AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ನಿಮ್ಮ ಅಮ್ಮನೂ ಹೀಗೇ ಮಾಡ್ತಿದ್ರ?; ತಾಯಿ ಕಳಿಸಿದ ಪೋಸ್ಟ್ ಶೇರ್ ಮಾಡಿದ ಸಚಿವೆ ಸ್ಮೃತಿ ಇರಾನಿ

ನನ್ನ ತಾಯಿ ಈ ಪೋಸ್ಟ್ ಅನ್ನು ನನ್ನೊಂದಿಗೆ ಸಂತೋಷದಿಂದ ಹಂಚಿಕೊಂಡಿದ್ದಾರೆ. ನಿಮ್ಮ ತಾಯಿಯೂ ಈ ರೀತಿ ನಿಮ್ಮ ಹಠವನ್ನು ಕಂಟ್ರೋಲ್ ಮಾಡಿದ್ದರೆ ದಯವಿಟ್ಟು ನಿಮ್ಮ ಕೈಯನ್ನು ಮೇಲಕ್ಕೆತ್ತಿ ಎಂದು ಸ್ಮೃತಿ ಇರಾನಿ ತಮ್ಮ ಪೋಸ್ಟ್​ಗೆ ಕ್ಯಾಪ್ಷನ್ ನೀಡಿದ್ದಾರೆ.

Smriti Irani: ನಿಮ್ಮ ಅಮ್ಮನೂ ಹೀಗೇ ಮಾಡ್ತಿದ್ರ?; ತಾಯಿ ಕಳಿಸಿದ ಪೋಸ್ಟ್ ಶೇರ್ ಮಾಡಿದ ಸಚಿವೆ ಸ್ಮೃತಿ ಇರಾನಿ
ಸ್ಮೃತಿ ಇರಾನಿ
TV9 Web
| Edited By: |

Updated on: Dec 21, 2021 | 3:38 PM

Share

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸಕ್ರಿಯವಾಗಿರುವ ರಾಜಕಾರಣಿಗಳಲ್ಲಿ ಒಬ್ಬರು. ಆಕೆಯ ಇನ್‌ಸ್ಟಾಗ್ರಾಂನಲ್ಲಿ (Instagram) ಆಗಾಗ ಹಾಸ್ಯದ ಮತ್ತು ಸ್ಪೂರ್ತಿದಾಯಕ ಪೋಸ್ಟ್‌ಗಳನ್ನು ಹಾಕುತ್ತಾ ಇರುತ್ತಾರೆ. ನಿನ್ನೆ ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಮಾಡಿರುವ ಸ್ಮೃತಿ ಇರಾನಿ ತನ್ನ ತಾಯಿ ಶಿಬಾನಿ ಬಾಗ್ಚಿ ಕಳುಹಿಸಿದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ಸ್ಮೃತಿ ಇರಾನಿ ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಮಾಷೆಯ ಮೇಮ್ ಅನ್ನು ಹಂಚಿಕೊಂಡಿದ್ದಾರೆ. ನಾನು ಮಗುವಾಗಿದ್ದಾಗ ನನ್ನ ತಂದೆ-ತಾಯಿ ನನ್ನನ್ನು ಎಂದೂ ಮನಶ್ಯಾಸ್ತ್ರಜ್ಞರ ಬಳಿಗೆ ಕರೆದೊಯ್ಯಲಿಲ್ಲ. ನನ್ನ ತಾಯಿ ನನ್ನ ತಲೆಯನ್ನು ಸರಿ ಮಾಡಲು, ನನ್ನ ಕರ್ಮವನ್ನು ಸ್ಥಿರಗೊಳಿಸಲು ಕಪಾಳಕ್ಕೆ ಒಂದು ಏಟು ಹೊಡೆಯುತ್ತಿದ್ದರು! ಎಂದು ತಮಾಷೆಯ ಪೋಸ್ಟ್​ ಒಂದನ್ನು ಹಾಕಿದ್ದಾರೆ.

“ನನ್ನ ತಾಯಿ ಈ ಪೋಸ್ಟ್ ಅನ್ನು ನನ್ನೊಂದಿಗೆ ಸಂತೋಷದಿಂದ ಹಂಚಿಕೊಂಡಿದ್ದಾರೆ. ನಿಮ್ಮ ತಾಯಿಯೂ ಈ ರೀತಿ ನಿಮ್ಮ ಹಠವನ್ನು ಕಂಟ್ರೋಲ್ ಮಾಡಿದ್ದರೆ ದಯವಿಟ್ಟು ನಿಮ್ಮ ಕೈಯನ್ನು ಮೇಲಕ್ಕೆತ್ತಿ” ಎಂದು ಸ್ಮೃತಿ ಇರಾನಿ ತಮ್ಮ ಪೋಸ್ಟ್​ಗೆ ಕ್ಯಾಪ್ಷನ್ ನೀಡಿದ್ದಾರೆ. ಹಾಗೇ, ” ಅಮ್ಮ ಐ ಲವ್ ಯು” ಎಂದು ಕೂಡ ಬರೆದುಕೊಂಡಿದ್ದಾರೆ.

ಈ ಪೋಸ್ಟ್​ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ, ಪೋಸ್ಟ್​ಗೆ 33 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಪ್ರತಿ ಮನೆಯದ್ದೂ ಇದೇ ಕತೆ ಎಂದು ಕೆಲವರು ಬರೆದಿದ್ದಾರೆ. ಇನ್ನು ಕೆಲವರು ಇದು ಉಚಿತವಾದ ಅತ್ಯುತ್ತಮ ಚಿಕಿತ್ಸೆ ಎಂದು ತಮಾಷೆ ಮಾಡಿದ್ದಾರೆ. ಸ್ಮೃತಿ ಇರಾನಿ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಂನಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್​ಗಳಿದ್ದಾರೆ.

ಇದನ್ನೂ ಓದಿ: ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ

ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!