ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ಯುವಕನೊಬ್ಬ ವಿಡಿಯೋಗಾಗಿ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ. ಆಗ ಆ ಹಾವು ಆತನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!
ಹಾವುImage Credit source: pexels.com
Follow us
|

Updated on: Sep 15, 2023 | 5:29 PM

ಪ್ರಾಣಿಗಳಿಗೆ ನಾವು ಯಾವುದೇ ತೊಂದರೆ ನೀಡದಿದ್ದರೆ ಅವು ಮನುಷ್ಯರಿಗೆ ಯಾವ ಅಪಾಯವನ್ನೂ ಮಾಡುವುದಿಲ್ಲ. ಆದರೆ, ಮನುಷ್ಯ ಆ ಪ್ರಾಣಿಗಳನ್ನು ಕೆಣಕಲು ಹೋದಾಗ ಅವು ತಿರುಗಿಬೀಳುವುದು ಸಾಮಾನ್ಯ. ಊರೊಳಗೆ ಬಂದ ಹಾವುಗಳನ್ನು ಹಿಡಿದು ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ವಿಡಿಯೋಗಾಗಿ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ. ಆಗ ಆ ಹಾವು ಆತನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಊರೊಳಗೆ ಹರಿದಾಡುತ್ತಿದ್ದ ನಾಗರಹಾವನ್ನು ಹಿಡಿಯಲು ಹೋದ ಯುವಕ ಆ ಹಾವಿನ ತಲೆಗೆ ಮುತ್ತು ಕೊಡಲು ಪ್ರಯತ್ನಿಸಿದ್ದಾನೆ. ಆಗ ರೊಚ್ಚಿಗೆದ್ದ ಹಾವು ತಕ್ಷಣ ಹಿಂದೆ ತಿರುಗಿ ಆ ಯುವಕನ ತುಟಿಗೆ ಕಚ್ಚಿದೆ. ಈ ವೀಡಿಯೋ ವೀಕ್ಷಕರನ್ನು ಬೆರಗುಗೊಳಿಸಿದೆ ಮತ್ತು ಕಳವಳವನ್ನುಂಟು ಮಾಡಿದೆ. ಈ ವಿಡಿಯೋ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ವಿಡಿಯೋ ವೈರಲ್​​: ಅಮೆರಿಕದ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಗೆ ಚುಂಬಿಸಿದ ಪೊಲೀಸ್​​ ಅಧಿಕಾರಿ ಅಮಾನತು

ಈ ಘಟನೆ ಯಾವಾಗ ನಡೆದಿದೆ ಎಂಬುದು ಖಚಿತವಾಗಿ ತಿಳಿದಿಲ್ಲ. ಇದು ಎಲ್ಲಿ ಚಿತ್ರೀಕರಿಸಿದ್ದು ಎಂಬುದು ಕೂಡ ತಿಳಿದಿಲ್ಲ. ಆದರೆ, ನೆಟ್ಟಿಗರು ಆ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಕೊನೆಯ ಲಿಪ್ ಕಿಸ್ ಅನ್ನು ಬಹಳ ಎಂಜಾಯ್ ಮಾಡಿದ್ದೀಯ ಎನಿಸುತ್ತಿದೆ ಎಂದು ಕೆಲವರು ಲೇವಡಿ ಮಾಡಿದ್ದಾರೆ.

ವಿಶ್ವದ ಅತ್ಯಂತ ವಿಷಕಾರಿ ಹಾವಿನ ಜಾತಿಗಳಲ್ಲಿ ಒಂದೆಂದು ಹೆಸರುವಾಸಿಯಾಗಿರುವ ನಾಗರಹಾವಿನ ವಿಷ ಅತ್ಯಂತ ಭಯಾನಕವಾದುದು. ಈ ಹಾವುಗಳು ಸಾಮಾನ್ಯವಾಗಿ ಆಗ್ನೇಯ ಏಷ್ಯಾದ ಸೊಂಪಾದ ಮಳೆಕಾಡುಗಳಲ್ಲಿ ಕಂಡುಬರುತ್ತವೆ. ಈ ಹಾವು ಗರಿಷ್ಠ 5.85 ಮೀಟರ್ ಉದ್ದಕ್ಕೆ ಬೆಳೆಯುತ್ತವೆ. ಈ ಹಾವುಗಳು ಕಚ್ಚಿದ ಕೇವಲ 15 ನಿಮಿಷಗಳಲ್ಲಿ ಮನುಷ್ಯ ಸಾಯುವ ಸಾಧ್ಯತೆಯೂ ಇರುತ್ತದೆ. ಹಾವಿನಿಂದ ಕಚ್ಚಿಸಿಕೊಂಡ ಯುವಕನ ಸ್ಥಿತಿ ಹೇಗೆ ಇದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್