AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

'Smile Designing' Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ
'Smile Designing' SurgeryImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 20, 2024 | 5:38 PM

Share

ಹೈದರಾಬಾದ್‌: ಇನ್ನೇನು ಮದುವೆಗೆ ಒಂದೇ ತಿಂಗಳು ಬಾಕಿ ಇರುವಾಗ ಮದುಮಗನೊರ್ವ ತಾನು ಕೂಡ ಎಲ್ಲರ ಮುಂದೆ ಚೆನ್ನಾಗಿ ನಗಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ. ಆದರೆ ದುರಾದೃಷ್ಟವಶಾತ್  ಶಸ್ತ್ರಚಿಕಿತ್ಸೆಯ​ ಸಂರ್ಭದಲ್ಲೇ ಪ್ರಜ್ಞೆ ತಪ್ಪಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತ ಲಕ್ಷ್ಮೀ ನಾರಾಯಣ(28) ಫೆಬ್ರವರಿ 16 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಹೋಗಿದ್ದಾನೆ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಂತೆ ಇದ್ದಕ್ಕಿದ್ದಂತೆ ಆತನ ಮೂರ್ಛೆ ಹೋಗಿದೆ. ಕೆಲ ಹೊತ್ತಿನ ಬಳಿಕ ಲಕ್ಷ್ಮೀ ನಾರಾಯಣ ಮೃತಪಟ್ಟಿರುವುದಾಗಿ ವೈದ್ಯರು ಫೋಷಿಸಿದ್ದಾರೆ.

ಏನಿದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ?

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

‘ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗುವ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ನನ್ನ ಮಗ ಸಾವನ್ನಪ್ಪಿದ್ದಾನೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ’ ಎಂದು ಫೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಬಗ್ಗೆ ತಮ್ಮ ಮಗ ನಮಗೆ ತಿಳಿಸಿರಲಿಲ್ಲ. ಅವನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ, ಅವರ ಸಾವಿಗೆ ವೈದ್ಯರೇ ಕಾರಣ ಎಂದು ಮೃತ ಲಕ್ಷ್ಮೀ ನಾರಾಯಣ ಅವರ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Tue, 20 February 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!