AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಯ ಮನೆಯೆದುರು ಬಂದು ಹೆಡೆ ಎತ್ತಿ ನಿಂತ 12 ಅಡಿ ಉದ್ದದ ಕಾಳಿಂಗ ಸರ್ಪ; ಶುಭದಿನವಂತೆ !

ಶ್ರೀಧರ್​ ವೆಂಬು ಫೋಟೋಕ್ಕೆ 6 ಸಾವಿರಕ್ಕೂ ಅಧಿಕ ಲೈಕ್ಸ್​ಗಳು ಬಂದಿದ್ದರೆ, 609 ಬಾರಿ ರೀಟ್ವೀಟ್ ಆಗಿದೆ. ನೆಟ್ಟಿಗರಂತೂ ವಿಧವಿಧದ ಕಾಮೆಂಟ್​ಗಳನ್ನು ಹಾಕಿದ್ದಾರೆ. ಅನೇಕರು ಹಾವನ್ನು ನೋಡಿ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ.

ಉದ್ಯಮಿಯ ಮನೆಯೆದುರು ಬಂದು ಹೆಡೆ ಎತ್ತಿ ನಿಂತ 12 ಅಡಿ ಉದ್ದದ ಕಾಳಿಂಗ ಸರ್ಪ; ಶುಭದಿನವಂತೆ !
ಕಾಳಿಂಗಸರ್ಪ
Follow us
TV9 Web
| Updated By: Lakshmi Hegde

Updated on: Sep 21, 2021 | 6:23 PM

ಕಾಳಿಂಗ ಸರ್ಪವನ್ನು ನೋಡಿದರೆ ಎಂಥವರಿಗಾದರೂ ಭಯವಾಗುತ್ತದೆ.  ಅಂಥದ್ದರಲ್ಲಿ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗಸರ್ಪ ಮನೆಯಂಗಳಕ್ಕೆ ಬಂದು ಹೆಡೆ ಬಿಚ್ಚಿ ನಿಂತರೆ ಏನಾಗಬೇಡ? ಇಂಥದ್ದೊಂದು ಎದೆನಡುಗುವ ಕ್ಷಣವನ್ನು ಎದುರಿಸಿದವರು ಜೋಹೋ ಕಾರ್ಪೋರೇಶನ್​​ನ ಸಿಇಒ, ಉದ್ಯಮಿ ಶ್ರೀಧರ್​ ವೆಂಬು. ಅವರು ಈ ಬಗ್ಗೆ ಟ್ವಿಟರ್​ನಲ್ಲಿ ಎರಡು ಫೋಟೋ ಶೇರ್​ ಮಾಡಿಕೊಂಡಿದ್ದಾರೆ. ಹಾಗೇ, ತಾವು ಇಷ್ಟು ದೊಡ್ಡ ಹಾವನ್ನು ಭೇಟಿ ಮಾಡಿದ ದಿನವನ್ನು ಮಂಗಳಕರವಾದ ದಿನ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.  

ಶ್ರೀಧರ್​ ವೆಂಬು ಅವರು ಸದ್ಯ ತಮಿಳುನಾಡಿನ ದಕ್ಷಿಣದಲ್ಲಿರುವ ತೆಂಕಸಿ ಸಮೀಪದ ಮತ್ತಾಲಂಪರೈ ಎಂಬ ಹಳ್ಳಿಯಲ್ಲಿ ವಾಸವಾಗಿದ್ದಾರೆ. ಇಲ್ಲಿನ ಮನೆಯ ಬಳಿ 12 ಅಡಿ ಉದ್ದದ, ಕಪ್ಪಾದ ಕಾಳಿಂಗಸರ್ಪ ಬಂದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಕಾಳಿಂಗ ಸರ್ಪದ ಫೋಟೋ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಹಿಡಿದುಕೊಂಡಿರುವ ಫೋಟೋವನ್ನು ಶೇರ್​ ಮಾಡಿರುವ ಶ್ರೀಧರ್​, ಅಪರೂಪದ, 12 ಅಡಿ ಉದ್ದದ ಕಾಳಿಂಗಸರ್ಪ ಇಂದು ನಮ್ಮನ್ನು ಭೇಟಿಯಾಗಿತ್ತು. ಬಳಿಕ ಸ್ಥಳೀಯ ಅರಣ್ಯ ಇಲಾಖೆ ರೇಂಜರ್​ಗಳು ಬಂದು ಅದನ್ನು ಹಿಡಿದಿದ್ದಾರೆ. ಹಾಗೇ, ಹತ್ತಿರದ ಗುಡ್ಡಪ್ರದೇಶಕ್ಕೆ ಬಿಟ್ಟಿದ್ದಾರೆ. ನಾನೂ ಧೈರ್ಯದಿಂದ ಅದನ್ನು ಮುಟ್ಟಿದ್ದೇನೆ. ನಿಜಕ್ಕೂ ಹಾವು ಬಂದ ದಿನ ಒಂದು ಮಂಗಳಕರ ದಿನ ಎಂದು ಹೇಳಿದ್ದಾರೆ.

ಶ್ರೀಧರ್​ ವೆಂಬು ಫೋಟೋಕ್ಕೆ 6 ಸಾವಿರಕ್ಕೂ ಅಧಿಕ ಲೈಕ್ಸ್​ಗಳು ಬಂದಿದ್ದರೆ, 609 ಬಾರಿ ರೀಟ್ವೀಟ್ ಆಗಿದೆ. ನೆಟ್ಟಿಗರಂತೂ ವಿಧವಿಧದ ಕಾಮೆಂಟ್​ಗಳನ್ನು ಹಾಕಿದ್ದಾರೆ. ಅನೇಕರು ಹಾವನ್ನು ನೋಡಿ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ. ಅದೆಂತಾ ಅದ್ಭುತ ಹಾವು ಎಂದು ಉದ್ಘಾರರೂಪಕವಾಗಿ ಕಾಮೆಂಟ್​ಗಳನ್ನು ಬರೆದಿದ್ದಲ್ಲದೆ, ಪೋಥಿಗೈ ಗುಡ್ಡಗಳಲ್ಲಿ ಕಾಳಿಂಗ ಸರ್ಪವೂ ಇದೆ ಎಂಬುದು ಗೊತ್ತಿರಲಿಲ್ಲ ಎಂದಿದ್ದಾರೆ. ಈ ಹಾವು ಭಯಂಕರ ರೂಪದಲ್ಲಿದೆ ಎಂದಿದ್ದಲ್ಲೆ, ಹೀಗೆ ಏಕಾಏಕಿ ಎದುರಾದರೆ ಯಾರಿಗಾದರೂ ಗಾಬರಿಯಾಗದೆ ಇರದು ಎಂದೂ ಬರೆದಿದ್ದಾರೆ. ಇದನ್ನೂ ಓದಿ: ಜಾಹೀರಾತಿಗೆ ಮೂರು ಕೋಟಿ ರೂ. ಮಾಸ್ಕ್ ಧರಿಸಿದ್ದ ಊರ್ವಶಿ ರೌಟೆಲಾ ತಮಿಳು ಚಿತ್ರವೊಂದನ್ನು ಒಪ್ಪಿಕೊಂಡಿದ್ದಾಳೆ!

ದೆಹಲಿಯಲ್ಲಿ ಹೊಸ ಮದ್ಯ ನೀತಿ ಅನುಷ್ಠಾನಕ್ಕೆ ಸಿದ್ಧತೆ; ನಗರದಾದ್ಯಂತ ಮದ್ಯದಂಗಡಿಗಳ ಕಪಾಟುಗಳು ಖಾಲಿ ಖಾಲಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ