‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

'Smile Designing' Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ
'Smile Designing' SurgeryImage Credit source: Pinterest
Follow us
|

Updated on:Feb 20, 2024 | 5:38 PM

ಹೈದರಾಬಾದ್‌: ಇನ್ನೇನು ಮದುವೆಗೆ ಒಂದೇ ತಿಂಗಳು ಬಾಕಿ ಇರುವಾಗ ಮದುಮಗನೊರ್ವ ತಾನು ಕೂಡ ಎಲ್ಲರ ಮುಂದೆ ಚೆನ್ನಾಗಿ ನಗಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ. ಆದರೆ ದುರಾದೃಷ್ಟವಶಾತ್  ಶಸ್ತ್ರಚಿಕಿತ್ಸೆಯ​ ಸಂರ್ಭದಲ್ಲೇ ಪ್ರಜ್ಞೆ ತಪ್ಪಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತ ಲಕ್ಷ್ಮೀ ನಾರಾಯಣ(28) ಫೆಬ್ರವರಿ 16 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಹೋಗಿದ್ದಾನೆ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಂತೆ ಇದ್ದಕ್ಕಿದ್ದಂತೆ ಆತನ ಮೂರ್ಛೆ ಹೋಗಿದೆ. ಕೆಲ ಹೊತ್ತಿನ ಬಳಿಕ ಲಕ್ಷ್ಮೀ ನಾರಾಯಣ ಮೃತಪಟ್ಟಿರುವುದಾಗಿ ವೈದ್ಯರು ಫೋಷಿಸಿದ್ದಾರೆ.

ಏನಿದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ?

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

‘ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗುವ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ನನ್ನ ಮಗ ಸಾವನ್ನಪ್ಪಿದ್ದಾನೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ’ ಎಂದು ಫೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಬಗ್ಗೆ ತಮ್ಮ ಮಗ ನಮಗೆ ತಿಳಿಸಿರಲಿಲ್ಲ. ಅವನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ, ಅವರ ಸಾವಿಗೆ ವೈದ್ಯರೇ ಕಾರಣ ಎಂದು ಮೃತ ಲಕ್ಷ್ಮೀ ನಾರಾಯಣ ಅವರ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Tue, 20 February 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ