AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್
ಕಾರಿನ ಮೇಲೆ ಬಂದ ಹಾವು
TV9 Web
| Edited By: |

Updated on: Oct 02, 2021 | 4:08 PM

Share

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ತಮಾಷೆಯಿಂದ ಕೂಡಿರುತ್ತವೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತದೆ. ಮಾತ್ರವಲ್ಲದೇ ವೈರಲ್ ಆದ ಕೆಲ ವಿಡಿಯೋಗಳು ಭಯವನ್ನೂ ಹುಟ್ಟಿಸುತ್ತವೆ. ಸದ್ಯಕ್ಕೆ ಹಾವಿನ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾವು ಅಂದರೆ ಒಂದು ಎದೆ ಬಡಿತ ಹೆಚ್ಚಾಗುತ್ತದೆ. ಕೈ ಕಾಲುಗಳು ನಡುಗುತ್ತವೆ. ಹೀಗಿರುವಾಗ ಇದ್ದಕ್ಕಿದ್ದಂತೆ ಹಾವು ಕಣ್ಣಿನ ಮುಂದೆ ಬಂದರೆ ದಿಕ್ಕು ತೋಚದಂತಾಗುತ್ತದೆ.

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ. ಕಾರು ನಿಲ್ಲಿಸಿದ ಬಳಿಕ ಹಾವು ಕಾರಿನ ಮೇಲೆ ಹರಿದು ಹೋಗುತ್ತದೆ. ಈ ಎಲ್ಲಾ ದೃಶ್ಯಗಳನ್ನು ಕಾರಿನಲ್ಲಿ ಕುಳಿತಿದ್ದವರು ಸೆರೆ ಹಿಡಿದಿದ್ದಾರೆ. 22 ಸೆಕೆಂಡ್ ಇರುವ ವಿಡಿಯೋ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದೆ.

ಕಾರಿನೊಳಗೆ ಕುಳಿತಿದ್ದವರು ಹಾವಿನ ದೃಶ್ಯವನ್ನು ಸೆರೆಹಿಡಿದಿದ್ದು, 4,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಹಾವು ಕಾರಿನ ಬಾನೆಟ್ನಲ್ಲಿ ಜಾರುತ್ತಿರುವುದು ಮತ್ತು ಕಾರಿನ ವಿಂಡೋ ಸ್ಕ್ರೀನ್ ಬಳಿ ಹರಿದು ಬರುತ್ತಿರುವುದನ್ನು ಕಂಡು ಕಾರಿನಲ್ಲಿದ್ದವರು ಗಾಂಬರಿಗೊಂಡಿದ್ದರು. ಆದರೆ ಹಾವನ್ನು ಕಂಡು ಭಯದಿಂದ ಕಾರಿನ ಕೇಳಗೆ ಇಳಿದಿರುವ ಬಗ್ಗೆ ವಿಡಿಯೋದಲ್ಲಿ ತಿಳಿದುಬಂದಿಲ್ಲ.

ಈ ವಿಡಿಯೋಗೆ ಹಲವರು ಕಾಮೆಂಟ್ ಕೂಡಾ ಮಾಡಿದ್ದಾರೆ. ಇದೇ ಪರಿಸ್ಥಿತಿಯಲ್ಲಿ ತಾವಿದ್ದರೆ ಏನು ಮಾಡುತ್ತಿದ್ದೇವು ಅಂತ ಹೇಳಿದ್ದಾರೆ. ಇನ್ನು ಕೆಲವರು ಹಾವಿನ ಜಾತಿಯ ಬಗ್ಗೆ ಯೋಚಿಸಿದ್ದಾರೆ.

ಇದನ್ನೂ ಓದಿ

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್