AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಖಾಲಿ ರಸ್ತೆಯಲ್ಲೂ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು ನಿಂತ ವ್ಯಕ್ತಿ

ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿದಿದ್ದರೂ ಗಾಳಿಗೆ ತೂರುವವರೇ ಹೆಚ್ಚು. ಇದೀಗ ಸಿಂಗಾಪುರದ ವ್ಯಕ್ತಿಯೊಬ್ಬರು ಖಾಲಿರಸ್ತೆಯಲ್ಲಿ ಟ್ರಾಫಿಕ್ ರೂಲ್ಸ್ ಪಾಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಖಾಲಿ ರಸ್ತೆಯಲ್ಲೂ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು ನಿಂತ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Jun 04, 2026 | 11:26 AM

Share

ಸಿಂಗಾಪುರ, ಜೂನ್ 04: ಸಂಚಾರಿ ನಿಯಮಗಳನ್ನು (Traffic Rules) ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರು ಹೈಲ್ಮೆಟ್‌ ಧರಿಸದೆ, ಸೀಟ್‌ ಬೆಲ್ಟ್‌ ಧರಿಸುವುದಿಲ್ಲ, ಗ್ರೀನ್ ಸಿಗ್ನಲ್ ಬರುವವರೆಗೂ ಕಾಯುವುದೇ ಇಲ್ಲ ವಾಹನ ಚಲಾಯಿಸಿ ಟ್ರಾಫಿಕ್‌ ರೂಲ್ಸ್‌ಗಳನ್ನು ಬ್ರೇಕ್‌ ಮಾಡ್ತಾರೆ. ಇದಕ್ಕೆ ವ್ಯತಿರಿಕ್ತವಾಗಿದೆ ಈ ದೃಶ್ಯ. ಸಿಂಗಾಪುರದ (Singapore) ಖಾಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಟ್ರಾಫಿಕ್ ನಿಮಯ ಪಾಲಿಸಿದ್ದಾರೆ. ತಡರಾತ್ರಿ 1 ಗಂಟೆಯ ವೇಳೆ ವಾಹನಗಳಿಲ್ಲದ ರಸ್ತೆಯಲ್ಲಿ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು, ಆ ಬಳಿಕ ರಸ್ತೆ ದಾಟಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಟ್ರಾಫಿಕ್ ರೂಲ್ಸ್ ಪಾಲಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೃತಿಕಾ ಜೈನ್ (Kritika Jain) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇದು ಅಭ್ಯಾಸವೋ, ಶಿಸ್ತೋ ತಿಳಿಯದು ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಕ್ಲಿಪಿಂಗ್ ನಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ರಸ್ತೆಯಲ್ಲಿ ವಾಹನಗಳು ಓಡಾಡದೇ ಖಾಲಿ ಇರುವುದನ್ನು ಗಮನಿಸಬಹುದು. ಹೀಗಿರುವಾಗ ವ್ಯಕ್ತಿಯೊಬ್ಬರು ರೆಡ್ ಸಿಗ್ನಲ್ ಇರುವುದನ್ನು ಗಮನಿಸಿದ್ದಾರೆ. ಆ ಬಳಿಕ ಗ್ರೀನ್ ಸಿಗ್ನಲ್ ಬರುವವರೆಗೆ ಕಾದು ನಿಂತು ಆ ಬಳಿಕ ರಸ್ತೆ ದಾಟಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಇವರೇ ನಿಜವಾದ ಮಾದರಿ ಎಂದಿದ್ದಾರೆ. ಇನ್ನೊಬ್ಬರು, ಸಿಂಗಾಪುರದ ಕಠಿಣ ನಿಯಮಗಳೇ ಇಂತಹ ನಡವಳಿಕೆಗೆ ಕಾರಣ ಎಂದು ಹೇಳಿದ್ದಾರೆ. ಮತ್ತೊಬ್ಬರು, ಭಾರತದಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ತಾವೇನೋ ಸಾಧನೆ ಮಾಡಿದ್ದಂತೆ ಅಂದುಕೊಂಡುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 am, Thu, 4 June 26

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA