AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಟಾಗ್ರಾಮ್​​ ಮೂಲಕ ಪ್ರೀತಿ ಚಿಗುರಿ 80 ವರ್ಷದ ವ್ಯಕ್ತಿಯನ್ನು ವರಿಸಿದ 34ರ ಮಹಿಳೆ

ಇನ್ಸ್ಟಾಗ್ರಾಮ್​ ಮೂಲಕ ಪ್ರಾರಂಭವಾದ ಮಾತು ಕತೆ ಕಡೆಗೆ ಪ್ರೀತಿಯಾಗಿ ತಿರುಗಿದ್ದು, ಇದೀಗಾ ಇವರಿಬ್ಬರ ಪ್ರೀತಿ ಮದುವೆ ಹಂತಕ್ಕೆ ಬಂದು ತಲುಪಿದೆ. ಸದ್ಯ ಇವರಿಬ್ಬರ ವಿಶಿಷ್ಟ ಪ್ರೇಮಕಥೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.

ಇನ್ಸ್ಟಾಗ್ರಾಮ್​​ ಮೂಲಕ ಪ್ರೀತಿ ಚಿಗುರಿ 80 ವರ್ಷದ ವ್ಯಕ್ತಿಯನ್ನು ವರಿಸಿದ 34ರ ಮಹಿಳೆ
Social Media Love Story
ಅಕ್ಷತಾ ವರ್ಕಾಡಿ
|

Updated on: Apr 04, 2024 | 4:06 PM

Share

80 ವರ್ಷದ ವ್ಯಕ್ತಿಯೊಬ್ಬ ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ತನ್ನ 34 ವರ್ಷದ ಪ್ರೇಯಸಿಯನ್ನು ಮದುವೆಯಾಗಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ನಡೆದಿದೆ. ಮಹಾರಾಷ್ಟ್ರದ ಶೀಲಾ (34) ಮತ್ತು ಮಧ್ಯಪ್ರದೇಶದ ಬಲುರಾಮ್(80) ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್​ ಮೂಲಕ ಪರಿಚಯವಾಗಿದ್ದರು. 80ರ ಹರೆಯದಲ್ಲೂ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಾಲುರಾಮ್ ತನ್ನ ಸ್ನೇಹಿತ ವಿಷ್ಣು ಗುಜ್ಜರ್ ಸಹಾಯದಿಂದ ಇನ್ಸ್ಟಾಗ್ರಾಮ್​​​ನಲ್ಲಿ ತಮಾಷೆಯ ವೀಡಿಯೊಗಳನ್ನು ಮಾಡಿ ಅಪ್‌ಲೋಡ್ ಮಾಡುತ್ತಿದ್ದರು. ಈತನ ಈ ತಮಾಷೆಯ ರೀಲ್ಸ್​​ಗೆ ಮನಸೋತ ಶೀಲಾ ಆತನಿಗೆ ಚಾಟ್​​ ಮಾಡಲು ಪ್ರಾರಂಭಿಸಿದ್ದಾಳೆ.

ಇನ್ಸ್ಟಾಗ್ರಾಮ್​ ಮೂಲಕ ಪ್ರಾರಂಭವಾದ ಮಾತು ಕತೆ ಕಡೆಗೆ ಪ್ರೀತಿಯಾಗಿ ತಿರುಗಿದ್ದು, ಇದೀಗಾ ಇವರಿಬ್ಬರ ಪ್ರೀತಿ ಮದುವೆ ಹಂತಕ್ಕೆ ಬಂದು ತಲುಪಿದೆ. ಸದ್ಯ ಇವರಿಬ್ಬರ ವಿಶಿಷ್ಟ ಪ್ರೇಮಕಥೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಬಲುರಾಮ್‌ಗೆ ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರಿದ್ದು, ನಾಲ್ಕು ಮಕ್ಕಳಿಗೂ ಮದುವೆಯಾಗಿದೆ. ಇದಲ್ಲದೇ ಇತ್ತೀಚೆಗಷ್ಟೇ ಬಲುರಾಮ್ ಪತ್ನಿ ಅನಾರೋಗ್ಯದಿಂದ ನಿಧನರಾಗಿದ್ದರು. ಹೆಂಡತಿಯ ಮರಣದ ನಂತರ, ತೀವ್ರ ಖಿನ್ನತೆಗೆ ಒಳಗಾಗಿದ್ದ ಬಲುರಾಮ್ ವಿಷ್ಣು ಗುಜ್ಜರ್ ಎಂಬ ವ್ಯಕ್ತಿ ಸಹಾಯದಿಂದ ಹೋಟೆಲ್‌ ಒಂದರಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅಲ್ಲಿಂದ ಇನ್ಸ್ಟಾಗ್ರಾಮ್​​ನಲ್ಲಿ ಸಕ್ರಿಯವಾಗಿದ್ದ ಬಲುರಾಮ್​​ ಹಾಸ್ಯಸ್ಪದ ವಿಡಿಯೋಗಳನ್ನು ಮಾಡಿ ಅಪ್ಲೋಡ್​​ ಮಾಡತೊಡಗಿದ್ದು, ಶೀಲಾರ ಪರಿಚಯವಾಗಿದೆ. ಏಪ್ರಿಲ್ 1 ರಂದು, ಹಿಂದೂ ಪದ್ಧತಿಯಂತೆ ಇವರಿಬ್ಬರ ಮದುವೆ ನೆರವೇರಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ