AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಗೆಯಾಡಿಸುತ್ತಾ ದಾರಿ ಮಧ್ಯೆ ಹಾರಿ ಬಿದ್ದ ಕಾರು! ಅವಘಡದ ಭಯಾನಕ ದೃಶ್ಯ ಸೆರೆ

ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಮೊದಲು ನನಗೆ ತಿಳಿಯಲಿಲ್ಲ. ಆದರೆ ಮಹಿಳೆ ಕಿರುಚುವುದು ಕೇಳಿಬಂತು ಎಂದು ವಿಡಿಯೋ ಹಂಚಿಕೊಂಡ ಮತ್ತೊಂದು ಕಾರಿನ ಚಾಲಕ ಹೇಳಿದ್ದಾರೆ.

Shocking News: ಹೊಗೆಯಾಡಿಸುತ್ತಾ ದಾರಿ ಮಧ್ಯೆ ಹಾರಿ ಬಿದ್ದ ಕಾರು! ಅವಘಡದ ಭಯಾನಕ ದೃಶ್ಯ ಸೆರೆ
ಹೆದ್ದಾರಿಗೆ ಅಪ್ಪಳಿಸಿದ ಕಾರು
TV9 Web
| Edited By: |

Updated on: Jul 18, 2021 | 3:34 PM

Share

ಹೆದ್ದಾರಿಯ ಪಕ್ಕದಲ್ಲಿದ್ದ ರಸ್ತೆಯಿಂದ ಕಾರೊಂದು ಹೊಗೆಯಾಡಿಸುತ್ತಾ ಹಾರಿ ಹೆದ್ದಾರಿಗೆ ಬಿದ್ದ ಭಯಾನಕ ಘಟನೆಯೊಂದು ನಡೆದಿದೆ. ಆಘಾತಕಾರಿ ದೃಶ್ಯ ಡ್ಯಾಶ್​ ಕ್ಯಾಮ್​ನಲ್ಲಿ ಸೆರೆಯಾಗಿದೆ. ಇನ್ನೊಂದು ವಾಹನ ಎದುರು ಬರುತ್ತಿತ್ತು. ಆ ಸಮಯದಲ್ಲಿ ಬೇರೆ ರಸ್ತೆಯಲ್ಲಿದ್ದ ಕಾರು ಹೆದ್ದಾರಿಯ ಮಧ್ಯೆ ಬಿದ್ದಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಔಯಾನಕ ದೃಶ್ಯ ವೈರಲ್​ ಆಗಿದೆ.

ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಹೆದ್ದಾರಿಯ ಎಡಭಾಗದಲ್ಲಿದ್ದ ರಸ್ತೆಯಿಂದಾಚೆಯಿಂದ ಕಾರು ಹಾರಿ ಕೆಳಗೆ ಬಿದ್ದಿದೆ. ಕಾರಿನಿಂದ ಹೊಗೆ ಹಾರುತ್ತಿರುವುದು ಕಂಡು ಬರುತ್ತದೆ. ಕಾರು ರಸ್ತೆಗೆ ಬಂದು ಅಪ್ಪಳಿಸಿದಾಕ್ಷಣ ರಭಸಕ್ಕೆ ಎರಡು ಬಾರಿ ಪಲ್ಟಿಯಾಗಿ ಬಿದ್ದಿರುವ ವಿಡಿಯೋ ವೈರಲ್​ ಆಗಿದೆ.

ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಮೊದಲು ನನಗೆ ತಿಳಿಯಲಿಲ್ಲ. ಆದರೆ ಮಹಿಳೆ ಕಿರುಚುವುದು ಕೇಳಿಬಂತು ಎಂದು ವಿಡಿಯೋ ಹಂಚಿಕೊಂಡ ಮತ್ತೊಂದು ಕಾರಿನ ಚಾಲಕ ಹೇಳಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದ್ದಂತೆಯೇ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 300 ಕ್ಕೂ ಹೆಚ್ಚು ಕಾಮೆಂಟ್ಸ್​ಗಳು ಬಂದಿವೆ.

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಚಾಲಕ ಸರಿಯಾದ ಸಮಯಕ್ಕೆ ಬ್ರೇಕ್​ ಹಾಕಿ ಕಾರನ್ನು ನಿಲ್ಲಿಸಿದ್ದಾನೆ. ಬಳಿಕ ಪಲ್ಟಿಯಾಗಿ ಬಿದ್ದ ಕಾರಿನ ಒಳಗಿದ್ದ ಜನರನ್ನು ರಕ್ಷಿಸಲು ಮುಂದಾಗಿದ್ದಾನೆ. ಅದೃಷ್ಟವಶಾತ್​ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆತನಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ವರದಿಯಾಗಿದೆ.

ಇದನ್ನೂ ಓದಿ:

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ