ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ಯುವಕನೊಬ್ಬ ವಿಡಿಯೋಗಾಗಿ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ. ಆಗ ಆ ಹಾವು ಆತನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!
ಹಾವುImage Credit source: pexels.com
Follow us
|

Updated on: Sep 15, 2023 | 5:29 PM

ಪ್ರಾಣಿಗಳಿಗೆ ನಾವು ಯಾವುದೇ ತೊಂದರೆ ನೀಡದಿದ್ದರೆ ಅವು ಮನುಷ್ಯರಿಗೆ ಯಾವ ಅಪಾಯವನ್ನೂ ಮಾಡುವುದಿಲ್ಲ. ಆದರೆ, ಮನುಷ್ಯ ಆ ಪ್ರಾಣಿಗಳನ್ನು ಕೆಣಕಲು ಹೋದಾಗ ಅವು ತಿರುಗಿಬೀಳುವುದು ಸಾಮಾನ್ಯ. ಊರೊಳಗೆ ಬಂದ ಹಾವುಗಳನ್ನು ಹಿಡಿದು ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ವಿಡಿಯೋಗಾಗಿ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ. ಆಗ ಆ ಹಾವು ಆತನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಊರೊಳಗೆ ಹರಿದಾಡುತ್ತಿದ್ದ ನಾಗರಹಾವನ್ನು ಹಿಡಿಯಲು ಹೋದ ಯುವಕ ಆ ಹಾವಿನ ತಲೆಗೆ ಮುತ್ತು ಕೊಡಲು ಪ್ರಯತ್ನಿಸಿದ್ದಾನೆ. ಆಗ ರೊಚ್ಚಿಗೆದ್ದ ಹಾವು ತಕ್ಷಣ ಹಿಂದೆ ತಿರುಗಿ ಆ ಯುವಕನ ತುಟಿಗೆ ಕಚ್ಚಿದೆ. ಈ ವೀಡಿಯೋ ವೀಕ್ಷಕರನ್ನು ಬೆರಗುಗೊಳಿಸಿದೆ ಮತ್ತು ಕಳವಳವನ್ನುಂಟು ಮಾಡಿದೆ. ಈ ವಿಡಿಯೋ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ವಿಡಿಯೋ ವೈರಲ್​​: ಅಮೆರಿಕದ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಗೆ ಚುಂಬಿಸಿದ ಪೊಲೀಸ್​​ ಅಧಿಕಾರಿ ಅಮಾನತು

ಈ ಘಟನೆ ಯಾವಾಗ ನಡೆದಿದೆ ಎಂಬುದು ಖಚಿತವಾಗಿ ತಿಳಿದಿಲ್ಲ. ಇದು ಎಲ್ಲಿ ಚಿತ್ರೀಕರಿಸಿದ್ದು ಎಂಬುದು ಕೂಡ ತಿಳಿದಿಲ್ಲ. ಆದರೆ, ನೆಟ್ಟಿಗರು ಆ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಕೊನೆಯ ಲಿಪ್ ಕಿಸ್ ಅನ್ನು ಬಹಳ ಎಂಜಾಯ್ ಮಾಡಿದ್ದೀಯ ಎನಿಸುತ್ತಿದೆ ಎಂದು ಕೆಲವರು ಲೇವಡಿ ಮಾಡಿದ್ದಾರೆ.

ವಿಶ್ವದ ಅತ್ಯಂತ ವಿಷಕಾರಿ ಹಾವಿನ ಜಾತಿಗಳಲ್ಲಿ ಒಂದೆಂದು ಹೆಸರುವಾಸಿಯಾಗಿರುವ ನಾಗರಹಾವಿನ ವಿಷ ಅತ್ಯಂತ ಭಯಾನಕವಾದುದು. ಈ ಹಾವುಗಳು ಸಾಮಾನ್ಯವಾಗಿ ಆಗ್ನೇಯ ಏಷ್ಯಾದ ಸೊಂಪಾದ ಮಳೆಕಾಡುಗಳಲ್ಲಿ ಕಂಡುಬರುತ್ತವೆ. ಈ ಹಾವು ಗರಿಷ್ಠ 5.85 ಮೀಟರ್ ಉದ್ದಕ್ಕೆ ಬೆಳೆಯುತ್ತವೆ. ಈ ಹಾವುಗಳು ಕಚ್ಚಿದ ಕೇವಲ 15 ನಿಮಿಷಗಳಲ್ಲಿ ಮನುಷ್ಯ ಸಾಯುವ ಸಾಧ್ಯತೆಯೂ ಇರುತ್ತದೆ. ಹಾವಿನಿಂದ ಕಚ್ಚಿಸಿಕೊಂಡ ಯುವಕನ ಸ್ಥಿತಿ ಹೇಗೆ ಇದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್