AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್
ಕಾರಿನ ಮೇಲೆ ಬಂದ ಹಾವು
TV9 Web
| Edited By: sandhya thejappa|

Updated on: Oct 02, 2021 | 4:08 PM

Share

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ತಮಾಷೆಯಿಂದ ಕೂಡಿರುತ್ತವೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತದೆ. ಮಾತ್ರವಲ್ಲದೇ ವೈರಲ್ ಆದ ಕೆಲ ವಿಡಿಯೋಗಳು ಭಯವನ್ನೂ ಹುಟ್ಟಿಸುತ್ತವೆ. ಸದ್ಯಕ್ಕೆ ಹಾವಿನ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾವು ಅಂದರೆ ಒಂದು ಎದೆ ಬಡಿತ ಹೆಚ್ಚಾಗುತ್ತದೆ. ಕೈ ಕಾಲುಗಳು ನಡುಗುತ್ತವೆ. ಹೀಗಿರುವಾಗ ಇದ್ದಕ್ಕಿದ್ದಂತೆ ಹಾವು ಕಣ್ಣಿನ ಮುಂದೆ ಬಂದರೆ ದಿಕ್ಕು ತೋಚದಂತಾಗುತ್ತದೆ.

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ. ಕಾರು ನಿಲ್ಲಿಸಿದ ಬಳಿಕ ಹಾವು ಕಾರಿನ ಮೇಲೆ ಹರಿದು ಹೋಗುತ್ತದೆ. ಈ ಎಲ್ಲಾ ದೃಶ್ಯಗಳನ್ನು ಕಾರಿನಲ್ಲಿ ಕುಳಿತಿದ್ದವರು ಸೆರೆ ಹಿಡಿದಿದ್ದಾರೆ. 22 ಸೆಕೆಂಡ್ ಇರುವ ವಿಡಿಯೋ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದೆ.

ಕಾರಿನೊಳಗೆ ಕುಳಿತಿದ್ದವರು ಹಾವಿನ ದೃಶ್ಯವನ್ನು ಸೆರೆಹಿಡಿದಿದ್ದು, 4,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಹಾವು ಕಾರಿನ ಬಾನೆಟ್ನಲ್ಲಿ ಜಾರುತ್ತಿರುವುದು ಮತ್ತು ಕಾರಿನ ವಿಂಡೋ ಸ್ಕ್ರೀನ್ ಬಳಿ ಹರಿದು ಬರುತ್ತಿರುವುದನ್ನು ಕಂಡು ಕಾರಿನಲ್ಲಿದ್ದವರು ಗಾಂಬರಿಗೊಂಡಿದ್ದರು. ಆದರೆ ಹಾವನ್ನು ಕಂಡು ಭಯದಿಂದ ಕಾರಿನ ಕೇಳಗೆ ಇಳಿದಿರುವ ಬಗ್ಗೆ ವಿಡಿಯೋದಲ್ಲಿ ತಿಳಿದುಬಂದಿಲ್ಲ.

ಈ ವಿಡಿಯೋಗೆ ಹಲವರು ಕಾಮೆಂಟ್ ಕೂಡಾ ಮಾಡಿದ್ದಾರೆ. ಇದೇ ಪರಿಸ್ಥಿತಿಯಲ್ಲಿ ತಾವಿದ್ದರೆ ಏನು ಮಾಡುತ್ತಿದ್ದೇವು ಅಂತ ಹೇಳಿದ್ದಾರೆ. ಇನ್ನು ಕೆಲವರು ಹಾವಿನ ಜಾತಿಯ ಬಗ್ಗೆ ಯೋಚಿಸಿದ್ದಾರೆ.

ಇದನ್ನೂ ಓದಿ

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ