AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ನಿರಾಶ್ರಿತರ ಮಕ್ಕಳೊಂದಿಗೆ ಆಟವಾಡಿದ ಸ್ಲೋವಾಕ್ ಪೊಲೀಸ್ ಅಧಿಕಾರಿಗಳು: ವಿಡಿಯೋ ವೈರಲ್​

ಇಬ್ಬರು ಸ್ಲೋವಾಕ್ ಪೊಲೀಸ್ ಅಧಿಕಾರಿಗಳು ಉಕ್ರೇನಿಯನ್ ನಿರಾಶ್ರಿತರ ಮಕ್ಕಳೊಂದಿಗೆ ಆಡುತ್ತಾ ನಗುತ್ತಿರುವ ವಿಡಯೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಸೆಳೆದಿದೆ.

ಉಕ್ರೇನ್​ ನಿರಾಶ್ರಿತರ ಮಕ್ಕಳೊಂದಿಗೆ ಆಟವಾಡಿದ ಸ್ಲೋವಾಕ್ ಪೊಲೀಸ್ ಅಧಿಕಾರಿಗಳು: ವಿಡಿಯೋ ವೈರಲ್​
ಮಕ್ಕಳೊಂದಿಗೆ ಆಟವಾಡಿದ ಸ್ಲೋವಾಕ್ ಪೊಲೀಸ್ ಅಧಿಕಾರಿಗಳು
TV9 Web
| Edited By: |

Updated on:Mar 20, 2022 | 5:02 PM

Share

ಉಕ್ರೇನ್​ ಮೇಲಿನ ರಷ್ಯಾ ಯುದ್ಧ (Ukraine Russia War)  ಮುಂದುವರೆದಿದೆ. ಉಕ್ರೇನ್‌ನಿಂದ ರಷ್ಯಾದ ಸೈನ್ಯವನ್ನು ಹಿಂತೆಗೆದುಕೊಳ್ಳುವ ಯಾವುದೇ ಲಕ್ಷಣಗಳಿಲ್ಲದೆ, ದೇಶದ ಪರಿಸ್ಥಿತಿಯು ಪ್ರಪಂಚದಾದ್ಯಂತ ಜನರನ್ನು ಗಾಬರಿಗೊಳಿಸಿದೆ. ನಗರಗಳು ನಾಶವಾಗಿವೆ, ಮಕ್ಕಳು ಅನಾಥರಾಗಿದ್ದಾರೆ ಮತ್ತು ನಿರಾಶ್ರಿತರು ಅನಿಶ್ಚಿತ ಮತ್ತು ಅಜ್ಞಾತ ಜೀವನವನ್ನು ಪ್ರಾರಂಭಿಸಲು ಗಡಿ ಹಳ್ಳಿಗಳಲ್ಲಿ ಸಾಲುಗಟ್ಟಿ ನಿಂತಿದ್ದಾರೆ- ಒಂದು ಕಾಲದಲ್ಲಿ ಸಮೃದ್ಧವಾಗಿದ್ದ ಉಕ್ರೇನ್‌ನ ಭೂದೃಶ್ಯವು ಈಗ ಅಕ್ಷರಶಃ ಬೂದಿಯಾಗಿದೆ.

ಈ ನಡುವೆ ಸ್ಲೋವಾಕ್ ಗಣರಾಜ್ಯದ ಪೊಲೀಸರ ಅಧಿಕೃತ ಫೇಸ್‌ಬುಕ್ ಪ್ರೊಫೈಲ್‌ನಿಂದ ಹಂಚಿಕೊಂಡ ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಇಬ್ಬರು ಸ್ಲೋವಾಕ್ ಪೊಲೀಸ್ ಅಧಿಕಾರಿಗಳು ಉಕ್ರೇನಿಯನ್ ನಿರಾಶ್ರಿತರ ಮಕ್ಕಳೊಂದಿಗೆ ಆಡುತ್ತಾ ನಗುತ್ತಿರುವ ಫೋಟೋಗಳು ನೆಟ್ಟಿಗರನ್ನು ಸೆಳೆದಿದೆ. ನಿಷ್ಕಲ್ಮಶ ನಗುವನ್ನು ಹೊತ್ತ ಮಕ್ಕಳೊಂದಿಗೆ, ಜಗತ್ತಿನ ಅನಾಹುತಗಳ ಪರಿವೆಯಲ್ಲಿದೆ ತಮ್ಮದೇ ಪ್ರಪಂಚದಲ್ಲಿ ಆರಾಮವಾಗಿರುವ ಮಕ್ಕಳೊಂದಿಗೆ ಸೈನಿಕರು ಕೂಡ ಮಕ್ಕಳಾಗಿ ಕಾಣಿಸಿಕೊಂಡ ಫೋಟೋ, ವಿಡಿಯೋ ಇದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋಕ್ಕೆ ಶೀಘ್ರದಲ್ಲಿಯೇ ರಷ್ಯಾ ಉಕ್ರೇನಿನ ಮೇಲಿನ ಹಿಡಿತವನ್ನು ಸಡಿಲಿಸಲಿದೆ. ಎಲ್ಲವೂ ಸರಿಯಾಗಲಿದೆ. ಮಾನವೀಯತೆ ಗೆಲ್ಲಲಿದೆ ಎಂದು ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ಇದರ ಫೋಟೋ,ವಿಡಿಯೋಗಳು ಜಗತ್ತಿನಾದ್ಯಂತ ವೈರಲ್​ ಆಗಿವೆ. ದೇಶ ಕಾಯುವ ಮಹತ್ತರ ಜವಾಬ್ದಾರಿ, ಒತ್ತಡ ಹೆಗಲಮೇಲಿದ್ದರೂ ಮಕ್ಕಳನ್ನು ಕಂಡು ನಗುಮೊಗ ತೋರುವ ಸೈನಿಕರ ಒಳ್ಳೆಯತನಕ್ಕೆ ಪ್ರಪಂಚದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

ತಂದೂರಿ ಫ್ರುಟ್​ ದೋಸೆ ನೋಡಿ ನೋ ಥ್ಯಾಂಕ್ಸ್​ ಎಂದ ನೆಟ್ಟಿಗರು: ವಿಡಿಯೋ ವೈರಲ್​

Published On - 5:01 pm, Sun, 20 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್