AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳ ನಾಗರಾಜ; ಯಾರಿಗಾಗಿ ಚಪ್ಪಲಿ ಕದ್ದುಕೊಂಡು ಹೋಗುತ್ತಿದ್ದೀಯೋ?

King Cobra : ನೋಡನೋಡುತ್ತಿದ್ದಂತೆಯೇ ಈ ನಾಗರಹಾವು ಚಪ್ಪಲಿಯನ್ನು ಕಚ್ಚಿಕೊಂಡು ಸರಸರನೆ ಹರಿದು ಹೋಗಿಬಿಟ್ಟಿದೆ. ಎಲ್ಲಾ ಬಿಟ್ಟು ಚಪ್ಪಲಿಯನ್ನೇಕೆ ಕದ್ದೊಯ್ಯುತ್ತಿದೆ ಎನ್ನುತ್ತಿರುವ ನೆಟ್ಟಿಗರು ತಮಗೆ ತಿಳಿದಂತೆ ಕಾರಣ ಕೊಡುತ್ತಿದ್ಧಾರೆ.

ಕಳ್ಳ ನಾಗರಾಜ; ಯಾರಿಗಾಗಿ ಚಪ್ಪಲಿ ಕದ್ದುಕೊಂಡು ಹೋಗುತ್ತಿದ್ದೀಯೋ?
ಯಾರಿಗೋಸ್ಕರ ಚಪ್ಪಲಿ ಕದ್ದುಕೊಂಡು ಹೋಗ್ತಿದೆಯೋ ನಾಗರಹಾವು?
TV9 Web
| Edited By: ಶ್ರೀದೇವಿ ಕಳಸದ|

Updated on:Nov 25, 2022 | 12:43 PM

Share

Viral Video : ಮೈಸೂರಿನಲ್ಲಿ ಬೂಟಿನೊಳಗೆ ಅವಿತು ಕುಳಿತಿದ್ದ ನಾಗರಹಾವಿನ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇನ್ನೊಂದು ವಿಡಿಯೋದಲ್ಲಿ ವ್ಯಕ್ತಿಯೊಬ್ಬ ನಾಗರಹಾವಿಗೆ ಮುತ್ತು ಕೊಡಲು ಹೋಗಿ ಕಚ್ಚಿಸಿಕೊಂಡಿದ್ದನ್ನೂ ನೋಡಿದ್ದೀರಿ. ಉತ್ತರ ಪ್ರದೇಶ ಪೊಲೀಸ್ ಠಾಣೆಗೆ ಬಂದ ನಾಗರಾಜ ಪೊಲೀಸರನ್ನೇ ಗಡಗಡ ನಡುಗಿಸಿದ ವಿಡಿಯೋ ಕೂಡ ನೋಡಿದ್ದೀರಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ನಾಗರಹಾವು ಅದ್ಯಾರಿಗೆ ಚಪ್ಪಲಿ ಕದ್ದುಕೊಂಡು ಹೋಗುತ್ತಿದೆಯೋ ಗೊತ್ತಿಲ್ಲ. ನಿಮಗೇನಾದರೂ ಗೊತ್ತಾಗುತ್ತದೆಯಾ ನೋಡಿ.

ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಈ ವಿಡಿಯೋ ಟ್ವೀಟ್ ಮಾಡಿದ್ಧಾರೆ. ಹೀಗೆ ನಾಗರಹಾವು ಚಪ್ಪಲಿಯನ್ನು ಬಾಯಲ್ಲಿ ಹಿಡಿದುಕೊಂಡು ನಿರಾಯಾಸವಾಗಿ ಹರಿದು ಹೋಗುವುದನ್ನು ನೋಡಿದ ಹೆಣ್ಣುಮಕ್ಕಳು ಕಿರುಚಾಡುತ್ತಿದ್ದಾರೆ. ಇದ್ಯಾವುದನ್ನೂ ಲೆಕ್ಕಿಸದೇ ಕದಿಯುವುದಷ್ಟೇ ನನ್ನ ಗುರಿ ಎಂಬಂತೆ ಅಷ್ಟು ದೊಡ್ಡ ಚಪ್ಪಲಿಯನ್ನು ಬಾಯಲ್ಲಿ ಕಚ್ಚಿಕೊಂಡು ಸರಸರನೆ ಹರಿದು ಹೋಗಿದೆ ಈನಾಗರಹಾವು.

ನೆಟ್ಟಿಗರು ಈ ದೃಶ್ಯವನ್ನು ನೋಡಿ ಬಿದ್ದು ಬಿದ್ದು ನಗುತ್ತಿದ್ದಾರೆ. ಈ ಹಾವು ಚಪ್ಪಲಿಯನ್ನು ಏನು ಮಾಡುತ್ತದೆ? ಅವನಿಗಂತೂ ಕಾಲಿಲ್ಲ ಎಂದಿದ್ದಾರೆ ಒಬ್ಬರು. ರಬ್ಬರ್​ನ ರುಚಿ, ವಾಸನೆ ಹಾವುಗಳಿಗೆ ಇಷ್ಟ, ಅದಕ್ಕೆ ಇದು ಹೀಗೆ ಮಾಡಿದೆ ಎಂದಿದ್ದಾರೆ ಇನ್ನೊಬ್ಬರು. ತನ್ನ ಮರಿಗಳಿಗಾಗಿ ಬೆಚ್ಚಗಿನ ಗೂಡು ಕಟ್ಟಲು ನಾಗರಹಾವು ಹೀಗೆ ಚಪ್ಪಲಿ ಕದ್ದೊಯ್ಯುತ್ತಿರಬಹುದೇ? ಎಂದಿದ್ದಾರೆ ಮತ್ತೊಬ್ಬರು. ಅದು ಬೇಕೆಂದೇ ಚಪ್ಪಲಿ ತೆಗೆದುಕೊಂಡು ಹೋಗುತ್ತಿಲ್ಲ, ಬಹುಶಃ ಅದರ ಹಲ್ಲಿನಲ್ಲಿ ಚಪ್ಪಲಿ ಸಿಕ್ಕಿಹಾಕಿಕೊಂಡಿರಬಹುದು. ಭಯದಿಂದ ತಪ್ಪಿಸಿಕೊಳ್ಳಲು ಹಾಗೇ ಚಲಿಸುತ್ತಿರಬಹುದು ಎಂದಿದ್ದಾರೆ ಇನ್ನೂ ಒಬ್ಬರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:38 pm, Fri, 25 November 22

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ