AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್​​​ ಪಕ್ಕಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

21 ವರ್ಷದ ಯುವತಿ ಆಕೆಯ 8 ವರ್ಷದ ಸಹೋದರನೊಂದಿಗೆ ಪೊಲೀಸ್​​ ಠಾಣೆಗೆ ಹೋಗಿ ತನ್ನ ಪೋಷಕರ ವಿರುದ್ದ ಕೇಸು ದಾಖಲಿಸಿದ್ದಾಳೆ. ಮೊಬೈಲ್ ಬಳಸಿದರೆ ಮನೆಯಲ್ಲಿ ಅಪ್ಪ ಅಮ್ಮ ಗದರಿಸುತ್ತಾರೆ, ಕೆಲವೊಮ್ಮೆ ಹೊಡೆಯುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ದಂಪತಿ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಕೇಸು ದಾಖಲಾಗಿದೆ.

ಫೋನ್​​​ ಪಕ್ಕಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು
Follow us
ಅಕ್ಷತಾ ವರ್ಕಾಡಿ
|

Updated on:Aug 03, 2024 | 2:50 PM

ಮಧ್ಯಪ್ರದೇಶ: ಫೋನ್​​ ನೋಡಿದ್ದು ಸಾಕು, ಪಕ್ಕಕಿಡು ಎಂದು ಗದರಿಸಿದ ಪೋಷಕರ ವಿರುದ್ದ ಇಬ್ಬರು ಮಕ್ಕಳು ಎಫ್ಐಆರ್ ದಾಖಲಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. 21 ವರ್ಷದ ಯುವತಿ ಆಕೆಯ 8 ವರ್ಷದ ಸಹೋದರನೊಂದಿಗೆ ಚಂದನ್ ನಗರ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಪೊಲೀಸರು ಪೋಷಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನು ಪ್ರಶ್ನಿಸಿ ದಂಪತಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ದಂಪತಿ ವಿರುದ್ಧ ಆರಂಭವಾದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಕೀಲ ಧರ್ಮೇಂದ್ರ ಚೌಧರಿ ಅವರ ಪ್ರಕಾರ, ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ, 2021 ರ ಅಕ್ಟೋಬರ್ 25 ರಂದು ಮಕ್ಕಳು ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಮೊಬೈಲ್ ಬಳಸಿದರೆ ಮನೆಯಲ್ಲಿ ಅಪ್ಪ ಅಮ್ಮ ಹೊಡೆಯುತ್ತಾರೆ, ಗದರಿಸುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾಲಕರ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ

ಎಫ್‌ಐಆರ್ ದಾಖಲಾದ ನಂತರ ಇಬ್ಬರೂ ಮಕ್ಕಳು ತಮ್ಮ ಚಿಕ್ಕಮ್ಮನೊಂದಿಗೆ ವಾಸಿಸುತ್ತಿರುವುದಾಗಿ ವರದಿಯಾಗಿದೆ. ಮಕ್ಕಳು ಮೊಬೈಲ್, ಟಿವಿ ಚಟದಿಂದ ಪ್ರತಿ ಪೋಷಕರೂ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳನ್ನು ಬೈಯುವುದು ತೀರಾ ಸಾಮಾನ್ಯ ಸಂಗತಿ, ಇದರಲ್ಲಿ ಕೋರ್ಟ್​​ ಕೇಸು ಅಗತ್ಯವಿರಲಿಲ್ಲ ಎಂದು ಎಫ್‌ಐಆರ್ ದಾಖಲಿಸುವ ಮುನ್ನ ದಂಪತಿ ನ್ಯಾಯಾಲಯದಲ್ಲಿ ಹಲವು ಬಾರಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Sat, 3 August 24

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ