AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ.

ಅಬ್ಬಬ್ಬಾ.. ಕಾರಿನ ಮೇಲೆ ಹರಿದು ಬಂತು ಹಾವು! ವಿಡಿಯೋ ವೈರಲ್
ಕಾರಿನ ಮೇಲೆ ಬಂದ ಹಾವು
TV9 Web
| Edited By: sandhya thejappa|

Updated on: Oct 02, 2021 | 4:08 PM

Share

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ತಮಾಷೆಯಿಂದ ಕೂಡಿರುತ್ತವೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತದೆ. ಮಾತ್ರವಲ್ಲದೇ ವೈರಲ್ ಆದ ಕೆಲ ವಿಡಿಯೋಗಳು ಭಯವನ್ನೂ ಹುಟ್ಟಿಸುತ್ತವೆ. ಸದ್ಯಕ್ಕೆ ಹಾವಿನ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾವು ಅಂದರೆ ಒಂದು ಎದೆ ಬಡಿತ ಹೆಚ್ಚಾಗುತ್ತದೆ. ಕೈ ಕಾಲುಗಳು ನಡುಗುತ್ತವೆ. ಹೀಗಿರುವಾಗ ಇದ್ದಕ್ಕಿದ್ದಂತೆ ಹಾವು ಕಣ್ಣಿನ ಮುಂದೆ ಬಂದರೆ ದಿಕ್ಕು ತೋಚದಂತಾಗುತ್ತದೆ.

ಕಾರಿನಲ್ಲಿ ಹೋಗುತ್ತಿದ್ದಾಗ ದೊಡ್ಡ ಗಾತ್ರದ ಹಾವೊಂದು ಕಾರಿನ ಮೇಲೆ ಬರುತ್ತದೆ. ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾವು ಹತ್ತುತ್ತದೆ. ಹಾವನ್ನು ನೋಡಿದ ಕಾರಿನ ಚಾಲಕ ತಕ್ಷಣ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸುತ್ತಾರೆ. ಕಾರು ನಿಲ್ಲಿಸಿದ ಬಳಿಕ ಹಾವು ಕಾರಿನ ಮೇಲೆ ಹರಿದು ಹೋಗುತ್ತದೆ. ಈ ಎಲ್ಲಾ ದೃಶ್ಯಗಳನ್ನು ಕಾರಿನಲ್ಲಿ ಕುಳಿತಿದ್ದವರು ಸೆರೆ ಹಿಡಿದಿದ್ದಾರೆ. 22 ಸೆಕೆಂಡ್ ಇರುವ ವಿಡಿಯೋ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದೆ.

ಕಾರಿನೊಳಗೆ ಕುಳಿತಿದ್ದವರು ಹಾವಿನ ದೃಶ್ಯವನ್ನು ಸೆರೆಹಿಡಿದಿದ್ದು, 4,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಹಾವು ಕಾರಿನ ಬಾನೆಟ್ನಲ್ಲಿ ಜಾರುತ್ತಿರುವುದು ಮತ್ತು ಕಾರಿನ ವಿಂಡೋ ಸ್ಕ್ರೀನ್ ಬಳಿ ಹರಿದು ಬರುತ್ತಿರುವುದನ್ನು ಕಂಡು ಕಾರಿನಲ್ಲಿದ್ದವರು ಗಾಂಬರಿಗೊಂಡಿದ್ದರು. ಆದರೆ ಹಾವನ್ನು ಕಂಡು ಭಯದಿಂದ ಕಾರಿನ ಕೇಳಗೆ ಇಳಿದಿರುವ ಬಗ್ಗೆ ವಿಡಿಯೋದಲ್ಲಿ ತಿಳಿದುಬಂದಿಲ್ಲ.

ಈ ವಿಡಿಯೋಗೆ ಹಲವರು ಕಾಮೆಂಟ್ ಕೂಡಾ ಮಾಡಿದ್ದಾರೆ. ಇದೇ ಪರಿಸ್ಥಿತಿಯಲ್ಲಿ ತಾವಿದ್ದರೆ ಏನು ಮಾಡುತ್ತಿದ್ದೇವು ಅಂತ ಹೇಳಿದ್ದಾರೆ. ಇನ್ನು ಕೆಲವರು ಹಾವಿನ ಜಾತಿಯ ಬಗ್ಗೆ ಯೋಚಿಸಿದ್ದಾರೆ.

ಇದನ್ನೂ ಓದಿ

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ