AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್​​​ ಪಕ್ಕಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

21 ವರ್ಷದ ಯುವತಿ ಆಕೆಯ 8 ವರ್ಷದ ಸಹೋದರನೊಂದಿಗೆ ಪೊಲೀಸ್​​ ಠಾಣೆಗೆ ಹೋಗಿ ತನ್ನ ಪೋಷಕರ ವಿರುದ್ದ ಕೇಸು ದಾಖಲಿಸಿದ್ದಾಳೆ. ಮೊಬೈಲ್ ಬಳಸಿದರೆ ಮನೆಯಲ್ಲಿ ಅಪ್ಪ ಅಮ್ಮ ಗದರಿಸುತ್ತಾರೆ, ಕೆಲವೊಮ್ಮೆ ಹೊಡೆಯುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ದಂಪತಿ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಕೇಸು ದಾಖಲಾಗಿದೆ.

ಫೋನ್​​​ ಪಕ್ಕಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು
ಅಕ್ಷತಾ ವರ್ಕಾಡಿ
|

Updated on:Aug 03, 2024 | 2:50 PM

Share

ಮಧ್ಯಪ್ರದೇಶ: ಫೋನ್​​ ನೋಡಿದ್ದು ಸಾಕು, ಪಕ್ಕಕಿಡು ಎಂದು ಗದರಿಸಿದ ಪೋಷಕರ ವಿರುದ್ದ ಇಬ್ಬರು ಮಕ್ಕಳು ಎಫ್ಐಆರ್ ದಾಖಲಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. 21 ವರ್ಷದ ಯುವತಿ ಆಕೆಯ 8 ವರ್ಷದ ಸಹೋದರನೊಂದಿಗೆ ಚಂದನ್ ನಗರ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಪೊಲೀಸರು ಪೋಷಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನು ಪ್ರಶ್ನಿಸಿ ದಂಪತಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ದಂಪತಿ ವಿರುದ್ಧ ಆರಂಭವಾದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಕೀಲ ಧರ್ಮೇಂದ್ರ ಚೌಧರಿ ಅವರ ಪ್ರಕಾರ, ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ, 2021 ರ ಅಕ್ಟೋಬರ್ 25 ರಂದು ಮಕ್ಕಳು ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಮೊಬೈಲ್ ಬಳಸಿದರೆ ಮನೆಯಲ್ಲಿ ಅಪ್ಪ ಅಮ್ಮ ಹೊಡೆಯುತ್ತಾರೆ, ಗದರಿಸುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾಲಕರ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ

ಎಫ್‌ಐಆರ್ ದಾಖಲಾದ ನಂತರ ಇಬ್ಬರೂ ಮಕ್ಕಳು ತಮ್ಮ ಚಿಕ್ಕಮ್ಮನೊಂದಿಗೆ ವಾಸಿಸುತ್ತಿರುವುದಾಗಿ ವರದಿಯಾಗಿದೆ. ಮಕ್ಕಳು ಮೊಬೈಲ್, ಟಿವಿ ಚಟದಿಂದ ಪ್ರತಿ ಪೋಷಕರೂ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳನ್ನು ಬೈಯುವುದು ತೀರಾ ಸಾಮಾನ್ಯ ಸಂಗತಿ, ಇದರಲ್ಲಿ ಕೋರ್ಟ್​​ ಕೇಸು ಅಗತ್ಯವಿರಲಿಲ್ಲ ಎಂದು ಎಫ್‌ಐಆರ್ ದಾಖಲಿಸುವ ಮುನ್ನ ದಂಪತಿ ನ್ಯಾಯಾಲಯದಲ್ಲಿ ಹಲವು ಬಾರಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Sat, 3 August 24

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!