Viral Tweet: ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆಯೇ ಬಳಸಲು ಅನುವು ಮಾಡಿಕೊಟ್ಟ ಮೋದಿಗೆ ಧನ್ಯವಾದ ಹೇಳಿದ ಬಾಲಿವುಡ್ ಗಾಯಕ

ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಪ್ರಧಾನಿಗೆ ಸೆಲ್ಯೂಟ್ ಮಾಡಿರುವ  ಬಾಲಿವುಡ್ ಗಾಯಕ ಮಿಕಾ ಸಿಂಗ್(Mika Singh)  ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Viral Tweet: ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆಯೇ ಬಳಸಲು ಅನುವು ಮಾಡಿಕೊಟ್ಟ ಮೋದಿಗೆ ಧನ್ಯವಾದ ಹೇಳಿದ ಬಾಲಿವುಡ್ ಗಾಯಕ
ಸೆಲ್ಯೂಟ್​​ ಮೋದಿ ಜೀ ಎಂದ ಮಿಕಾ ಸಿಂಗ್Image Credit source: Twitter
Follow us
|

Updated on:Apr 13, 2023 | 12:48 PM

ಕತಾರ್‌ನ ದೋಹಾ ವಿಮಾನ ನಿಲ್ದಾಣ(Doha Airport) ದಲ್ಲಿ ಡಾಲರ್​​​ನಂತೆಯೇ ಭಾರತೀಯ ಕರೆನ್ಸಿಯನ್ನು ಬಳಸಿ ಶಾಪಿಂಗ್​​ ಮಾಡಬಹುದು. ನಮ್ಮ ಹಣವನ್ನು ವಿದೇಶದಲ್ಲಿ ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಪ್ರಧಾನಿಗೆ ಸೆಲ್ಯೂಟ್ ಮಾಡಿರುವ  ಬಾಲಿವುಡ್ ಗಾಯಕ ಮಿಕಾ ಸಿಂಗ್(Mika Singh)  ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಸ್ವತಃ ಮಿಕಾ ಸಿಂಗ್​​ ಟ್ವಿಟರ್​​ನಲ್ಲಿ ಪೋಸ್ಟ್​​​ ಮಾಡಿದ್ದು, ಜೊತೆಗೆ ಪ್ರಧಾನಿಯವರನ್ನೂ ಟ್ಯಾಗ್ ಮಾಡಲಾಗಿದೆ.

ಕತಾರ್‌ನ ವಿಮಾನ ನಿಲ್ದಾಣದ ಐಷಾರಾಮಿ Louis Vuitton ಸ್ಟೋರ್‌ನಲ್ಲಿ ಭಾರತೀಯ ಕರೆನ್ಸಿ ಬಳಸಿ ಮಿಕಾ ಸಿಂಗ್ ಶಾಪಿಂಗ್​​ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಏ.12ರಂದು ಟ್ವಿಟರ್​​ನಲ್ಲಿ ಪೋಸ್ಟ್​​ ಮಾಡಲಾದ ಈ ವಿಡಿಯೋ ಇದೀಗಾಗಲೇ 5.59 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. 13.8 ಲೈಕ್​​​ ಹಾಗೂ ಸಾವಿರಾರು ರೀಟ್ವೀಟ್​​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಬಿಬಿಸಿ ವರದಿಗಾರನೊಂದಿಗೆ ಎಲಾನ್ ಮಸ್ಕ್ ಸಂದರ್ಶನ; ‘ನೀನು ಸುಳ್ಳು ಹೇಳುತ್ತಿದ್ದೀಯ’ ಎಂದು ವರದಿಗಾರನನ್ನು ದೂಷಿಸಿದ ಮಸ್ಕ್

ಸಾಕಷ್ಟು ಬಳಕೆದಾರರು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಿಕಾ ಸಿಂಗ್ ಅವರನ್ನು ಶ್ಲಾಘಿಸಿದರು. ಅವರ ಟ್ವೀಟ್‌ಗೆ ಬಳಕೆದಾರರು ಕಾಮೆಂಟ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಭಾರತೀಯ ಕರೆನ್ಸಿ ವಿದೇಶದೆಲ್ಲೆಡೆ ಬಲಗೊಳ್ಳುತ್ತಿದೆ ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. ನವ ಭಾರತದ ಶಕ್ತಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:47 pm, Thu, 13 April 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ