AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್

Twin Sister’s Marriage : ಚಿಕ್ಕಂದಿನಿಂದಲೂ ಒಟ್ಟಿಗೆ ವಾಸಿಸುತ್ತಿದ್ದ ಈ ಮೂವರು ಪರಸ್ಪರ ಕುಟುಂಬದ ಒಪ್ಪಿಗೆಯ ಮೇರೆಗೆ ಮದುವೆಯಾಗಿದ್ದಾರೆ. ಆದರೆ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್
ರಿಂಕಿ ಪಿಂಕಿಯೊಂದಿಗೆ ಮದುವೆಯಾದ ಅತುಲ್ ಆಠವಡೆ
TV9 Web
| Edited By: |

Updated on: Dec 05, 2022 | 11:53 AM

Share

Viral Video : 19 ವರ್ಷದ ಹುಡುಗಿ 70 ವರ್ಷದ ವ್ಯಕ್ತಿಯನ್ನು ಮದುವೆಯಾದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. 17 ವರ್ಷದ ಶ್ರೀಮಂತ ಮನೆತನದ ಏಕೈಕ ಪುತ್ರಿ  ಕಾರ್​ ಡ್ರೈವರ್​ನನ್ನು ಮದುವೆಯಾದ ವಿಡಿಯೋ ವೈರಲ್ ಆಗಿದ್ದನ್ನೂ ನೋಡಿದ್ದೀರಿ. 22 ವರ್ಷದ ಯುವಕ 65 ವರ್ಷದ ಮಹಿಳೆಯನ್ನು ಮದುವೆಯಾದ ಸುದ್ದಿ ಓದಿದ್ದೀರಿ. ಇದೀಗ ವೈರಲ್ ಆಗಿರುವ ವಿಡಿಯೋ ಮುಂಬೈ ಮೂಲದ್ದು. ಮಹಾರಾಷ್ಟ್ರದ ಸೊಲ್ಲಾಪುರದ ವರನೊಬ್ಬ ಮುಂಬೈನ ಅವಳಿ ಸಹೋದರಿಯರನ್ನು ಶುಕ್ರವಾರದಂದು ಮದುವೆಯಾಗಿದ್ದಾನೆ. ನೆಟ್ಟಿಗರೆಲ್ಲ ಹುಬ್ಬೇರಿಸಿ ಈ ಬಗ್ಗೆ ಚರ್ಚಿಸುತ್ತಿದ್ದಾರೆ.

ರಿಂಕಿ ಮತ್ತು ಪಿಂಕಿ ಅವಳಿ ಸಹೋದರಿಯರು ಮುಂಬೈ ಮೂಲದವರಾಗಿದ್ದು ಸಾಫ್ಟ್​ವೇರ್ ಎಂಜಿನಿಯರ್ ಆಗಿದ್ದಾರೆ. ನೋಟದಲ್ಲಿಯೂ ತದ್ರೂಪಿಗಳು. ಇವರಿಬ್ಬರನ್ನೂ ಮದುವೆಯಾದ ವರನ ಹೆಸರು ಅತುಲ್​ ಅವಠಡೆ. ಈ ಮದುವೆಯ ವಿಡಿಯೋ ಆನ್​ಲೈನ್​ನಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರ ಗಮನಕ್ಕೆ ಬಂದಿದೆ, ಹಿಂದೂ ವಿವಾಹ ಕಾಯ್ದೆಗೆ ವಿರುದ್ಧವಾಗಿ ಈ ತ್ರಿಕೋನ ಮದುವೆ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆದರೆ ಪಿಂಕಿ-ರಿಂಕಿಯ ಕುಟುಂಬ ಮತ್ತು ವರನ ಕುಟುಂಬ ಪರಸ್ಪರ ಒಪ್ಪಿಗೆಯ ಮೇಲೆ ಈ ವಿವಾಹ ನಡೆದಿದೆ. ಕಾರಣ, ಈ ಸಹೋದರಿಯರು ಮತ್ತು ಅತುಲ್​ ಚಿಕ್ಕಂದಿನಿಂದಲೂ ಒಂದೇ ಕಡೆ ವಾಸಿಸುತ್ತಿದ್ದರು ಕ್ರಮೇಣ ಮೂವರು ಸೇರಿ ಮದುವೆಯ ನಿರ್ಧಾರಕ್ಕೆ ಬಂದರು ಎಂದು ವರದಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಕಾನೂನು ಮತ್ತು ನೈತಿಕ ಜವಾಬ್ದಾರಿಯ ಬಗ್ಗೆ ಪ್ರಶ್ನಿಸಿದ್ದಾರೆ.

ಸೊಲ್ಲಾಪುರ ಪೊಲೀಸರು ಅತುಲ್​ನ ವಿರುದ್ಧ ಐಪಿಸಿ ಸೆಕ್ಷನ್​ 494ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!