AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ನಿಮ್ಮ ಅಮ್ಮನೂ ಹೀಗೇ ಮಾಡ್ತಿದ್ರ?; ತಾಯಿ ಕಳಿಸಿದ ಪೋಸ್ಟ್ ಶೇರ್ ಮಾಡಿದ ಸಚಿವೆ ಸ್ಮೃತಿ ಇರಾನಿ

ನನ್ನ ತಾಯಿ ಈ ಪೋಸ್ಟ್ ಅನ್ನು ನನ್ನೊಂದಿಗೆ ಸಂತೋಷದಿಂದ ಹಂಚಿಕೊಂಡಿದ್ದಾರೆ. ನಿಮ್ಮ ತಾಯಿಯೂ ಈ ರೀತಿ ನಿಮ್ಮ ಹಠವನ್ನು ಕಂಟ್ರೋಲ್ ಮಾಡಿದ್ದರೆ ದಯವಿಟ್ಟು ನಿಮ್ಮ ಕೈಯನ್ನು ಮೇಲಕ್ಕೆತ್ತಿ ಎಂದು ಸ್ಮೃತಿ ಇರಾನಿ ತಮ್ಮ ಪೋಸ್ಟ್​ಗೆ ಕ್ಯಾಪ್ಷನ್ ನೀಡಿದ್ದಾರೆ.

Smriti Irani: ನಿಮ್ಮ ಅಮ್ಮನೂ ಹೀಗೇ ಮಾಡ್ತಿದ್ರ?; ತಾಯಿ ಕಳಿಸಿದ ಪೋಸ್ಟ್ ಶೇರ್ ಮಾಡಿದ ಸಚಿವೆ ಸ್ಮೃತಿ ಇರಾನಿ
ಸ್ಮೃತಿ ಇರಾನಿ
TV9 Web
| Edited By: |

Updated on: Dec 21, 2021 | 3:38 PM

Share

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸಕ್ರಿಯವಾಗಿರುವ ರಾಜಕಾರಣಿಗಳಲ್ಲಿ ಒಬ್ಬರು. ಆಕೆಯ ಇನ್‌ಸ್ಟಾಗ್ರಾಂನಲ್ಲಿ (Instagram) ಆಗಾಗ ಹಾಸ್ಯದ ಮತ್ತು ಸ್ಪೂರ್ತಿದಾಯಕ ಪೋಸ್ಟ್‌ಗಳನ್ನು ಹಾಕುತ್ತಾ ಇರುತ್ತಾರೆ. ನಿನ್ನೆ ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಮಾಡಿರುವ ಸ್ಮೃತಿ ಇರಾನಿ ತನ್ನ ತಾಯಿ ಶಿಬಾನಿ ಬಾಗ್ಚಿ ಕಳುಹಿಸಿದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ಸ್ಮೃತಿ ಇರಾನಿ ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಮಾಷೆಯ ಮೇಮ್ ಅನ್ನು ಹಂಚಿಕೊಂಡಿದ್ದಾರೆ. ನಾನು ಮಗುವಾಗಿದ್ದಾಗ ನನ್ನ ತಂದೆ-ತಾಯಿ ನನ್ನನ್ನು ಎಂದೂ ಮನಶ್ಯಾಸ್ತ್ರಜ್ಞರ ಬಳಿಗೆ ಕರೆದೊಯ್ಯಲಿಲ್ಲ. ನನ್ನ ತಾಯಿ ನನ್ನ ತಲೆಯನ್ನು ಸರಿ ಮಾಡಲು, ನನ್ನ ಕರ್ಮವನ್ನು ಸ್ಥಿರಗೊಳಿಸಲು ಕಪಾಳಕ್ಕೆ ಒಂದು ಏಟು ಹೊಡೆಯುತ್ತಿದ್ದರು! ಎಂದು ತಮಾಷೆಯ ಪೋಸ್ಟ್​ ಒಂದನ್ನು ಹಾಕಿದ್ದಾರೆ.

“ನನ್ನ ತಾಯಿ ಈ ಪೋಸ್ಟ್ ಅನ್ನು ನನ್ನೊಂದಿಗೆ ಸಂತೋಷದಿಂದ ಹಂಚಿಕೊಂಡಿದ್ದಾರೆ. ನಿಮ್ಮ ತಾಯಿಯೂ ಈ ರೀತಿ ನಿಮ್ಮ ಹಠವನ್ನು ಕಂಟ್ರೋಲ್ ಮಾಡಿದ್ದರೆ ದಯವಿಟ್ಟು ನಿಮ್ಮ ಕೈಯನ್ನು ಮೇಲಕ್ಕೆತ್ತಿ” ಎಂದು ಸ್ಮೃತಿ ಇರಾನಿ ತಮ್ಮ ಪೋಸ್ಟ್​ಗೆ ಕ್ಯಾಪ್ಷನ್ ನೀಡಿದ್ದಾರೆ. ಹಾಗೇ, ” ಅಮ್ಮ ಐ ಲವ್ ಯು” ಎಂದು ಕೂಡ ಬರೆದುಕೊಂಡಿದ್ದಾರೆ.

ಈ ಪೋಸ್ಟ್​ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ, ಪೋಸ್ಟ್​ಗೆ 33 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಪ್ರತಿ ಮನೆಯದ್ದೂ ಇದೇ ಕತೆ ಎಂದು ಕೆಲವರು ಬರೆದಿದ್ದಾರೆ. ಇನ್ನು ಕೆಲವರು ಇದು ಉಚಿತವಾದ ಅತ್ಯುತ್ತಮ ಚಿಕಿತ್ಸೆ ಎಂದು ತಮಾಷೆ ಮಾಡಿದ್ದಾರೆ. ಸ್ಮೃತಿ ಇರಾನಿ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಂನಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್​ಗಳಿದ್ದಾರೆ.

ಇದನ್ನೂ ಓದಿ: ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ

ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ