AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 33 ಕೋಟಿ ರೂ. ಗೆದ್ದ ವ್ಯಕ್ತಿ, ಖುಷಿ ತಡೆಯಲಾರದೇ ಹೃದಯಾಘಾತದಿಂದ ಸಾವು

ಹೆಚ್ಚು ಖುಷಿಯಾದ್ರೂ ಹಾರ್ಟ್‌ ಅಟ್ಯಾಕ್‌ ಸಂಭವಿಸುತ್ತದೆ ಎಂದು ಹೇಳುತ್ತಾರೆ. ಅದೇ ರೀತಿ ಸಿಂಗಾಪುರದ  ಮರೀನಾ ಬೇ ಕ್ಯಾಸಿನೋದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಜೂಜಿನಲ್ಲಿ ನಾಲ್ಕು ಮಿಲಿಯನ್‌ ಡಾಲರ್‌ ಜಾಕ್‌ಪಾಟ್‌ ಗೆದ್ದ ಖುಷಿಯಲ್ಲಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Viral Video: 33 ಕೋಟಿ ರೂ. ಗೆದ್ದ ವ್ಯಕ್ತಿ,  ಖುಷಿ ತಡೆಯಲಾರದೇ ಹೃದಯಾಘಾತದಿಂದ ಸಾವು
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 25, 2024 | 9:39 AM

Share

ನಮ್ಮೊಂದಿಗೆ ಅದೃಷ್ಟ ಇದ್ರೆ ಮಾತ್ರ ನಾವು ಮಾಡುವ ಕೆಲಸದಲ್ಲಿ ನಮಗೆ ಜಯ ಗಳಿಸಲು ಸುಲಭ ಸಾಧ್ಯ. ಆದರೆ ಕೆಲವೊಮ್ಮೆ ಈ ಅದೃಷ್ಟ ದೇವತೆಯೇ ನಮ್ಮ ಪಾಲಿಗೆ ದುರಾದೃಷ್ಟವಾಗಬಹುದು. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ವ್ಯಕ್ತಿಯೊಬ್ಬರು ತನ್ನ ಅದೃಷ್ಟದಿಂದ ಕ್ಯಾಸಿನೋ ಒಂದರಲ್ಲಿ ಬರೋಬ್ಬರಿ 4 ಮಿಲಿಯನ್‌ ಡಾಲರ್‌ (33,38,19,200) ಜಾಕ್‌ ಪಾಟ್‌ ಹೊಡೆದಿದ್ದು, ಜಾಕ್‌ ಪಾಟ್‌ ಗೆದ್ದ ವಿಪರೀತ ಖುಷಿಯಲ್ಲಿ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಈ ಆಘಾತಕಾರಿ ಘಟನೆ ಸಿಂಗಾಪುರದ ಮರೀನಾ ಬೇ ಕ್ಯಾಸಿನೋದಲ್ಲಿ ನಡೆದಿದ್ದು, ಕ್ಯಾಸಿನೊ ಜೂಜಿನಲ್ಲಿ ಬರೋಬ್ಬರಿ 4 ಮಿಲಿಯನ್‌ ಡಾಲರ್‌ ಗೆದ್ದ ವ್ಯಕ್ತಿಯೊಬ್ಬರು, ಜಾಕ್‌ ಪಾಟ್‌ ಹೊಡೆದ ವಿಪರೀತ ಖುಷಿಯಲ್ಲಿ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೇ ಆ ವ್ಯಕ್ತಿಗೆ ಅದೃಷ್ಟ ಖುಲಾಯಿಸಿದರೂ ಅದನ್ನು ಅನುಭವಿಸುವ ಭಾಗ್ಯ ಅವರಿಗೆ ಇಲ್ಲದಂತಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ:

ಈ ಕುರಿತ ಪೋಸ್ಟ್‌ ಒಂದನ್ನು @Osint613 ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಮರೀನಾ ಬೇ ಸಿಂಗಾಪುರ್‌ ಕ್ಯಾಸಿನೋದಲ್ಲಿ ವ್ಯಕ್ತಿಯೊಬ್ಬರು 4 ಮಿಲಿಯನ್‌ ಡಾಲರ್‌ ಗೆದ್ದ ಖುಷಿಯಲ್ಲಿ ಹೃದಯಾಘಾತದಿಂದ ನಿಧನರಾದರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ವಿಡಿಯೋದಲ್ಲಿ ಕ್ಯಾಸಿನೋದಲ್ಲಿ ಲಾಟರಿ ಗೆದ್ದ ಖುಷಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಸುತ್ತ ಕುಳಿತ ಕುಟುಂಬಸ್ಥರು ದಯವಿಟ್ಟು ಎದ್ದು ಬನ್ನಿ ಎಂದು  ಜೋರಾಗಿ ಅಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬೃಹತ್‌ ಗಾಳಿಪಟದೊಂದಿಗೆ ಆಕಾಶಕ್ಕೆ ಹಾರಿದ ಮೂರು ವರ್ಷದ ಮಗು

ಜೂನ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಹೆಚ್ಚು ಖುಷಿಪಟ್ಟರೂ ತುಂಬಾ ಕಷ್ಟ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ