Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ಯುವಕನೊಬ್ಬ ವಿಡಿಯೋಗಾಗಿ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ. ಆಗ ಆ ಹಾವು ಆತನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!
ಹಾವುImage Credit source: pexels.com
Follow us
ಸುಷ್ಮಾ ಚಕ್ರೆ
|

Updated on: Sep 15, 2023 | 5:29 PM

ಪ್ರಾಣಿಗಳಿಗೆ ನಾವು ಯಾವುದೇ ತೊಂದರೆ ನೀಡದಿದ್ದರೆ ಅವು ಮನುಷ್ಯರಿಗೆ ಯಾವ ಅಪಾಯವನ್ನೂ ಮಾಡುವುದಿಲ್ಲ. ಆದರೆ, ಮನುಷ್ಯ ಆ ಪ್ರಾಣಿಗಳನ್ನು ಕೆಣಕಲು ಹೋದಾಗ ಅವು ತಿರುಗಿಬೀಳುವುದು ಸಾಮಾನ್ಯ. ಊರೊಳಗೆ ಬಂದ ಹಾವುಗಳನ್ನು ಹಿಡಿದು ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ವಿಡಿಯೋಗಾಗಿ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ. ಆಗ ಆ ಹಾವು ಆತನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಊರೊಳಗೆ ಹರಿದಾಡುತ್ತಿದ್ದ ನಾಗರಹಾವನ್ನು ಹಿಡಿಯಲು ಹೋದ ಯುವಕ ಆ ಹಾವಿನ ತಲೆಗೆ ಮುತ್ತು ಕೊಡಲು ಪ್ರಯತ್ನಿಸಿದ್ದಾನೆ. ಆಗ ರೊಚ್ಚಿಗೆದ್ದ ಹಾವು ತಕ್ಷಣ ಹಿಂದೆ ತಿರುಗಿ ಆ ಯುವಕನ ತುಟಿಗೆ ಕಚ್ಚಿದೆ. ಈ ವೀಡಿಯೋ ವೀಕ್ಷಕರನ್ನು ಬೆರಗುಗೊಳಿಸಿದೆ ಮತ್ತು ಕಳವಳವನ್ನುಂಟು ಮಾಡಿದೆ. ಈ ವಿಡಿಯೋ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ವಿಡಿಯೋ ವೈರಲ್​​: ಅಮೆರಿಕದ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಗೆ ಚುಂಬಿಸಿದ ಪೊಲೀಸ್​​ ಅಧಿಕಾರಿ ಅಮಾನತು

ಈ ಘಟನೆ ಯಾವಾಗ ನಡೆದಿದೆ ಎಂಬುದು ಖಚಿತವಾಗಿ ತಿಳಿದಿಲ್ಲ. ಇದು ಎಲ್ಲಿ ಚಿತ್ರೀಕರಿಸಿದ್ದು ಎಂಬುದು ಕೂಡ ತಿಳಿದಿಲ್ಲ. ಆದರೆ, ನೆಟ್ಟಿಗರು ಆ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಕೊನೆಯ ಲಿಪ್ ಕಿಸ್ ಅನ್ನು ಬಹಳ ಎಂಜಾಯ್ ಮಾಡಿದ್ದೀಯ ಎನಿಸುತ್ತಿದೆ ಎಂದು ಕೆಲವರು ಲೇವಡಿ ಮಾಡಿದ್ದಾರೆ.

ವಿಶ್ವದ ಅತ್ಯಂತ ವಿಷಕಾರಿ ಹಾವಿನ ಜಾತಿಗಳಲ್ಲಿ ಒಂದೆಂದು ಹೆಸರುವಾಸಿಯಾಗಿರುವ ನಾಗರಹಾವಿನ ವಿಷ ಅತ್ಯಂತ ಭಯಾನಕವಾದುದು. ಈ ಹಾವುಗಳು ಸಾಮಾನ್ಯವಾಗಿ ಆಗ್ನೇಯ ಏಷ್ಯಾದ ಸೊಂಪಾದ ಮಳೆಕಾಡುಗಳಲ್ಲಿ ಕಂಡುಬರುತ್ತವೆ. ಈ ಹಾವು ಗರಿಷ್ಠ 5.85 ಮೀಟರ್ ಉದ್ದಕ್ಕೆ ಬೆಳೆಯುತ್ತವೆ. ಈ ಹಾವುಗಳು ಕಚ್ಚಿದ ಕೇವಲ 15 ನಿಮಿಷಗಳಲ್ಲಿ ಮನುಷ್ಯ ಸಾಯುವ ಸಾಧ್ಯತೆಯೂ ಇರುತ್ತದೆ. ಹಾವಿನಿಂದ ಕಚ್ಚಿಸಿಕೊಂಡ ಯುವಕನ ಸ್ಥಿತಿ ಹೇಗೆ ಇದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್