AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಟಾಗ್ರಾಮ್​​ ಮೂಲಕ ಪ್ರೀತಿ ಚಿಗುರಿ 80 ವರ್ಷದ ವ್ಯಕ್ತಿಯನ್ನು ವರಿಸಿದ 34ರ ಮಹಿಳೆ

ಇನ್ಸ್ಟಾಗ್ರಾಮ್​ ಮೂಲಕ ಪ್ರಾರಂಭವಾದ ಮಾತು ಕತೆ ಕಡೆಗೆ ಪ್ರೀತಿಯಾಗಿ ತಿರುಗಿದ್ದು, ಇದೀಗಾ ಇವರಿಬ್ಬರ ಪ್ರೀತಿ ಮದುವೆ ಹಂತಕ್ಕೆ ಬಂದು ತಲುಪಿದೆ. ಸದ್ಯ ಇವರಿಬ್ಬರ ವಿಶಿಷ್ಟ ಪ್ರೇಮಕಥೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.

ಇನ್ಸ್ಟಾಗ್ರಾಮ್​​ ಮೂಲಕ ಪ್ರೀತಿ ಚಿಗುರಿ 80 ವರ್ಷದ ವ್ಯಕ್ತಿಯನ್ನು ವರಿಸಿದ 34ರ ಮಹಿಳೆ
Social Media Love Story
ಅಕ್ಷತಾ ವರ್ಕಾಡಿ
|

Updated on: Apr 04, 2024 | 4:06 PM

Share

80 ವರ್ಷದ ವ್ಯಕ್ತಿಯೊಬ್ಬ ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ತನ್ನ 34 ವರ್ಷದ ಪ್ರೇಯಸಿಯನ್ನು ಮದುವೆಯಾಗಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ನಡೆದಿದೆ. ಮಹಾರಾಷ್ಟ್ರದ ಶೀಲಾ (34) ಮತ್ತು ಮಧ್ಯಪ್ರದೇಶದ ಬಲುರಾಮ್(80) ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್​ ಮೂಲಕ ಪರಿಚಯವಾಗಿದ್ದರು. 80ರ ಹರೆಯದಲ್ಲೂ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಾಲುರಾಮ್ ತನ್ನ ಸ್ನೇಹಿತ ವಿಷ್ಣು ಗುಜ್ಜರ್ ಸಹಾಯದಿಂದ ಇನ್ಸ್ಟಾಗ್ರಾಮ್​​​ನಲ್ಲಿ ತಮಾಷೆಯ ವೀಡಿಯೊಗಳನ್ನು ಮಾಡಿ ಅಪ್‌ಲೋಡ್ ಮಾಡುತ್ತಿದ್ದರು. ಈತನ ಈ ತಮಾಷೆಯ ರೀಲ್ಸ್​​ಗೆ ಮನಸೋತ ಶೀಲಾ ಆತನಿಗೆ ಚಾಟ್​​ ಮಾಡಲು ಪ್ರಾರಂಭಿಸಿದ್ದಾಳೆ.

ಇನ್ಸ್ಟಾಗ್ರಾಮ್​ ಮೂಲಕ ಪ್ರಾರಂಭವಾದ ಮಾತು ಕತೆ ಕಡೆಗೆ ಪ್ರೀತಿಯಾಗಿ ತಿರುಗಿದ್ದು, ಇದೀಗಾ ಇವರಿಬ್ಬರ ಪ್ರೀತಿ ಮದುವೆ ಹಂತಕ್ಕೆ ಬಂದು ತಲುಪಿದೆ. ಸದ್ಯ ಇವರಿಬ್ಬರ ವಿಶಿಷ್ಟ ಪ್ರೇಮಕಥೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಬಲುರಾಮ್‌ಗೆ ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರಿದ್ದು, ನಾಲ್ಕು ಮಕ್ಕಳಿಗೂ ಮದುವೆಯಾಗಿದೆ. ಇದಲ್ಲದೇ ಇತ್ತೀಚೆಗಷ್ಟೇ ಬಲುರಾಮ್ ಪತ್ನಿ ಅನಾರೋಗ್ಯದಿಂದ ನಿಧನರಾಗಿದ್ದರು. ಹೆಂಡತಿಯ ಮರಣದ ನಂತರ, ತೀವ್ರ ಖಿನ್ನತೆಗೆ ಒಳಗಾಗಿದ್ದ ಬಲುರಾಮ್ ವಿಷ್ಣು ಗುಜ್ಜರ್ ಎಂಬ ವ್ಯಕ್ತಿ ಸಹಾಯದಿಂದ ಹೋಟೆಲ್‌ ಒಂದರಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅಲ್ಲಿಂದ ಇನ್ಸ್ಟಾಗ್ರಾಮ್​​ನಲ್ಲಿ ಸಕ್ರಿಯವಾಗಿದ್ದ ಬಲುರಾಮ್​​ ಹಾಸ್ಯಸ್ಪದ ವಿಡಿಯೋಗಳನ್ನು ಮಾಡಿ ಅಪ್ಲೋಡ್​​ ಮಾಡತೊಡಗಿದ್ದು, ಶೀಲಾರ ಪರಿಚಯವಾಗಿದೆ. ಏಪ್ರಿಲ್ 1 ರಂದು, ಹಿಂದೂ ಪದ್ಧತಿಯಂತೆ ಇವರಿಬ್ಬರ ಮದುವೆ ನೆರವೇರಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ