AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಬೀದಿ ನಾಯಿಯೊಂದು ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ಸಾಲಿನಿಂದ ನಿಂತುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 26, 2026 | 7:26 PM

Share

ಸಿಕ್ಕಿಂ, ಮೇ 26: ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯಲ್ಲಿ ಸಾಕಿದ ಶ್ವಾನವೇ ಇರಲಿ, ಬೀದಿ ನಾಯಿಯೇ ಇರಲಿ, ಒಮ್ಮೆ ಪ್ರೀತಿ ತೋರಿದರೆ ಅವುಗಳು ಜೀವನ ಪರ್ಯಂತ ನೆನೆಪಿಟ್ಟುಕೊಳ್ಳುತ್ತದೆ. ಹೀಗಿರುವಾಗ ಬೀದಿ ನಾಯಿಯೊಂದು ವಿದ್ಯಾರ್ಥಿಗಳನ್ನೇ ಫ್ರೆಂಡ್ಸ್ ಮಾಡಿಕೊಂಡಿದೆ. ಇದೀಗ ಸ್ಕೂಲ್ ಅಸೆಂಬ್ಲಿಯ ವೇಳೆ ಸಿಕ್ಕಿಂನ (Sikkim) ಶಾಲೆಯೊಂದರಲ್ಲಿನ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಹೌದು, ಮಕ್ಕಳ ಜತೆಗೆ ಸಾಲಿನಲ್ಲಿ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾಗಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ.

ಪ್ರಸನ್ನ ಪಖ್ರಿನ್ (Prasanna Pakhrin) ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶ್ವಾನವೊಂದು ಸ್ಕೂಲ್ ಅಸೆಂಬ್ಲಿಯಲ್ಲಿ ಭಾಗಿಯಾಗಿರುವ ವಿಡಿಯೋ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸಾಲಾಗಿ ಶಾಲಾ ಆವರಣದಲ್ಲಿ ನಿಂತುಕೊಂಡಿರುವುದನ್ನು ಕಾಣಬಹುದು. ಇದೇ ವೇಳೆ ಬೀದಿ ನಾಯಿಯೊಂದು ಸ್ಕೂಲ್ ಅಸೆಂಬ್ಲಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದೆ. ಮಕ್ಕಳ ಜತೆಗೆ ಸಾಲಿನಲ್ಲಿ ನಿಂತುಕೊಂಡ ಶ್ವಾನವು ತನ್ನ ಎರಡು ಕಾಲುಗಳನ್ನು ಮೇಲೆತ್ತಿಕೊಂಡು ಪ್ರಾರ್ಥನೆಯಲ್ಲಿ ಭಾಗಿಯಾಗಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು

ಈ ವಿಡಿಯೋ ಒಂಭತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಶ್ವಾನವು ಈ ಪುಟಾಣಿಗಳ ಆಪ್ತ ಸ್ನೇಹಿತ ಎಂದಿದ್ದಾರೆ. ಇನ್ನೊಬ್ಬರು, ಮಕ್ಕಳಿಗಿಂತ ಈ ಶ್ವಾನವೇ ಶಿಸ್ತಿನ ಸಿಪಾಯಿಯಂತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮುದ್ದಾಗಿದೆ ಈ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ