AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲ್ವೇ ನಿಲ್ದಾಣದಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ

Social Media Influencer : ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್​, ಶೇರ್​ಗಳಿಗಾಗಿ ಇಂಥ ಅಪಾಯಕ್ಕೆ ತೆರೆದುಕೊಳ್ಳುವವರಿಗೆ ಪೊಲೀಸರ ಈ ನಡೆ ಎಚ್ಚರಿಕೆ ಹುಟ್ಟಿಸಲಿ ಎಂದು ನೆಟ್ಟಿಗರು ಈ ಟ್ವೀಟ್​ಗೆ ಬೆಂಬಲಿಸುತ್ತಿದ್ದಾರೆ.

Viral Video: ರೈಲ್ವೇ ನಿಲ್ದಾಣದಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ
ಬಿಹಾರದ ಮನ್ಪುರ್​ ರೈಲು ನಿಲ್ದಾಣದಲ್ಲಿ ಸ್ಟಂಟ್ ಮಾಡುತ್ತಿರುವ ಯುವಕ.
Follow us
ಶ್ರೀದೇವಿ ಕಳಸದ
|

Updated on:Jul 12, 2023 | 3:08 PM

Bihar : ಸಾಮಾಜಿಕ ಜಾಲತಾಣಗಳಲ್ಲಿರುವ ಡಿಜಿಟಲ್ ಕ್ರಿಯೇಟರ್ಸ್​ (Digital Creators) ಬಗ್ಗೆ ಪ್ರತೀ ದಿನ ಒಂದಿಲ್ಲಾ ಒಂದು ತಕರಾರು ಕೇಳಿಬರುತ್ತಲೇ ಇರುತ್ತದೆ. ಅದರಲ್ಲೂ ದೆಹಲಿ ಮೆಟ್ರೋಗೆ ಸಂಬಂಧಿಸಿದ ಪ್ರಕರಣಗಳಿಗಂತೂ ಲೆಕ್ಕವೇ ಇಲ್ಲ. ರೈಲ್ವೆ ಒಳಗೆ ಮತ್ತು ಪ್ಲ್ಯಾಟ್​ಫಾರ್ಮ್ ಮೇಲೆ ರೀಲ್​ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಹೇಳಿಕೆ ಕೊಡುತ್ತಾರೆ ವಿನಾ ಫಲಿತಾಂಶ ಮಾತ್ರ ಶೂನ್ಯ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಬಿಹಾರದ ಮನ್ಪುರ್ (Manpur) ರೈಲು ನಿಲ್ದಾಣದಲ್ಲಿ ಸ್ಟಂಟ್​ ಮಾಡಿದ ಯುವಕನ ವಿಡಿಯೋ ಅನ್ನು ರೈಲ್ವೇ ರಕ್ಷಣಾ ಪಡೆ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇದೀಗ ಈ ಯುವಕ ಪೊಲೀಸರ ಬಂಧನದಲ್ಲಿದ್ದಾನೆ.

ಸಾಮಾಜಿಕ ಮಾಧ್ಯಮಗಳಲ್ಲಿ ಖ್ಯಾತಿ ಹೊಂದಲು ಇಂಥ ಅಪಾಯಕರ ಪ್ರವೃತ್ತಿಗೆ ತೆರೆದುಕೊಳ್ಳುವವರಿಗೆ ಇದು ಒಂದು ಪಾಠ ಎಂದು ಭಾವಿಸುತ್ತೇವೆ ಎಂದಿದ್ದಾರೆ ರೈಲ್ವೇ ರಕ್ಷಣಾ ಪಡೆಯ ಪೊಲೀಸರು. ಈಗಾಗಲೇ ಈ ವಿಡಿಯೋ ಅನ್ನು ಸುಮಾರು 1.8 ಲಕ್ಷ ಜನರು ನೋಡಿದ್ದಾರೆ. 1,500 ಜನರು ಈ ವಿಡಿಯೋ ಲೈಕ್ ಮಾಡಿದ್ದಾರೆ, ಕೆಲ ಜನರು ರೀಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಅನ್ನು ಜು.10ರಂದು ಟ್ವೀಟ್ ಮಾಡಲಾಗಿದೆ. ಪೊಲೀಸರ ಈ ಕ್ರಮವನ್ನು ನೆಟ್ಟಿಗರು ತಮ್ಮ ಪ್ರತಿಕ್ರಿಯೆಗಳ ಮೂಲಕ ಬೆಂಬಲಿಸಿದ್ದಾರೆ.

ಇದನ್ನೂ ಓದಿ : Viral Video: ಕರುನಾಡ ಸರಸ್ವತಿ ಅಂಕಿತಾ ಕುಂಡುಗೆ ಅಭಿಮಾನಿಗಳಿಂದ ಖಡಕ್​ ಪತ್ರ

ಪೊಲೀಸರು ಈ ಕ್ರಮ ಕೈಗೊಂಡಿದ್ದು ಒಳ್ಳೆಯದಾಯಿತು, ಇನ್ನಾದರೂ ಸಾಮಾಜಿಕ ಜಾಲತಾಣಗಳ ಪ್ರಭಾವಿ ವ್ಯಕ್ತಿಗಳು ಪಾಠ ಕಲಿಯಲಿ ಎಂದಿದ್ದಾರೆ ಕೆಲವರು. ಪ್ರತಿಭಾ ಪ್ರದರ್ಶನ ಇರಲಿ, ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಸಲ್ಲದು. ಇದರಿಂದ ತಮಗೂ ಉಳಿದವರಿಗೂ ತೊಂದರೆ ಅಥವಾ ಅಪಾಯವಾಗುವ ಸಾಧ್ಯತೆ ಇರುತ್ತದೆ ಎಂದು ಕೆಲವರು ಹೇಳಿದ್ದಾರೆ.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:04 pm, Wed, 12 July 23

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?