿದೇಶಿಗರ ಮನಸ್ಸನ್ನು ಗೆದ್ದಿದ್ದಾರೆ. ಶ್ರದ್ಧಾ ಜೈನ್ ರವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ರಾಜಧಾನಿಯ ಭಾರತ್ ಮಂಟಪದಲ್ಲಿ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್‌ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತುತ್ತಿದ್ದಂತೆ ಪ್ರಧಾನಿ ಮೋದಿಯವರು ಅಯ್ಯೋ ಎನ್ನುತ್ತಲೇ ಶ್ರದ್ಧಾರವರ ಕಾಲೆಳೆದಿದ್ದಾರೆ. ಸದ್ಯಕ್ಕೆ ಈ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆಯುತ್ತಿವೆ.

Viral News : ಅಯ್ಯೋ...... ವೇದಿಕೆಯ ಮೇಲೆ ಅಯ್ಯೋ ಶ್ರದ್ಧಾ ಕಾಲೆಳೆದ ಪ್ರಧಾನಿ ಮೋದಿ
ಸಾಯಿನಂದಾ
| Edited By: |

Updated on: Mar 09, 2024 | 10:38 AM

Share

ಸೋಶಿಯಲ್ ಮೀಡಿಯಾವು ಬಹು ದೊಡ್ಡ ಮನೋರಂಜನಾ ಜಗತ್ತಾಗಿ ಸೃಷ್ಟಿಯಾಗಿದೆ. ಇದರ ಮೂಲಕ ಜನಪ್ರಿಯತೆಯನ್ನು ಗಳಿಸಿಕೊಂಡವರು ಅನೇಕರಿದ್ದಾರೆ. ಅಂತಹವರ ಸಾಲಿಗೆ ಅಯ್ಯೋ ಶ್ರದ್ಧಾ ಎಂದೇ ಖ್ಯಾತಿ ಗಳಿಸಿಕೊಂಡಿರುವ ಶ್ರದ್ಧಾ ಜೈನ್ ಕೂಡ ಸೇರುತ್ತಾರೆ. ಅಯ್ಯೋ ಶ್ರದ್ಧಾ ಎನ್ನುವ ಯೂಟ್ಯೂಬ್ ಚಾನೆಲ್ ನಲ್ಲಿ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿಯೂ ವಿಡಿಯೋ ಮಾಡಿ ಶೇರ್ ಮಾಡುವ ಇವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವಿದೆ. ಆದರೆ ಇದೀಗ ದೇಶದ ಪ್ರಧಾನಿಯವರು ಶ್ರದ್ಧಾ ಜೈನ್‌ ಅವರು ಸೃಜನಶೀಲ ಕ್ರಿಯೇಟರ್‌ ಪ್ರಶಸ್ತಿಯನ್ನು ನೀಡಿದ್ದಾರೆ. ಈ ವೇಳೆಯಲ್ಲಿ ಶ್ರದ್ಧಾರವರನ್ನು ಅಯ್ಯೋ ಎನ್ನುತ್ತಲೇ ತಮಾಷೆ ಮಾಡಿದ್ದಾರೆ.

ಹೌದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ಪ್ರಖ್ಯಾತ ಆರ್‌ಜೆ ಹಾಗೂ ಕಂಟೆಂಟ್‌ ಕ್ರಿಯೇಟರ್‌ ಆಗಿರುವ ಶ್ರದ್ಧಾ ಜೈನ್‌ ಅವರಿಗೆ ಮಹಿಳಾ ವಿಭಾಗದಲ್ಲಿ ಸೃಜನಶೀಲ ಕ್ರಿಯೇಟರ್‌ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಲು ಶ್ರದ್ಧಾರವರು ವೇದಿಕೆಗೆ ಬರುತ್ತಿದ್ದಂತೆ ಪ್ರಧಾನಿ ಮೋದಿ ಅಯ್ಯೋ.. ಎನ್ನುತ್ತಲೇ ಕಾಲೆಳೆದಿದ್ದಾರೆ. ಈ ವೇಳೆಯಲ್ಲಿ ಶ್ರದ್ಧಾರವರು ಜೋರಾಗಿ ನಕ್ಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವೊಂದು ವೈರಲ್ ಆಗಿವೆ.

ವೈರಲ್​​​ ವಿಡಯೋ ಇಲ್ಲಿದೆ ನೋಡಿ:

ನಮ್ಮ ತುಳುವೆರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ದೇಶದ ಪ್ರಧಾನಿ ಮೋದಿಯವರು ಅಯ್ಯೋ ಎನ್ನುತ್ತಾ ಶ್ರದ್ಧಾರವರಿಗೆ ತಮಾಷೆ ಮಾಡುವುದನ್ನು ನೋಡಬಹುದು. ಆ ಬಳಿಕ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್‌ ಪ್ರಶಸ್ತಿಯನ್ನು ನೀಡಿದ್ದು, ಈ ವೇಳೆ ಪ್ರಧಾನಿ ಮೋದಿ, ‘ಶ್ರದ್ಧಾ ಜೊತೆಗೆ ಇದು ನನ್ನ ಎರಡನೇ ಭೇಟಿ, ಈ ಪ್ರಶಸ್ತಿ ಅವರಿಗೆ ಕೊಡಲು ಖುಷಿಯಾಗುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​

ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಶ್ರದ್ಧಾರವರು, ‘ಮನೆಯಲ್ಲಿ ಸ್ಮಾರ್ಟ್​ಫೋನ್ ಇಟ್ಟುಕೊಂಡು ಕಂಟೆಂಟ್ ಮಾಡುವುದು ಕೂಡ ಒಂದು ಕೌಶಲ್ಯ ಎನ್ನುವುದನ್ನು ಈ ಪ್ರಶಸ್ತಿಯೂ ಸಾಬೀತು ಮಾಡುತ್ತಿದೆ. ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಕ್ಕೆ ತುಂಬು ಹೃದಯದ ಧನ್ಯವಾದಗಳು’ ಎಂದು ತಿಳಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋಗೆ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಬಳಕೆದಾರರೊಬ್ಬರು, ಒಳ್ಳೆಯದಾಗಲಿ, ಇನ್ನು ಅನೇಕ ಪ್ರಶಸ್ತಿಗಳು ಸಿಗುವಂತಾಗಲಿ ಎಂದಿದ್ದಾರೆ. ಮತ್ತೊಬ್ಬರು, ಕರಾವಳಿ ಎನ್ನುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ