AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬೇಯಿಸಿದ ಮೊಟ್ಟೆ ಸಿಪ್ಪೆಯನ್ನು ಹೀಗೂ ತೆಗೆಯಬಹುದು, ಇಲ್ಲಿದೆ ವಿಡಿಯೋ

ಮೊಟ್ಟೆಯೆಂದರೆ ಎಲ್ಲರಿಗೂ ಇಷ್ಟನೇ. ಆದರೆ, ಬೇಯಿಸಿದ ಮೊಟ್ಟೆಯ ಸಿಪ್ಪೆಯನ್ನು ಬಿಡಿಸುವುದೆಂದರೆ ಕಷ್ಟ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಒಂದೇ ಒಂದು ಸೆಕೆಂಡ್ ನಲ್ಲಿ ಮೊಟ್ಟೆ ಸಿಪ್ಪೆ ತೆಗೆದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿವೆ.

Viral Video : ಬೇಯಿಸಿದ ಮೊಟ್ಟೆ ಸಿಪ್ಪೆಯನ್ನು ಹೀಗೂ ತೆಗೆಯಬಹುದು, ಇಲ್ಲಿದೆ ವಿಡಿಯೋ
ಸಾಯಿನಂದಾ
| Edited By: |

Updated on: Jun 01, 2024 | 12:36 PM

Share

ಬೇಯಿಸಿದ ಮೊಟ್ಟೆಯು ಆರೋಗ್ಯಕ್ಕೆ ಲಾಭದಾಯಕವಾಗಿರುವುದಲ್ಲದೇ ಅಷ್ಟೇ ರುಚಿಯಾಗಿರುತ್ತದೆ. ಈ ಮೊಟ್ಟೆಗಳಲ್ಲಿ ಪ್ರೋಟೀನ್, ವಿಟಮಿನ್ ಬಿ 6, ಬಿ 12 ಮತ್ತು ವಿಟಮಿನ್ ಡಿ, ಕ್ಯಾಲ್ಸಿಯಂ, ಸತು, ಸೆಲೆನಿಯಮ್ ಮತ್ತು ಫೋಲೇಟ್ ಅಂಶಗಳು ಹೇರಳವಾಗಿದ್ದು, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎನ್ನುವುದು ಎಲ್ಲರಿಗೂ ತಿಳಿದಿದೆ. ತಿನ್ನಲು ರುಚಿಕರವಾಗಿರುವ ಬೇಯಿಸಿದ ಮೊಟ್ಟೆಯ ಸಿಪ್ಪೆ ತೆಗೆಯುವುದು ಸ್ವಲ್ಪ ಕಷ್ಟವೇ. ಒಂದು ವೇಳೆ ಗಮನ ಆ ಕಡೆ ಈ ಕಡೆಯಾದರೂ ಮೊಟ್ಟೆಯು ಎರಡು ಭಾಗವಾಗುತ್ತದೆ.

ಆದರೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬನು ಕೆಲವೇ ಕೆಲವು ಸೆಕೆಂಡ್ ಗಳಲ್ಲಿ ಮೊಟ್ಟೆ ಸಿಪ್ಪೆ ಸುಲಿದು ತೋರಿಸಿದ್ದಾನೆ. ಈ ವಿಡಿಯೋವೊಂದು ನೆಟ್ಟಿಗರ ವಲಯದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೌದು, ಬೀದಿ ಬದಿಯ ವ್ಯಾಪಾರಿಯೊಬ್ಬರು ಕೋಳಿ ಮೊಟ್ಟೆಯ ಸಿಪ್ಪೆಯನ್ನು ಬಹಳ ಸುಲಭವಾಗಿ ತೆಗೆಯುವುದರಿಂದ ವಿಡಿಯೋವು ಆರಂಭವಾಗುತ್ತದೆ. ಆ ಬಳಿಕ ವಿದೇಶಿಗನೊಬ್ಬನು ಬೀದಿ ಬದಿಯ ವ್ಯಾಪಾರಿಯಂತೆ ಮೊಟ್ಟೆಯ ಸಿಪ್ಪೆ ಸುಲಿಯಲು ಮುಂದಾಗಿದ್ದಾನೆ.

ಇದನ್ನೂ ಓದಿ: ಮತಗಟ್ಟೆ ಬಳಿಯಿರುವ ಕೊಳಕ್ಕೆ EVM ಎಸೆದು ದುಷ್ಕೃತ್ಯ; ವಿಡಿಯೋ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ನಾಲ್ಕು ಮೊಟ್ಟೆಯನ್ನು ಬೇಯಿಸಿ, ಆ ಮೊಟ್ಟೆಯ ಮೇಲೆ ಸಣ್ಣ ರಂಧ್ರವನ್ನು ಮಾಡಿದ್ದಾನೆ. ಆ ಬಳಿಕ ಈ ರಂಧ್ರದಿಂದ ಚಮಚವನ್ನು ಹಾಕಿ ಒಂದು ಸುತ್ತು ತಿರುಗಿಸುತ್ತಿದ್ದಂತೆ ಮೊಟ್ಟೆಯ ಸಿಪ್ಪೆಯು ಕೈಯಲ್ಲಿ ಬಂದಿದೆ. dobrovolskyi_hchef ಇನ್‌ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋವನ್ನು 14 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೊಟ್ಟೆಯ ಸಿಪ್ಪೆ ಸುಲಿಯುವುದು ಎಷ್ಟು ಸುಲಭ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​